2014ರ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ ಘೋಷಣೆ
ಧಾರವಾಡ, ಜ. 6 : ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ 2014ರ 'ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ'ಯನ್ನು ಘೋಷಣೆ ಮಾಡಿದೆ. ಈ ಬಾರಿಯ ಪ್ರಶಸ್ತಿಗೆ ಖ್ಯಾತ ಯೋಗಪಟು, ಲೇಖಕ ಡಾ. ಜಿ.ವಿ. ಕುಲಕರ್ಣಿ ಹಾಗೂ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ಬಗ್ಗೆ ಮಾಹಿತಿ ನೀಡಿರುವ ಟ್ರಸ್ಟ್ ಅಧ್ಯಕ್ಷ ಡಾ.ಶ್ಯಾಮ ಸುಂದರ ಬಿದರಕುಂದಿ ಅವರು, ಬೇಂದ್ರೆ ಅವರ 120ನೇ ಜನ್ಮದಿನದ ಅಂಗವಾಗಿ ಫೆ. 1ರಂದು ಬೇಂದ್ರೆ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ತಲಾ ರೂ. 50 ಸಾವಿರ ಮೊತ್ತದ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಹೇಳಿದರು. [ಬೇಂದ್ರೆ ಅಜ್ಜನ ಗಂಗಾವತರಣ ಗೀತೆಗೆ 72ರ ಯೌವನ]

ಬನ್ನಂಜೆ ಗೋವಿಂದಾಚಾರ್ಯ ಅವರು ಬೇಂದ್ರೆ ಕಾವ್ಯದಲ್ಲಿ ಪ್ರೀತಿಯ ಶೋಧನೆ ಮಾಡಿದ್ದಾರೆ. ವ್ಯಾಖ್ಯಾನ ಕೃತಿಗಳು, ಕಾವ್ಯ, ನಾಟಕ, ಸಂಸ್ಕೃತದಿಂದ ಅನುವಾದಗಳು,ಆಧುನಿಕ ಪರಿಭಾಷೆಯಲ್ಲಿ ಪುರಾಣ, ಮಹಾಕಾವ್ಯಗಳ ಮರು ನಿರೂಪಣೆ ಮಾಡಿದ್ದಾರೆ ಆದ್ದರಿಂದ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು. [ಶ್ರಾವಣದ ಊರಲ್ಲಿ ಗೋಕಾಕರ ನಿರರ್ಥಕ ಹುಟ್ಟುಹಬ್ಬ]
ಜಿ.ವಿ. ಕುಲಕರ್ಣಿ ಅವರು ಕಾವ್ಯ, ಏಕಾಂಕ ನಾಟಕಗಳು, ಕಥಾ ಸಂಕಲನ, ವ್ಯಕ್ತಿ ಚಿತ್ರ, ವಿಮರ್ಶೆ ಸೇರಿದಂತೆ ಸಾಕಷ್ಟು ಸಾಹಿತ್ಯ ಕಷಿ ಮಾಡಿದ್ದಾರೆ. ಗುರುಲಿಂಗಕಾಪಸೆ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯು ಇಬ್ಬರ ಹೆಸರನ್ನೂ ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ತಿಳಿಸಿದರು.
ಬೇಂದ್ರೆಯವರ 120ನೇ ಜನ್ಮದಿನದ ಅಂಗವಾಗಿ ಟ್ರಸ್ಟ್ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜ. 12ರಂದು ಯುವ ಕವಿ ದಿನವೆಂದು ಆಚರಿಸಲಾಗುತ್ತಿದ್ದು, ಆಯ್ದ ಕವಿಗಳಿಂದ ಕವನ ವಾಚನ ಹಾಗೂ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications