ಕಲಬುರ್ಗಿ ಹತ್ಯೆಯಾಗಿ 2 ತಿಂಗಳು : ಎತ್ತ ಸಾಗಿದೆ ತನಿಖೆ?
ಧಾರವಾಡ, ಅಕ್ಟೋಬರ್ 30 : ಹಿರಿಯ ಸಂಶೋಧಕ ಎಂ.ಎಂ.ಕಲಬುರ್ಗಿ ಅವರ ಹತ್ಯೆಯ ತನಿಖೆಯ ಬಗ್ಗೆ ನಿಖರವಾದ ಯಾವುದೇ ಮಾಹಿತಿಗಳು ಇಲ್ಲಿಯ ತನಕ ಲಭ್ಯವಾಗಿಲ್ಲ. ಬೆಳಗಾವಿಯಲ್ಲಿ ಸಿಕ್ಕ ಅಪರಿಚಿತ ಶವ ರುದ್ರ ಪಾಟೀಲ್ನದ್ದೇ ಎಂಬುದಕ್ಕೆ ಸೂಕ್ತವಾದ ಆಧಾರಗಳು ದೊರಕಿಲ್ಲ.
ಧಾರವಾಡದ ಕಲ್ಯಾಣ ನಗರದಲ್ಲಿನ ಎಂ.ಎಂ.ಕಲಬುರ್ಗಿ ಅವರ ನಿವಾಸಕ್ಕೆ ವಿದ್ಯಾರ್ಥಿಗಳ ಸೋಗಿನಲ್ಲಿ ಆಗಸ್ಟ್ 30ರ ಬೆಳಗ್ಗೆ 8.40ರ ಸುಮಾರಿಗೆ ಬಂದ ಇಬ್ಬರು ಕಲಬುರ್ಗಿ ಅವರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು. ಹತ್ಯೆ ನಡೆದು ಎರಡು ತಿಂಗಳು ಕಳೆದರೂ ಹಂತಕರ ಸುಳಿವು ಪತ್ತೆಯಾಗಿಲ್ಲ. [ಕಲಬುರ್ಗಿ ಹತ್ಯೆ ಸುಳಿವು ಕೊಟ್ಟವರಿಗೆ 5 ಲಕ್ಷ ಬಹುಮಾನ]

ಅಕ್ಟೋಬರ್ 28ರಂದು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಮಾಣಿಕವಾಡಿ ಗ್ರಾಮದಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಈ ಶವ ಕಲಬುರ್ಗಿ ಹತ್ಯೆಯ ಮಾಸ್ಟರ್ ಮೈಂಡ್ ಎಂದು ಆರೋಪಿಸಲಾದ ರುದ್ರ ಪಾಟೀಲ್ ಅವರ ರೇಖಾ ಚಿತ್ರಕ್ಕೆ ಹೋಲಿಕೆಯಾಗುತ್ತಿತ್ತು. [ಕಲಬುರ್ಗಿ ಹತ್ಯೆಯ ಕುರಿತು ಸಿಐಡಿ ತನಿಖೆ]
ಆದರೆ, ಈ ಶವ ರುದ್ರ ಪಾಟೀಲ್ ಅವನದ್ದೇ ಎಂಬುದಕ್ಕೆ ಖಚಿತವಾದ ಆಧಾರಗಳು ಸಿಕ್ಕಿಲ್ಲ. ಅಪರಿಚಿತ ಶವವನ್ನು ರುದ್ರ ಪಾಟೀಲ್ ಪೋಷಕರಿಗೆ ತೋರಿಸಿದಾಗ 10 ವರ್ಷಗಳಿಂದ ಮಗನನ್ನು ಭೇಟಿ ಮಾಡಿಲ್ಲ ಎಂದು ಅವರು ಹೇಳಿದ್ದಾರೆ. ಆದ್ದರಿಂದ ಶವ ರುದ್ರ ಪಾಟೀಲ್ನದ್ದೇ ಎಂದು ಖಚಿತವಾಗಿ ಹೇಳಲಾಗುತ್ತಿಲ್ಲ. [ಕಲಬುರ್ಗಿ ಹತ್ಯೆ: ರಾಜ್ಯ ಪೊಲೀಸರ ಹಿನ್ನಡೆಗೆ ಕಾರಣ ಏನಿರಬಹುದು?]
ನರೇಂದ್ರ ದಾಬೋಲ್ಕರ್, ಗೋವಿಂದ ಪನ್ಸಾರೆ ಹತ್ಯೆಯನ್ನು ಮಾಡಿದ ಗುಂಪು ಕಲಬುರ್ಗಿ ಅವರನ್ನು ಹತ್ಯೆ ಮಾಡಿದೆ ಎಂಬುದನ್ನು ಬಿಟ್ಟರೆ ಮಹತ್ವದ ಸುಳಿವುಗಳು ಪೊಲೀಸರಿಗೆ ಲಭ್ಯವಾಗಿಲ್ಲ. ಬೆಳಗಾವಿಯಲ್ಲಿ ಸಿಕ್ಕ ಅಪರಿಚಿತ ಶವದ ಬಗ್ಗೆ ಮಾಹಿತಿ ಸಂಗ್ರಹಣೆ ಮಾಡಲು ಕರ್ನಾಟಕ ಸಿಐಡಿ ತಂಡ ಮತ್ತು ಮಹಾರಾಷ್ಟ್ರದ ಪೊಲೀಸರು ಬೆಳಗಾವಿಗೆ ತೆರಳಿದ್ದಾರೆ.
ಯಾವುದೇ ಕರೆ ಬಂದಿಲ್ಲ : ಕಲಬುರ್ಗಿ ಅವರ ಹತ್ಯೆಯಾದ ನಂತರ ಪೊಲೀಸರು ಶಂಕಿತ ಆರೋಪಿಗಳ ರೇಖಾ ಚಿತ್ರಗಳನ್ನು ಬಿಡುಗಡೆ ಮಾಡಿದ್ದರು. ಆದರೆ, ರೇಖಾ ಚಿತ್ರದಲ್ಲಿರುವ ವ್ಯಕ್ತಿಗಳ ಕುರಿತು ಇದುವರೆಗೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ, ಯಾವುದೇ ಕರೆಗಳು ಬಂದಿಲ್ಲ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications