ಜೆಡಿಎಸ್ ಜತೆಗಿನ ಮೈತ್ರಿ ಹೇಳಿಕೆಗಳಿಂದ ಅಬಾಧಿತ: ಎಚ್ಕೆ ಪಾಟೀಲ್
Recommended Video
ಹುಬ್ಬಳ್ಳಿ, ಮೇ 14: ಮೈತ್ರಿ ಸರಕಾರ ಹಾಗೂ ಒಪ್ಪಂದಗಳ ಬಗ್ಗೆ ಅಭಿಪ್ರಾಯ ನೀಡುವುದಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರ ನೇತೃತ್ವದ ಸಮನ್ವಯ ಸಮಿತಿ ರಚನೆ ಆಗಿದೆ. ಆ ಸಮಿತಿ ಸದಸ್ಯರನ್ನು ಹೊರತುಪಡಿಸಿ ಇತರೆ ನಾಯಕರುಗಳು ನೀಡುವ ಹೇಳಿಕೆಗಳು ಕೇವಲ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ಎಚ್ ಕೆ ಪಾಟೀಲ್ ಹೇಳಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಹುಬ್ಬಳ್ಳಿಯಲ್ಲಿ ಸಿಎಂ ಕುಮಾರಸ್ವಾಮಿ ಅವರ ಜೊತೆ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ಹೊರಗಿಡಲು ಈ ಮೈತ್ರಿಯನ್ನು ಮಾಡಿಕೊಳ್ಳಲಾಗಿದೆ ಎಂದರು. ಇದು ವಿಶೇಷ ಮೈತ್ರಿ ಸರಕಾರವಾಗಿದ್ದು 5 ವರ್ಷ ಸುಭದ್ರವಾಗಿ ನಡೆಯಲಿದೆ. ಆದರೆ, ಇತರೆ ನಾಯಕರುಗಳು ಈ ರೀತಿ ನೀಡುವ ಹೇಳಿಕೆಗಳು ರಾಜ್ಯದ ರಾಜಕಾರಣಕ್ಕೆ ಹಿತಕರವಾದುದ್ದಲ್ಲ. ಸಮ್ಮಿಶ್ರ ಸರಕಾರಕ್ಕೆ ಮಾರಕವಾಗುವಂಥ ಹೇಳಿಕೆಯನ್ನು ನೀಡುವುದು ಸರಿಯಲ್ಲ ಎಂದು ಹೇಳಿದರು.

ಕಾಂಗ್ರೆಸ್ ಸರಕಾರ, ಸಿದ್ದರಾಮಯ್ಯ ಹಾಗೂ ಎಚ್ ಕೆ ಪಾಟೀಲ್ ಏನು ಕೆಲಸ ಮಾಡಿದ್ದಾರೆ ಎನ್ನುವುದು ತರೆದ ಪುಸ್ತಕವಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜೊತೆಯಲ್ಲಿ ಉತ್ತರ ಕರ್ನಾಟಕದ ಕೆಲವು ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದ್ದೇನೆ. ಕುಂದಗೋಳ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಅವರು ಪ್ರಚಾರದಲ್ಲಿ ಪಾಲ್ಗೊಳ್ಳಿದ್ದಾರೆ ಎಂದರು.












Click it and Unblock the Notifications