ಬೇಂದ್ರೆ ಅಜ್ಜನ ಗಂಗಾವತರಣ ಗೀತೆಗೆ 72ರ ಯೌವನ
ಅಂಬಿಕಾತನಯದತ್ತರ 'ಗಂಗಾವತರಣ' ಗೀತೆಗೆ 72 ವರ್ಷ ಸಂದಿದೆ. ಈ ಕವಿತೆಯನ್ನು ಬೇಂದ್ರೆಯವರು 1942ರಲ್ಲಿ ಆಷಾಢ ಏಕಾದಶಿಯ ದಿನ ಶುಕ್ರವಾರ ಜುಲೈ 24ರಂದು ಬರೆದು ಹಾಡಿದರೆಂಬ ದಾಖಲೆಗಳಿವೆ. 2014ರಲ್ಲಿ ಜುಲೈ 8ರಂದು ಆಷಾಢ ಏಕಾದಶಿ.
ಈ ಸಂದರ್ಭದಲ್ಲಿ ಮೊತ್ತಮೊದಲ ಬಾರಿಗೆ "ಇಳಿದು ಬಾ ತಾಯಿ..." ಹಾಡು, ಒಂದೇ ಯುಟ್ಯೂಬ್ ಲಿಂಕ್ನಲ್ಲಿ, ಕನ್ನಡದ ಇಬ್ಬರು ಮೇರುಕೀರ್ತಿಯ ಗಾಯಕರು ಸರದಿಯಂತೆ ಹಾಡಿದ ಧ್ವನಿಮುದ್ರಣಗಳ ಜೋಡಣೆ ಮಾಡಿ ಒನ್ ಇಂಡಿಯಾ ಕನ್ನಡದ ಓದುಗರಾದ ಶ್ರೀವತ್ಸ ಜೋಶಿ ಅವರು ನೀಡಿದ್ದಾರೆ.
ವರಕವಿ ಬೇಂದ್ರೆ ಅವರ ಇದೇ ಗೀತೆ ಸ್ವಲ್ಪ ಬದಲಾವಣೆಯೊಂದಿಗೆ 1970 ರಲ್ಲಿ 'ಅರಿಶಿನ ಕುಂಕುಮ' ಕನ್ನಡ ಚಿತ್ರಕ್ಕೆ ಬಳಸಿಕೊಳ್ಳಲಾಗಿತ್ತು. ಸಂಗೀತ ಸಾಮ್ರಾಟ್ ವಿಜಯಭಾಸ್ಕರ್ ಅವರ ರಾಗ ಸಂಯೋಜನೆಯಲ್ಲಿಪಿಬಿ ಶ್ರೀನಿವಾಸ್ ಅವರ ಕಂಚಿನ ಕಂಠದಲ್ಲಿ ಬಂದ ಹಾಡು ಇಂದಿಗೂ ಕೇಳುಗರಲ್ಲಿ ಮಿಂಚಿನ ಸಂಚಾರ ಉಂಟು ಮಾಡುತ್ತದೆ.
ಇಳಿದು ಬಾ ತಾಯಿ ಇಳಿದು ಬಾ ಮೂಲ ಹಾಡಿನ ಗೀತ ಸಾಹಿತ್ಯ, ಪಿ. ಕಾಳಿಂಗ ರಾವ್, ಪಿ.ಬಿ ಶ್ರೀನಿವಾಸ್, ರಾಜು ಅನಂತಸ್ವಾಮಿ ಹಾಗೂ ಅರಿಶಿನ ಕುಂಕುಮದಲ್ಲಿನ ವಿಡಿಯೋ ನಿಮಗಾಗಿ ಇಲ್ಲಿದೆ ತಪ್ಪದೇ ವೀಕ್ಷಿಸಿ...

ಇಳಿದು ಬಾ ತಾಯಿ ಮೂಲ ಹಾಡಿನ ಗೀತ ಸಾಹಿತ್ಯ
ಇಳಿದು ಬಾ ತಾಯಿ ಇಳಿದು ಬಾ || ಪ ||
ಹರನ ಜಡೆಯಿಂದ ಹರಿಯ ಅಡಿಯಿಂದ
ಋಷಿಯ ತೊಡೆಯಿಂದ ನುಸುಳಿ ಬಾ;
ದೇವದೇವರನು ತಣಿಸಿ ಬಾ
ದಿಗ್ದಿಗಂತದಲಿ ಹಣಿಸಿ ಬಾ
ಚರಾಚರಗಳಿಗೆ ಉಣಿಸಿ ಬಾ
ಇಳಿದು ಬಾ ತಾಯಿ ಇಳಿದು ಬಾ.
ನಿನಗೆ ಪೊಡಮಡುವೆ ನಿನ್ನನುಡುತೊಡುವೆ
ಏಕೆ ಎಡೆತಡೆವೆ ಸುರಿದು ಬಾ
ಸ್ವರ್ಗ ತೊರೆದು ಬಾ
ಬಯಲ ಜರೆದು ಬಾ
ನೆಲದಿ ಹರಿದು ಬಾ
ಬಾರೆ ಬಾ, ತಾಯಿ ಇಳಿದು ಬಾ
ಇಳಿದು ಬಾ, ತಾಯೇ ಇಳಿದು ಬಾ.
ನನ್ನ ತಲೆಯೊಳಗೆ
ನನ್ನ ಬೆಂಬಳಿಗೆ
ನನ್ನ ಒಳಕೆಳಗೆ ನುಗ್ಗಿ ಬಾ,
ಕಣ್ಣ ಕಣ ತೊಳಿಸಿ
ಉಸಿರ ಎಳೆ ಎಳಿಸಿ
ನುಡಿಯ ಸಸಿ ಮೊಳಸಿ ಹಿಗ್ಗಿ ಬಾ;
ಎದೆಯ ನೆಲೆಯಲ್ಲಿ ನೆಲೆಸಿ ಬಾ
ಜೀವ ಜಲದಲ್ಲಿ ಚಲಿಸಿ ಬಾ
ಮೂಲ ಹೊಲದಲ್ಲಿ ನೆಲೆಸಿ ಬಾ
ಇಳಿದು ಬಾ ತಾಯೇ ಇಳಿದು ಬಾ.
ಕಂಚು ಮಿಂಚಾಗಿ ತೆರಳಿ ಬಾ
ನೀರು ನೀರಾಗಿ ಉರುಳಿ ಬಾ
ಮತ್ತೆ ಹೊಡೆಮರಳಿ ಹೊರಳಿ ಬಾ,
ದಯೆಯಿರದ ದೀನ
ಹರೆಯಳಿದ ಹೀನ
ನೀರಿರದ ಮೀನ ಕರೆಕರೆವ ಬಾ
ಇಳಿದು ಬಾ ತಾಯೇ ಇಳಿದು ಬಾ.
ಕರು ಕಂಡ ಕರುಳೆ
ಮನ ಉಂಡ ಮರುಳೆ
ಉದ್ದಂಡ ಅರುಳೆ
ಸುಳಿಸುಳಿದು ಬಾ;
ಶಿವಶುಭ್ರ ಕರುಣೆ
ಅತಿಕಿಂಚದರುಣೆ
ವಾತ್ಸಲ್ಯವರಣೆ
ಇಳಿ ಇಳಿದು ಬಾ
ಇಳಿದು ಬಾ ತಾಯೇ ಇಳಿದು ಬಾ.
ಕೊಳೆಯ ತೊಳೆವವರು ಇಲ್ಲ ಬಾ
ಬೇರೆ ಶಕ್ತಿಗಳ ಹೊಲ್ಲ ಬಾ
ಹೀಗೆ ಮಾಡಿದರು ಅಲ್ಲ ಬಾ
ನಾಡ ನಾಡಿಯನು ತುತ್ತ ಬಾ
ನಮ್ಮ ನಾಡನ್ನೆ ಸುತ್ತ ಬಾ
ಸತ್ತ ಜನರನು ಎತ್ತ ಬಾ.
ಸುರ ಸ್ವಪ್ನವಿದ್ದ ಪ್ರತಿಬಿಂಬ ಬಿದ್ದ ಉದ್ಬುದ್ಧ ಶುದ್ಧ ನೀರೆ!
ಎಚ್ಚೆತ್ತು ಎದ್ದ ಆಕಾಶದುದ್ದ ಧರೆಗಿಳಿಯಲಿದ್ದ ಧೀರೆ!
ಸಿರಿವಾರಿಜಾತ ವರಪಾರಿಜಾತ ತಾರಾ-ಕುಸುಮದಿಂದೆ
ವೃಂದಾರವಂದ್ಯೆ ಮಂದಾರಗಂಧೆ ನೀನೇ ತಾಯಿ ತಂದೆ
ರಸಪೂರಜನ್ಯೆ ನೀನಲ್ಲ ಅನ್ಯೆ ಸಚ್ಚಿದಾನಂದ ಕನ್ಯೆ!
ಬಂದಾರೆ ಬಾರೆ ಒಂದಾರೆ ಸಾರೆ ಕಣ್ಧಾರೆ ತಡೆವರೇನೆ?
ಅವತಾರವೆಂದೆ ಎಂದಾರೆ ತಾಯಿ, ಈ ಅಧಃಪಾತವನ್ನೆ?
ಹರಕೆ ಸಂದಂತೆ
ಮಮತೆ ಮಿಂದಂತೆ
ತುಂಬಿ ಬಂದಂತೆ
ದುಮ್ ದುಮ್ ಎಂದಂತೆ ದುಡುಕಿ ಬಾ
ನಿನ್ನ ಕಂದನ್ನ ಹುಡುಕಿ ಬಾ
ಹುಡುಕಿ ಬಾ ತಾಯೆ ದುಡುಕಿ ಬಾ ಇಳಿದು ಬಾ ತಾಯಿ ಇಳಿದು ಬಾ
ಹರಣ ಹೊಸದಾಗಿ ಹೊಳೆದು ಬಾ
ಬಾಳುಬೆಳಕಾಗೆ ಬೆಳೆದು ಬಾ
ಕೈ ತೊಳೆದು ಬಾ
ಮೈ ತಳೆದು ಬಾ
ಇಳೆಗಿಳಿದು ಬಾ ತಾಯಿ ಇಳಿದು ಬಾ
ಇಳಿದು ಬಾ ತಾಯೇ ಇಳಿದು ಬಾ.
ಶಂಭು ಶಿವಹರನ ಚಿತ್ತೆ ಬಾ
ದತ್ತ ನರಹರಿಯ ಮುತ್ತೆ ಬಾ
ಅಂಬಿಕಾತನಯನತ್ತೆ ಬಾ
ಇಳಿದು ಬಾ ತಾಯಿ ಇಳಿದು ಬಾ
ಪಿ. ಕಾಳಿಂಗ ರಾವ್ ಹಾಗೂ ಪಿ.ಬಿ ಶ್ರೀನಿವಾಸ್
ಪಿ. ಕಾಳಿಂಗ ರಾವ್ ಹಾಗೂ ಪಿ.ಬಿ ಶ್ರೀನಿವಾಸ್ ಕಂಠ ಸಿರಿಯಲ್ಲಿ ಮೊಳಗಿದ ಇಳಿದು ಬಾ ತಾಯಿ ಹಾಡು
ರಾಜು ಅನಂತಸ್ವಾಮಿ ಹಾಡುಗಾರಿಕೆ
ಇಳೆಗಿಳಿದು ಬಾ ತಾಯಿ ಇಳಿದು ಬಾ
ಇಳಿದು ಬಾ ತಾಯೇ ಇಳಿದು ಬಾ ಎಂದು ಹಾಡಿರುವ ರಾಜು ಅನಂತಸ್ವಾಮಿ
ಎಸ್ಪಿಬಿ ಕಂಠಸಿರಿಯಲ್ಲಿ ಇದೇ ಹಾಡು
ಎಸ್ ಪಿ ಬಾಲಸುಬ್ರಮಣ್ಯಂ ಅವರ ಕಂಠಸಿರಿಯಲ್ಲಿ ಇದೇ ಹಾಡು ಕೇಳಿ ಆನಂದಿಸಿ
ಅರಶಿನ ಕುಂಕುಮ ಚಿತ್ರದಲ್ಲಿ ಹಾಡು
ಅರಶಿನ ಕುಂಕುಮ ಚಿತ್ರದಲ್ಲಿ ಹಾಡು ವಿಜಯ ಭಾಸ್ಕರ್ ರಾಗ ಸಂಯೋಜನೆ, ಪಿಬಿ ಶ್ರೀನಿವಾಸ್ ಗಾಯನ
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications