ಕಲಬುರ್ಗಿ ಹತ್ಯೆಯಾಗಿ 2 ತಿಂಗಳು : ಎತ್ತ ಸಾಗಿದೆ ತನಿಖೆ?
ಧಾರವಾಡ, ಅಕ್ಟೋಬರ್ 30 : ಹಿರಿಯ ಸಂಶೋಧಕ ಎಂ.ಎಂ.ಕಲಬುರ್ಗಿ ಅವರ ಹತ್ಯೆಯ ತನಿಖೆಯ ಬಗ್ಗೆ ನಿಖರವಾದ ಯಾವುದೇ ಮಾಹಿತಿಗಳು ಇಲ್ಲಿಯ ತನಕ ಲಭ್ಯವಾಗಿಲ್ಲ. ಬೆಳಗಾವಿಯಲ್ಲಿ ಸಿಕ್ಕ ಅಪರಿಚಿತ ಶವ ರುದ್ರ ಪಾಟೀಲ್ನದ್ದೇ ಎಂಬುದಕ್ಕೆ ಸೂಕ್ತವಾದ ಆಧಾರಗಳು ದೊರಕಿಲ್ಲ.
ಧಾರವಾಡದ ಕಲ್ಯಾಣ ನಗರದಲ್ಲಿನ ಎಂ.ಎಂ.ಕಲಬುರ್ಗಿ ಅವರ ನಿವಾಸಕ್ಕೆ ವಿದ್ಯಾರ್ಥಿಗಳ ಸೋಗಿನಲ್ಲಿ ಆಗಸ್ಟ್ 30ರ ಬೆಳಗ್ಗೆ 8.40ರ ಸುಮಾರಿಗೆ ಬಂದ ಇಬ್ಬರು ಕಲಬುರ್ಗಿ ಅವರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು. ಹತ್ಯೆ ನಡೆದು ಎರಡು ತಿಂಗಳು ಕಳೆದರೂ ಹಂತಕರ ಸುಳಿವು ಪತ್ತೆಯಾಗಿಲ್ಲ. [ಕಲಬುರ್ಗಿ ಹತ್ಯೆ ಸುಳಿವು ಕೊಟ್ಟವರಿಗೆ 5 ಲಕ್ಷ ಬಹುಮಾನ]

ಅಕ್ಟೋಬರ್ 28ರಂದು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಮಾಣಿಕವಾಡಿ ಗ್ರಾಮದಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಈ ಶವ ಕಲಬುರ್ಗಿ ಹತ್ಯೆಯ ಮಾಸ್ಟರ್ ಮೈಂಡ್ ಎಂದು ಆರೋಪಿಸಲಾದ ರುದ್ರ ಪಾಟೀಲ್ ಅವರ ರೇಖಾ ಚಿತ್ರಕ್ಕೆ ಹೋಲಿಕೆಯಾಗುತ್ತಿತ್ತು. [ಕಲಬುರ್ಗಿ ಹತ್ಯೆಯ ಕುರಿತು ಸಿಐಡಿ ತನಿಖೆ]
ಆದರೆ, ಈ ಶವ ರುದ್ರ ಪಾಟೀಲ್ ಅವನದ್ದೇ ಎಂಬುದಕ್ಕೆ ಖಚಿತವಾದ ಆಧಾರಗಳು ಸಿಕ್ಕಿಲ್ಲ. ಅಪರಿಚಿತ ಶವವನ್ನು ರುದ್ರ ಪಾಟೀಲ್ ಪೋಷಕರಿಗೆ ತೋರಿಸಿದಾಗ 10 ವರ್ಷಗಳಿಂದ ಮಗನನ್ನು ಭೇಟಿ ಮಾಡಿಲ್ಲ ಎಂದು ಅವರು ಹೇಳಿದ್ದಾರೆ. ಆದ್ದರಿಂದ ಶವ ರುದ್ರ ಪಾಟೀಲ್ನದ್ದೇ ಎಂದು ಖಚಿತವಾಗಿ ಹೇಳಲಾಗುತ್ತಿಲ್ಲ. [ಕಲಬುರ್ಗಿ ಹತ್ಯೆ: ರಾಜ್ಯ ಪೊಲೀಸರ ಹಿನ್ನಡೆಗೆ ಕಾರಣ ಏನಿರಬಹುದು?]
ನರೇಂದ್ರ ದಾಬೋಲ್ಕರ್, ಗೋವಿಂದ ಪನ್ಸಾರೆ ಹತ್ಯೆಯನ್ನು ಮಾಡಿದ ಗುಂಪು ಕಲಬುರ್ಗಿ ಅವರನ್ನು ಹತ್ಯೆ ಮಾಡಿದೆ ಎಂಬುದನ್ನು ಬಿಟ್ಟರೆ ಮಹತ್ವದ ಸುಳಿವುಗಳು ಪೊಲೀಸರಿಗೆ ಲಭ್ಯವಾಗಿಲ್ಲ. ಬೆಳಗಾವಿಯಲ್ಲಿ ಸಿಕ್ಕ ಅಪರಿಚಿತ ಶವದ ಬಗ್ಗೆ ಮಾಹಿತಿ ಸಂಗ್ರಹಣೆ ಮಾಡಲು ಕರ್ನಾಟಕ ಸಿಐಡಿ ತಂಡ ಮತ್ತು ಮಹಾರಾಷ್ಟ್ರದ ಪೊಲೀಸರು ಬೆಳಗಾವಿಗೆ ತೆರಳಿದ್ದಾರೆ.
ಯಾವುದೇ ಕರೆ ಬಂದಿಲ್ಲ : ಕಲಬುರ್ಗಿ ಅವರ ಹತ್ಯೆಯಾದ ನಂತರ ಪೊಲೀಸರು ಶಂಕಿತ ಆರೋಪಿಗಳ ರೇಖಾ ಚಿತ್ರಗಳನ್ನು ಬಿಡುಗಡೆ ಮಾಡಿದ್ದರು. ಆದರೆ, ರೇಖಾ ಚಿತ್ರದಲ್ಲಿರುವ ವ್ಯಕ್ತಿಗಳ ಕುರಿತು ಇದುವರೆಗೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ, ಯಾವುದೇ ಕರೆಗಳು ಬಂದಿಲ್ಲ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications