ಕಲಬುರ್ಗಿ ವಿರೋಧಿಗಳ ವಿಚಾರಣೆ ಆರಂಭಿಸಿದ ಸಿಐಡಿ
ಬೆಂಗಳೂರು, ನವೆಂಬರ್ 19 : ಹಿರಿಯ ಸಂಶೋಧಕ ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಕಲಬುರ್ಗಿ ಅವರನ್ನು ವಿರೋಧಿಸುತ್ತಿದ್ದವರ ವಿಚಾರಣೆ ಆರಂಭಿಸಿದ್ದಾರೆ. 2015ರ ಆಗಸ್ಟ್ 30ರಂದು ಕಲಬುರ್ಗಿ ಅವರ ಹತ್ಯೆ ನಡೆದಿತ್ತು.
ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಕಲಬುರ್ಗಿ ಅವರನ್ನು ವಿರೋಧಿಸುತ್ತಿದ್ದವರು ಮತ್ತು ಸೈದ್ದಾಂತಿಕ ಭಿನ್ನಾಭಿಪ್ರಾಯ ಹೊಂದಿದ್ದ ವ್ಯಕ್ತಿಗಳ ವಿಚಾರಣೆ ನಡೆಸುತ್ತಿದ್ದಾರೆ. ಈಗಾಗಲೇ ಇಬ್ಬರ ವಿಚಾರಣೆ ಪೂರ್ಣಗೊಂಡಿದೆ. [ಕಲಬುರ್ಗಿ ಹತ್ಯೆಯ ತನಿಖೆ ವಿಳಂಬಕ್ಕೆ ಯಾರು ಕಾರಣ?]

ಸಿಐಡಿ ಪೊಲೀಸರು ಕನ್ನಡ ಪ್ರಾಧ್ಯಪಕ ಡಾ.ಎಸ್.ಎಸ್.ಅಂಗಡಿ ಅವರನ್ನು 5 ಗಂಟೆಗಳ ಕಾಲ ವಿಚಾರಣೆ ಧಾರವಾಡದ ಅವರ ಮನೆಯಲ್ಲಿ ವಿಚಾರಣೆ ನಡೆಸಿದ್ದಾರೆ. ಕಲಬುರ್ಗಿ ಅವರ ಸಹೋದ್ಯೋಗಿಯಾಗಿದ್ದ ಮತ್ತೊಬ್ಬರನ್ನು ವಿಚಾರಣೆ ನಡೆಸಿ ಹತ್ಯೆ ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದಾರೆ. [ಕಲಬುರ್ಗಿ ಹತ್ಯೆಯಾಗಿ 2 ತಿಂಗಳು : ಎತ್ತ ಸಾಗಿದೆ ತನಿಖೆ?]
ಹಲವರ ಪಟ್ಟಿ ರೆಡಿ : ಕಲಬುರ್ಗಿ ಅವರ ಹತ್ಯೆಗೆ ಕಾರಣವೇನಿರಬಹುದು? ಎಂದು ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ನಡೆಸಬೇಕಾದ ಹಲವು ಗಣ್ಯರ ಪಟ್ಟಿಯನ್ನು ಅಧಿಕಾರಿಗಳು ಸಿದ್ಧಪಡಿಸಿಕೊಂಡಿದ್ದು, ಅವರ ಹೆಸರುಗಳನ್ನು ಬಹಿರಂಗಗೊಳಿಸಿಲ್ಲ. [ಕಲಬುರ್ಗಿ ಹತ್ಯೆ ಸುಳಿವು ಕೊಟ್ಟವರಿಗೆ 5 ಲಕ್ಷ ಬಹುಮಾನ]
ಮತ್ತೊಂದು ಆಯಾಮದ ತನಿಖೆ : ನರೇಂದ್ರ ದಾಬೋಲ್ಕರ್, ಗೋವಿಂದ ಪನ್ಸಾರೆ ಅವರ ಹತ್ಯೆ ಮಾಡಿರುವವರೇ ಕಲಬುರ್ಗಿ ಅವರನ್ನು ಹತ್ಯೆ ಮಾಡಿರಬಹುದು ಎಂದು ಶಂಕಿಸಿರುವ ಸಿಐಡಿ ಅಧಿಕಾರಿಗಳು ಆ ಆಯಾಮದಲ್ಲಿಯೂ ತನಿಖೆ ನಡೆಸುತ್ತಿದ್ದಾರೆ.
ಧಾರವಾಡದ ಕಲ್ಯಾಣ ನಗರದಲ್ಲಿನ ಎಂ.ಎಂ.ಕಲಬುರ್ಗಿ ಅವರ ನಿವಾಸಕ್ಕೆ ವಿದ್ಯಾರ್ಥಿಗಳ ಸೋಗಿನಲ್ಲಿ ಆಗಸ್ಟ್ 30ರ ಬೆಳಗ್ಗೆ 8.40ರ ಸುಮಾರಿಗೆ ಬಂದ ಇಬ್ಬರು ಕಲಬುರ್ಗಿ ಅವರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು. ಈ ಹತ್ಯೆ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದ್ದು, ಹಂತಕರ ಸುಳಿವು ಇನ್ನೂ ಪತ್ತೆಯಾಗಿಲ್ಲ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications