Santosh Lad: ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಬಗ್ಗೆ ಸಂತೋಷ್ ಲಾಡ್ ಹೇಳಿದ್ದೇನು?
ಧಾರವಾಡ, ಏಪ್ರಿಲ್ 08: ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶ್ರೀ ಶಿರಹಟ್ಟಿ ಮಠದ ದಿಂಗಾಲೇಶ್ವರ ಸ್ವಾಮೀಜಿ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಪ್ರಕಟಿಸಿದ್ದಾರೆ. ಈ ಕುರಿತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಪ್ರತಿಕ್ರಿಯಿಸಿದ್ದಾರೆ.
ಧಾರವಾಡದಲ್ಲಿ ಸೋಮವಾರ ಪ್ರತಿಕ್ರಿಯಿಸಿದ ಸಂತೋಷ್ ಲಾಡ್, ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಅವರು ಕಣಕ್ಕೆ ಇಳಿಯಲಿ. ನಾವು ಅವರ ಅಶೀರ್ವಾದದೊಂದಿಗೆ ಚುನಾವಣೆಗೆ ಸ್ಪರ್ಧೆ ಮಾಡುತ್ತೇವೆ. ಅವರು ಧಾರವಾಡ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದರೂ ನಾವು ಆಶೀರ್ವಾದ ಕೋರುತ್ತೇವೆ. ದಿಂಗಾಲೇಶ್ವರ ಸ್ವಾಮೀಜಿ ಒಂದು ಸಮಾಜಕ್ಕೆ ಸೀಮಿತವಾದವರಲ್ಲ ಎಂದು ತಿಳಿಸಿದರು.

ಇದೇ ಮೊದಲ ಸಲ ಇಂತಹ ಪ್ರಯೋಗ
ದಿಂಗಾಲೇಶ್ವರ ಶ್ರಿಗಳಿಗೆ ಧಾರವಾಡ ಜಿಲ್ಲೆಯಲ್ಲೇ ಲಕ್ಷಾಂತರ ಭಕ್ತರಿದ್ದಾರೆ. ಚೆನ್ನಾಗಿ ಮಾತನಾಡುವ ಶಕ್ತಿ ಅವರಿಗಿದೆ.
ಇದು ಮೊದಲ ಪ್ರಯೋಗ. ಇದು ಯಾವ ರೀತಿ ಫಲಿತಾಂಶ ಕೊಡುತ್ತದೆಯೋ ಹೇಳಲಾಗದು. ಇದು ಮೊದಲ ಸಲ ಈ ರೀತಿಯ ಪ್ರಯೋಗ ಆಗುತ್ತಿಗೆ ಎಂದು ಅವರು ಹೇಳಿದರು.
ಲಾಭ-ನಷ್ಟ ಲೆಕ್ಕಾಚಾರ ಮಾಡಲು ಆಗದು
ಓರ್ವ ಪ್ರಭಾವಿ ಸ್ವಾಮೀಜಿ ಪಕ್ಷೇತರವಾಗಿ ಕಣಕ್ಕೆ ಇಳಿದಿದ್ದು ಇದೇ ಮೊದಲ ಬಾರಿಗೆ. ದಿಂಗಾಲೇಶ್ವರ ಸ್ವಾಮೀಗಳದ್ದು ಸೆಕ್ಯೂಲರ್ ಮಠ. ಎಲ್ಲ ಸಮಾಜದವರು ಅವರ ಬೆಂಬಲಿಗರಿದ್ದಾರೆ. ಅವರು ಯುನಿವರ್ಸಲ್ ಸ್ವಾಮೀಜಿ ಲಿಂಗಾಯತ, ಹಿಂದೂ, ಮುಸ್ಲಿಂ, ಸಿಖ್ ಎಲ್ಲ ಸಮಾಜದವರು ಅವರ ಅನುಯಾಯಿ ಇದಾರೆ. ಯಾರಿಗೆ ಲಾಭ-ನಷ್ಟ ಲೆಕ್ಕಾಚಾರ ಮಾಡಲು ಆಗದು. ಆದರೆ ಬಿಜೆಪಿಗೆ ಇದು ಹಿನ್ನಡೆ ಆಗಿಯೇ ಆಗುತ್ತದೆ. ಯಾಕೆಂದರೆ ಜನ ಅವರಿಗೆ ಬೇಸತ್ತು ಹೋಗಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ವಿರುದ್ಧ ಸಚಿವರ ವಾಗ್ದಾಳಿ
ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳು ಮೊದಲು ಎಲ್ಕೆ ಅಡ್ವಾಣಿ, ಅಟಲ್ ಬಿಹಾರಿ ವಾಜಪೇಯಿ ಅವರ ಬಗ್ಗೆ ಮಾತನಾಡುತ್ತಿದ್ದರು. ಈಗ ಅವರನ್ನು ಮರೆತಿದ್ದಾರೆ. ಬಿಜೆಪಿಯವರು ಯಾರದ್ದು ನಡೆಯುತ್ತೋ ಅವರ ಪಿಕ್ಚರ ಹಿಡಿದುಕೊಂಡು ಹೋಗಿ ಬಿಡುತ್ತಾರೆ ಎಂದು ಅವರು ವಾಗ್ದಾಳಿ ನಡೆಸಿದರು.
ಸದ್ಯ ಮತದಾರರು ಸದರಿ ಲೋಕಸಭಾ ಚುನಾವಣೆಯಲ್ಲಿ ಸರಿಯಾಗಿ ಪಾಠ ಕಲಿಸುತ್ತಾರೆ. ದಿಂಗಾಲೇಶ್ವರ ಸ್ವಾಮೀಜಿಗಳ ಚುನಾವಣೆ ಸ್ಪರ್ಧೆಯ ಪರಿಣಾಮ ಫಲಿತಾಂಶದ ದಿನವೇ ಗೊತ್ತಾಗುತ್ತದೆ. ಇಂತಹ ಪ್ರಯೋಗದ ಬಗ್ಗೆ ನಮಗೆ ಅನುಭವವೂ ಇಲ್ಲ. ಲಿಂಗಾಯತರೆಲ್ಲ ಬಿಜೆಪಿಯನ್ನು ಬೆಂಬಲಿಸುತ್ತಾರೆ ಎಂದು ಹೇಳಲಾಗದು ಎಂದು ಮಾರ್ಮಿಕವಾಗಿ ಹೇಳಿದರು.
ಶ್ರೀಗಳನ್ನು ಅಂದು ಭೇಟಿ ಆಗಲಿಲ್ಲ
ಶಿರಹಟ್ಟಿ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಭೇಟಿ ವಿಚಾರ, ನಾವು ಪ್ರಚಾರ ಶುರು ಮಾಡಿದಾಗ ಅವರು ರಾಜಕೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದರು. ಅವರು ಚರ್ಚೆಗಳನ್ನು ನಡೆಸಿದ್ದರು. ಆಗಿನ್ನು ಶ್ರೀಗಳು ರಾಜಕೀಯ ಪ್ರವೇಶ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿರಲಿಲ್ಲ.
ಇದೇ ವೇಳೆಗೆ ಕಾಂಗ್ರೆಸ್ನಿಂದ ನಾವು ವಿನೋದ್ ಅಸೂಟಿ ಅವರ ಪರ ಪ್ರಚಾರ ಶುರುಮಾಡಿಕೊಂಡಿದ್ದೇವೆ. ಆಗ ಅವರನ್ನು ಭೇಟಿ ಮಾಡಲು ಆಗಲಿಲ್ಲ. ಆ ವಿಷಯದಲ್ಲಿ ನಾವು ಅಸಹಾಯಕರಾಗಿ ಬಿಟ್ಟಿದ್ದೇವು. ಆದರೆ ನಾವು ಸ್ವಾಮೀಜಿಗಳ ಭಾವನೆ ಅರ್ಥ ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications