ದೆಹಲಿ ಚುನಾವಣೆ ಫಲಿತಾಂಶ: ಕಾಂಗ್ರೆಸ್ ಕಾಲೆಳೆದ ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ, ಫೆಬ್ರವರಿ 08: ದೆಹಲಿ ಚುನಾವಣೆ ಫಲಿತಾಂಶ ಬಹುತೇಕ ಅಂತಿಮವಾಗಿದ್ದು, ಬಿಜೆಪಿ ಮೇಲುಗೈ ಸಾಧಿಸಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖುಷಿ ವ್ಯಕ್ತಪಡಿಸಿದ್ದು, ದೇಶದಲ್ಲಿ ಪ್ರಜಾಪ್ರಭುತ್ವದ ಯಶಸ್ವಿಗಾಗಿ ಪ್ರಜಾಸತ್ತಾತ್ಮಕ ವಿರೋಧ ಪಕ್ಷ ಇರಬೇಕು ಎನ್ನುವುದು ನಮ್ಮ ಆಸೆ. ಆದರೆ ಕಾಂಗ್ರೆಸ್ ಪಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶದಾದ್ಯಂತ ನಶಿಸಿ ಹೋಗುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಬಿಜೆಪಿಯ ಪರವಾಗಿ ತೀರ್ಪು ಬರುತ್ತಿದೆ. ಪ್ರಸ್ತುತ ನೋಡುತ್ತಿದ್ದರೆ 46ಕ್ಕಿಂತ ಹೆಚ್ಚು ಸ್ಥಾನದಲ್ಲಿ ಗೆಲ್ಲುತ್ತೇವೆ. ನಮಗೆ ನಿಚ್ಚಳ ಬಹುಮತ ದೆಹಲಿ ಜನ ಕೊಡುತ್ತಾರೆ ಎನ್ನುವ ನಂಬಿಕೆ ಇದೆ. ಪ್ರಧಾನ ಮಂತ್ರಿ ಸೇರಿದಂತೆ ಚುನಾವಣೆಗೆ ಮುಂಚೂಣಿಯಲ್ಲಿ ನಿಂತು ನಡೆಸಿದವರಿಗೆ ಅಭಿನಂದನೆ ಸಲ್ಲಿಸುತ್ತೇನೆ.

ನಾಕರಾತ್ಮಕ ರಾಜಕಾರಣಕ್ಕೆ ಜನ ಸರಿಯಾದ ಪೆಟ್ಟು ಕೊಟ್ಟು ಸೋಲಿನ ಹಾದಿ ತೋರಿಸಿದ್ದಾರೆ. ಭ್ರಷ್ಟಚಾರ ವಿರೋಧಿ ಆಂದೋಲನದಲ್ಲಿ ಬಂದು ಭ್ರಷ್ಟತನವನ್ನೇ ಆಧಾರ ಮಾಡಿಕೊಂಡು ಆರಾಜಕತೆ ಸೃಷ್ಟಿಸಿವರಿಗೆ ಜನ ಕಾಪಾಳ ಮೋಕ್ಷ ಮಾಡಿದ್ದಾರೆ ಎಎಪಿ ಪಕ್ಷದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದರು.
ಇನ್ನು ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಇಷ್ಟು ಕೆಟ್ಟದಾಗಿ ಅಸ್ತಿತ್ವ ಕಳೆದುಕೊಳ್ಳಬಾರದಿತ್ತು. ಈ ಚುನಾವಣೆಯಿಂದ ಕಾಂಗ್ರೆಸ್ ಸಂಪೂರ್ಣ ಜೀರೋ ಆಗಿದೆ. ನಾನು ಸೋಲು-ಗೆಲುವಿನ ಬಗ್ಗೆ ಮಾತನಾಡುತ್ತಿಲ್ಲ. ಇಂತಹ ಸ್ಥಿತಿ ಒಂದು ಪಕ್ಷಕ್ಕೆ ಒಳ್ಳೆದಲ್ಲ. ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ದೇಶದಾದ್ಯಂತ ನಶಿಸಿ ಹೋಗುತ್ತಿದೆ. ಇದು ದುರ್ದೈವದ ಸಂಗತಿ ಎಂದು ಹೇಳಿದರು.

ಇನ್ನು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮ್ಯಾಜಿಕ್ ನಂಬರ್ ದಾಟಿ ಭರ್ಜರಿ ಗೆಲುವು ಸಾಧಿಸುವುದು ಬಹುತೇಕ ಖಚಿತವಾಗಿದೆ. ಈ ಬಾರಿ ಬಿಜೆಪಿಯ ಅಬ್ಬರದ ಎದುರು ದೆಹಲಿಯಲ್ಲಿ ಎರಡು ಬಾರಿ ಅಧಿಕಾರ ನಡೆಸಿದ ಆಮ್ ಆದ್ಮಿ ಪಕ್ಷ ಸೋಲು ಅನುಭವಿಸಿದೆ. ಈ ಬಾರಿ ಎಎಪಿ ಏಕಾಏಕಿ ಕುಸಿದಿದ್ದು, 27 ವರ್ಷಗಳ ಬಳಿಕ ಬಿಜೆಪಿಗೆ ಅಧಿಕಾರ ಸಿಗುವಂತಾಗಿದೆ.
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications