Dengue Spike: ಧಾರವಾಡದಲ್ಲಿ ಖುದ್ದು ಅಖಾಡಕ್ಕೆ ಇಳಿದ ಡಿಸಿ ದಿವ್ಯ ಪ್ರಭು: ಸೂಚನೆಗಳೇನು?
ಧಾರವಾಡ, ಜುಲೈ 05: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳವಾಗುತ್ತಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಡೆಂಗ್ಯೂ ರೋಗ ನಿಯಂತ್ರಣ ಮತ್ತು ನಿಮೂರ್ಲನೆಗಾಗಿ ಜನಜಾಗೃತಿ ಮತ್ತು ಸಾರ್ವಜನಿಕರ ಸಹಭಾಗಿತ್ವಕ್ಕಾಗಿ ಧಾರವಾಡ ಜಿಲ್ಲಾಧಿಕಾರಿಗಳು ಖುದ್ದು ಅಖಾಡಕ್ಕೆ ಇಳಿದಿದ್ದಾರೆ.
ಜಿಲ್ಲೆಯಲ್ಲಿ ಶುಕ್ರವಾರ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಪ್ರತಿ ಶುಕ್ರವಾರ ಸೊಳ್ಳೆ ನಿರ್ಮೂಲನಾ ದಿನವಾಗಿ ವಿಭಿನ್ನ ಕಾರ್ಯಕ್ರಮಗಳ ಮೂಲಕ ಆಚರಿಸುತ್ತಿದೆ. ಬೆಳಗ್ಗೆ ಕೆಲಗೇರಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಶಿ ಪಾಟೀಲ್ ನೇತೃತ್ವದಲ್ಲಿ ಮನೆಮನೆಗೆ ತೆರಳಿ ಡೆಂಗ್ಯೂ ಜಾಗೃತಿ ಕರಪತ್ರ ವಿತರಿಸುವ ಮತ್ತು ಸಾರ್ವಜನಿಕರನ್ನು ಸಂದರ್ಶಿಸುವ ಮೂಲಕ ಡೆಂಗ್ಯೂ ಜಾಗೃತಿ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿದರು.

ಆರೋಗ್ಯ ಜಾಥಾ ನಡಿಗೆಗೆ ಮತ್ತು ನೀರಿನ ತೊಟ್ಟಿಗೆ ಲಾರ್ವಾ ಸೊಳ್ಳೆಯ ಮರಿ ಮತ್ತು ತತ್ತಿಗಳನ್ನು ತಿನ್ನುವ ಗಪ್ಪಿ ಮೀನು ಬಿಡುವ ಕಾರ್ಯಕ್ಕೆ ಚಾಲನೆ ನೀಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿದರು.
ಡೆಂಗ್ಯೂ: ಮಹಿಳೆ-ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಿ
ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಹಲವು ರೀತಿಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಜನಜಾಗೃತಿಗೆ ಮೊದಲ ಆದ್ಯತೆ ನೀಡಲಾಗಿದೆ. ಮಹಿಳೆ ಮತ್ತು ಮಕ್ಕಳು ಡೆಂಗ್ಯೂ ಬಗ್ಗೆ ತಿಳುವಳಿಕೆ ಹೊಂದುವುದರಿಂದ ಹೆಚ್ಚು ಪರಿಣಾಮಕಾರಿಯಾಗಿ ಡೆಂಗ್ಯೂವನ್ನು ನಿಯಂತ್ರಿಸಿ, ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಕಳೆದ ಜನವರಿಯಿಂದ ಇಲ್ಲಿಯವರೆಗೆ ಡೆಂಗ್ಯೂ ಕುರಿತು ತಪಾಸಣೆ ಮಾಡಿದ ಶಂಕಿತರ ಪೈಕಿ 253 ಜನರಲ್ಲಿ ಡೆಂಗ್ಯೂ ದೃಡಪಟ್ಟಿದ್ದು, ಅಗತ್ಯ ಔಷಧಿ, ಚಿಕಿತ್ಸೆ ಪಡೆದು ಅವರೆಲ್ಲರೂ ಗುಣಮುಖರಾಗಿದ್ದಾರೆ. ಈಗ ಡೆಂಗ್ಯೂ ಲಕ್ಷಣಗಳಿರುವ 21 ಜನ ಶಂಕಿತರಿದ್ದು, ಇದರಲ್ಲಿ ಮೂರು ಜನ ಆಸ್ಪತ್ರೆಯಲ್ಲಿ ಮತ್ತು 18 ಜನ ಮನೆಯಲ್ಲಿ ಆರೈಕೆ ಪಡೆಯುತ್ತಿದ್ದಾರೆ.

ಜನರು ಜಾಗೃತರಾಗಿರುವದರಿಂದ ಮತ್ತು ಮುಂಜಾಗೃತಾ ಕ್ರಮಗಳನ್ನು ಅನುಸರಿಸುತ್ತಿರುವದರಿಂದ ಧಾರವಾಡ ಜಿಲ್ಲೆಯಲ್ಲಿ ಡೆಂಗ್ಯೂ ರೋಗ ಹತೋಟಿಯಲ್ಲಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.
ಡೆಂಗ್ಯೂ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಹಾಗೂ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆ ಮೀಸಲಿಡಲಾಗಿದೆ. ಅಗತ್ಯ ಔಷಧಿಯೂ ದಾಸ್ತಾನಿದೆ. ಆರೋಗ್ಯ ಇಲಾಖೆಯೊಂದಿಗೆ ಕಂದಾಯ, ಸ್ಥಳೀಯ ಸಂಸ್ಥೆಗಳು, ಶಿಕ್ಷಣ ಇಲಾಖೆ, ವೈದ್ಯಕೀಯ ಮತ್ತು ನರ್ಸಿಂಗ್ ಕಾಲೇಜುಗಳು ಕೈ ಜೋಡಿಸಿವೆ. ಸಾರ್ವಜನಿಕರು ಸಹಕಾರ ನೀಡುತ್ತಿದ್ದಾರೆ ಎಂದರು.
ಜಿಲ್ಲಾಧಿಕಾರಿಗಳಿಂದ ಮನೆ ಮನೆಗೆ ಭೇಟಿ
ಡೆಂಗ್ಯೂ ಜನಜಾಗೃತಿ ಅಂಗವಾಗಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಕೆಲಗೇರಿ ಗ್ರಾಮದ ಸಾದರ ಓಣಿ, ದ್ಯಾಮವ್ವನ ಗುಡಿ ಓಣಿ, ದಾಳಿಯವರ ಓಣಿ ಮತ್ತು ಹರಿಜನಕೇರಿಯ ಮನೆಮನೆಗಳಿಗೆ ತೆರಳಿ, ಡೆಂಗ್ಯೂ ನಿಯಂತ್ರಣ ಮಾಹಿತಿಯ ಕರಪತ್ರ ವಿತರಿಸಿದರು.
ಗ್ರಾಮದ ಶಾಂತವ್ವ ಮಲ್ಲೂರ, ಶೋಭಾ ಹೆಬ್ಬಳ್ಳಿ, ರೇಖವ್ವ ಮಳಗಿ ಸೇರಿದಂತೆ ಅನೇಕ ಗೃಹಿಣಿಯರಿಗೆ ಅವರ ಮನೆಯಲ್ಲಿ ಲಾರ್ವಾ ನಾಶದ ಕುರಿತು ಮತ್ತು ಈಡೀಸ್ ಸೊಳ್ಳೆಗಳ ಉತ್ಪತಿ ಕುರಿತು ಜಿಲ್ಲಾಧಿಕಾರಿಗಳು ಸ್ವತಃ ಮಾಹಿತಿ ನೀಡಿದರು. ಸ್ವಚ್ಛತೆ ಕಾಪಾಡಲು, ನೀರು ಸಂಗ್ರಹ ಕುರಿತು ವಿವರಿಸಿದರು.
ಲಾರ್ವಾ ನಿರ್ಮೂಲನೆಗೆ ಸಲಹೆ ನೀಡಿದ ಡಿಸಿ
ಡೆಂಗ್ಯೂ ರೋಗಕ್ಕೆ ಕಾರಣವಾದ ಈಡೀಸ್ ಸೊಳ್ಳೆಗಳ ಮೂಲವಾದ ಲಾರ್ವಾ ನಾಶಕ್ಕೆ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಆದ್ಯತೆ ನೀಡಿದೆ. ಮನೆಗಳಲ್ಲಿ ದನಕರು ನೀರು ಕುಡಿಯಲು ಮಾಡಿರುವ ತೊಟ್ಟಿ, ಸಾರ್ವಜನಿಕ ನೀರು ಸಂಗ್ರಹ ತೊಟ್ಟಿಗಳಲ್ಲಿ ಗಪ್ಪಿ ಮೀನು ಬಿಡುವ ಅಭಿಯಾನ ಮಾಡಲಾಗುತ್ತಿದೆ.
ಕೆಲಗೇರಿ ಗ್ರಾಮದ ರೇಖವ್ವ ಮಳಗಿ ಅವರ ಮನೆ ಆವರಣದ ಸಾರ್ವಜನಿಕ ನೀರು ಸಂಗ್ರಹಣ ತೊಟ್ಟಿಗೆ ಗಪ್ಪಿ ಮೀನು ಬಿಡುವ ಮೂಲಕ ಜಿಲ್ಲಾಧಿಕಾರಿ ಅಭಿಯಾನಕ್ಕೆ ಚಾಲನೆ ನೀಡಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿ ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯೆ ಚಂದ್ರಕಲಾ ಕೊಟಬಾಗಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಆರ್.ಸಿ.ಎಚ್.ಓ. ಡಾ.ಸುಜಾತಾ ಹಸವೀಮಠ, ಡಿಎಂಓ ಡಾ.ಮಂಜುನಾಥ ಎಸ್., ತಾಲೂಕ ವೈದ್ಯಾಧಿಕಾರಿ ಡಾ. ಕೆ.ಎನ್.ತನುಜಾ, ಪಾಲಿಕೆ 1 ರ ಸಹಾಯಕ ಆಯುಕ್ತ ಆನಂದ ಕಾಂಬೆ ಸೇರಿದಂತೆ ಆರೋಗ್ಯ ಇಲಾಖೆ ವಿವಿಧ ಅಧಿಕಾರಿಗಳು ಹಾಗೂ ಕೆಲಗೇರಿ ಗ್ರಾಮದ ಪ್ರಮುಖರು, ಶ್ರೇಯಾ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications