ಧಾರವಾಡ: ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಇಂಗ್ಲಿಷ್ ಟೀಚರ್ ಆದ ಜಿಲ್ಲಾಧಿಕಾರಿ
ಧಾರವಾಡ, ಮೇ, 31: ಇಂದು (ಮೇ 31) ಶಾಲೆಗಳು ಆರಂಭವಾಗಿದ್ದು, ಈ ಹಿನ್ನೆಲೆ ಶಿಕ್ಷಕರು ಶಾಲೆಗಳಲ್ಲಿ ಮಕ್ಕಳನ್ನು ವಿಶೇಷ ರೀತಿಯಲ್ಲಿ ಸ್ವಾಗತಿಸಿದ್ದಾರೆ. ಹಾಗೆಯೇ ವಿದ್ಯಾಕಾಶಿ ಎಂದೇ ಪ್ರಖ್ಯಾತಿ ಪಡೆದಿರುವ ಧಾರವಾಡ ಶಾಲೆಗಳಲ್ಲಿ ಇಂದು ಹಬ್ಬದ ಸಂಭ್ರಮದ ವಾತಾವರಣ ನಿರ್ಮಾಣವಾಗಿದ್ದು, ಜಿಲ್ಲಾಧಿಕಾರಿ ಶಾಲಾ ಮಕ್ಕಳಿಗೆ ಪಾಠ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಶಾಲೆ ಪ್ರಾರಂಭವಾದ ಹಿನ್ನೆಲೆಯಲ್ಲಿ ಶಾಲೆಗಳನ್ನು ಸ್ವಚ್ಛಗೊಳಿಸಿ, ಹಸಿರು ತೋರಣಗಳಿಂದ ಸಿಂಗರಿಸಿ ಶಿಕ್ಷ ಕರು ಮಕ್ಕಳನ್ನು ಬರಮಾಡಿಕೊಳ್ಳುವ ದೃಶ್ಯ ಸಾಮಾನ್ಯವಾಗಿತ್ತು. ಅದರಲ್ಲೂ ಸರ್ಕಾರಿ ಟಿಸಿಡಬ್ಲ್ಯೂ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮ ಮನೆ ಮಾಡಿತ್ತು. ಏಕೆಂದರೆ ಈ ಶಾಲೆಗೆ ಪಾಠ ಮಾಡಲು ಸ್ವತಃ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಆಗಮಿಸಿ ಮಕ್ಕಳಿಗೆ ಇಂಗ್ಲಿಷ್ ಪಾಠ ಮಾಡಿ ಭಾರೀ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ನಗರದ ಸರ್ಕಾರಿ ಪ್ರಾಥಮಿಕ ಟಿಸಿಡಬ್ಲ್ಯೂ ಶಾಲೆಗೆ ಮಕ್ಕಳು ನಗು ನಗುತ್ತಾ ಸಂತೋಷದಿಂದ ಆಗಮನಿಸಿದ್ದಾರೆ. ಶಿಕ್ಷಕರು ಸಹ ಅಷ್ಟೇ ಸಂತಸದಿಂದ ಮಕ್ಕಳಿಗೆ ಹೂಗುಚ್ಛ ನೀಡಿ ಬರಮಾಡಿದ್ದು ವಿಶೇಷವಾಗುದೆ. ಶಾಲೆ ಶುರುವಾಗತಿದ್ದ ಹಾಗೇ 8ನೇ ತರಗತಿ ಕೊಠಡಿಗೆ ಎಂದಿನಂತೆ ಆಗಮನ ಕೊಟ್ಟವರು ಬೇರ್ಯಾರು ಅಲ್ಲ, ಸ್ವತ ಡಿಸಿ ದಿವ್ಯಪ್ರಭು.
ಜಿಲ್ಲಾಧಿಕಾರಿ ದಿವ್ಯಪ್ರಭು ಅವರನ್ನು ನೋಡಿದ ಮಕ್ಕಳು ಆಶ್ಚರ್ಯಕ್ಕೊಳಗಾಗಿದ್ದರು. ಬಳಿಕ ಹೆದರಬೇಡಿ, ನಾನು ನಿಮ್ಮ ಜಿಲ್ಲಾಧಿಕಾರಿ, ನಿಮಗೆ ಪಾಠ ಮಾಡಲು ಬಂದಿದ್ದೇನೆ ಅಂದಾಗ ಮಕ್ಕಳು ಸ್ವಲ್ಪ ನಿರಾಳರಾದರು. ಆಗ ಒಬ್ಬ ವಿದ್ಯಾರ್ಥಿನಿ ಇಂಗ್ಲಿಷ್ ಸ್ವಲ್ಪ ಕಷ್ಟ ಅಂದಾಗ, ಇಂಗ್ಲಿಷ್ ಪುಸ್ತಕ ತೆಗೆದು ನಿರ್ಗಳವಾಗಿ ಮಕ್ಕಳಿಗೆ ತಿಳಿಯೋ ಹಾಗೆ ಪಾಠ ಮಾಡಿದರು. ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾಡಿದ ಪಾಠವನ್ನು ಕೂಡ ಮಕ್ಕಳು ಆಸಕ್ತಿಯಿಂದ ಕೇಳಿದ್ದು ವಿಶೇಷವಾಗಿತ್ತು.
ಪಾಠದ ನಂತರ ಮಕ್ಕಳಿಗೆ ಪ್ರಶ್ನೆಗಳನ್ನೂ ಕೇಳಿದ ಜಿಲ್ಲಾಧಿಕಾರಿಗಳು, ಇಂಗ್ಲೀಷ್ ಭಾಷೆಯನ್ನು ಕೇವಲ ಒಂದು ವಿಷಯವಾಗಿ ನೋಡಬೇಕು. ಯಾವುದೇ ಭಾಷೆಯಾಗಲಿ, ಅದು ತಪ್ಪಾದರೂ ಮಾತನಾಡಲು ಕಲಿಯಬೇಕು ಎಂದು ಮಕ್ಕಳಲ್ಲಿ ಹೊಸ ಉತ್ಸಾಹ ತುಂಬಿದರು. ಸದ್ಯ ಆರಂಭವಾಗಿರುವ ಶೈಕ್ಷಣಿಕ ವರ್ಷದಲ್ಲಿ ಎಲ್ಲಾ ಮಕ್ಕಳು ಉತ್ತಮ ಫಲಿತಾಂಶ ಹೊಂದಬೇಕು ಎಂದು ಕಿವಿಮಾತು ಹೇಳಿದರು.
ಮೆದಳು, ಮನಸ್ಸು ಮತ್ತು ದೇಹ ಸಶಕ್ತ, ಸದೃಡವಾಗಿದ್ದರೆ, ಉತ್ತಮ ಶಿಕ್ಷಣದ ಮೂಲಕ ಕಂಡ ಕನಸು ಸಾಧಿಸಬಹುದು. ಕಲಿಕೆಯ ಆಸಕ್ತಿ ವಿದ್ಯಾರ್ಥಿಗಳಲ್ಲಿ ಮತ್ತು ಕಲಿಸುವ ಅಭಿರುಚಿ ಶಿಕ್ಷಕರಲ್ಲಿ ಇದ್ದರೆ ಮಾತ್ರ ಅದು ಒಂದು ಕೌಶಲ್ಯಯುತವಾಗಿ ಕೂಡಿಬರುತ್ತದೆ. ವಿದ್ಯಾರ್ಥಿಗಳಿಗೆ ಶಿಕ್ಷಕರೇ ಆದರ್ಶ. ಅವರ ಜೀವನ ನಿರೂಪಣೆ ಪಾಲಕರ ಜೊತೆಗೆ ಶಿಕ್ಷಕರಿಗೂ ಸೇರಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿ ಗಮನ ಸೆಳೆದಿದ್ದಾರೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications