ಶಿವಳ್ಳಿ ಸಾವಿಗೆ ಮೈತ್ರಿ ಸರ್ಕಾರವೇ ಕಾರಣ: ಪೇಚಿಗೆ ಸಿಲುಕಿಸಿದ ಶ್ರೀರಾಮುಲು ಹೇಳಿಕೆ
Recommended Video
ಕುಂದಗೋಳ, ಮೇ 09: ಕುಂದಗೋಳ ಕ್ಷೇತ್ರದ ಮಾಜಿ ಶಾಸಕ, ದಿವಂಗತ ಸಿ ಎಸ್ ಶಿವಳ್ಳಿ ಅವರ ಸಾವಿಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವೇ ಕಾರಣ ಎನ್ನುವ ಮೂಲಕ ಶಾಸಕ ಬಿ ಶ್ರೀರಾಮುಲು ಬಿಜೆಪಿಯನ್ನು ಪೇಚಿಗೆ ಸಿಲುಕಿಸಿದ್ದಾರೆ.
ಕರ್ನಾಟಕ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿದ್ದ ಸಿಎಸ್ ಶಿವಳ್ಳಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಕುಂದಗೋಳದಲ್ಲಿ ಮೇ 19 ರಂದು ಉಪಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಅವರು ಮಾಧ್ಯಮಗೊಳಿಂದಿಗೆ ಮಾತನಾಡುತ್ತಿದ್ದರು.
"ನನಗೆ ಸಿಎಸ್ ಶಿವಳ್ಳಿ ಅವರ ಬಗ್ಗೆ ಅನುಕಂಪವಿದೆ. ಅವರು ಈಗಿಲ್ಲ. ಆದ್ದರಿಂದ ಅವರ ಬಗ್ಗೆ ನಾನು ಮಾತನಾಡುದಕ್ಕೆ ಇಷ್ಟಪಡುವುದಿಲ್ಲ. ಆದರೆ ಅವರ ಸಾವಿಗೆ ಈ ಕಾಂಗ್ರೆಸ್ ಮೈತ್ರಿ ಸರ್ಕಾರವೇ ಕಾರಣ ಎಂಬುದು ಸತ್ಯ. ಅವರಿಗೆ ಮೈತ್ರಿ ಸರಕಾರದಲ್ಲಿ ನೀಡಲಾದ ಕಿರುಕುಳ ಮತ್ತು ಹೇರಿದ ಒತ್ತಡದಿಂದಲೇ ಅವರು ಹೃದಯಾಘಾತದಿಂದ ಮೃತರಾದರು" ಎಂದು ಶ್ರೀರಾಮುಲು ಹೇಳಿದ್ದಾರೆ.

ಕಳೆದ ಮಾರ್ಚ್ 22 ರಂದು ಹೃದಯಾಘಾತದಿಂದ ಮೃತರಾದ 56 ವರ್ಷ ವಯಸ್ಸಿನ ಶಿವಳ್ಳಿ ಅವರ ನಂತರ ಈ ಕ್ಷೇತ್ರದ ಅಭ್ಯರ್ಥಿಯಾಗಿ ಅವರ ಪತ್ನಿ ಕುಸುಮಾವತಿ ಶಿವಳ್ಳಿ ಅವರು ಚುನಾವಣೆ ಸ್ಪರ್ಧಿಸಿದ್ದಾರೆ. ಬಿಜೆಪಿಯಿಂದ ಎಸ್.ಐ.ಚಿಕ್ಕನಗೌಡ ಅವರು ಕಣದಲ್ಲಿದ್ದಾರೆ. ಮೇ 23 ರಂದು ಫಲಿತಾಂಶ ಹೊರಬೀಳಲಿದೆ.
ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಅವರು ಮಾತಿನ ಓಘದಲ್ಲಿ ಹೇಳಿದ ಈ ಹೇಳಿಕೆ ಈಗ ಸಾಕಷ್ಟು ವಿವಾದ ಸೃಷ್ಟಿಸಿದ್ದು, ಅವರ ವಿರುದ್ಧ ದೂರು ನೀಡಲು ಕಾಂಗ್ರೆಸ್ ಮುಂದಾಗಿದೆ.












Click it and Unblock the Notifications