2014ರ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ ಘೋಷಣೆ
ಧಾರವಾಡ, ಜ. 6 : ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ 2014ರ 'ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ'ಯನ್ನು ಘೋಷಣೆ ಮಾಡಿದೆ. ಈ ಬಾರಿಯ ಪ್ರಶಸ್ತಿಗೆ ಖ್ಯಾತ ಯೋಗಪಟು, ಲೇಖಕ ಡಾ. ಜಿ.ವಿ. ಕುಲಕರ್ಣಿ ಹಾಗೂ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ಬಗ್ಗೆ ಮಾಹಿತಿ ನೀಡಿರುವ ಟ್ರಸ್ಟ್ ಅಧ್ಯಕ್ಷ ಡಾ.ಶ್ಯಾಮ ಸುಂದರ ಬಿದರಕುಂದಿ ಅವರು, ಬೇಂದ್ರೆ ಅವರ 120ನೇ ಜನ್ಮದಿನದ ಅಂಗವಾಗಿ ಫೆ. 1ರಂದು ಬೇಂದ್ರೆ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ತಲಾ ರೂ. 50 ಸಾವಿರ ಮೊತ್ತದ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಹೇಳಿದರು. [ಬೇಂದ್ರೆ ಅಜ್ಜನ ಗಂಗಾವತರಣ ಗೀತೆಗೆ 72ರ ಯೌವನ]

ಬನ್ನಂಜೆ ಗೋವಿಂದಾಚಾರ್ಯ ಅವರು ಬೇಂದ್ರೆ ಕಾವ್ಯದಲ್ಲಿ ಪ್ರೀತಿಯ ಶೋಧನೆ ಮಾಡಿದ್ದಾರೆ. ವ್ಯಾಖ್ಯಾನ ಕೃತಿಗಳು, ಕಾವ್ಯ, ನಾಟಕ, ಸಂಸ್ಕೃತದಿಂದ ಅನುವಾದಗಳು,ಆಧುನಿಕ ಪರಿಭಾಷೆಯಲ್ಲಿ ಪುರಾಣ, ಮಹಾಕಾವ್ಯಗಳ ಮರು ನಿರೂಪಣೆ ಮಾಡಿದ್ದಾರೆ ಆದ್ದರಿಂದ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು. [ಶ್ರಾವಣದ ಊರಲ್ಲಿ ಗೋಕಾಕರ ನಿರರ್ಥಕ ಹುಟ್ಟುಹಬ್ಬ]
ಜಿ.ವಿ. ಕುಲಕರ್ಣಿ ಅವರು ಕಾವ್ಯ, ಏಕಾಂಕ ನಾಟಕಗಳು, ಕಥಾ ಸಂಕಲನ, ವ್ಯಕ್ತಿ ಚಿತ್ರ, ವಿಮರ್ಶೆ ಸೇರಿದಂತೆ ಸಾಕಷ್ಟು ಸಾಹಿತ್ಯ ಕಷಿ ಮಾಡಿದ್ದಾರೆ. ಗುರುಲಿಂಗಕಾಪಸೆ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯು ಇಬ್ಬರ ಹೆಸರನ್ನೂ ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ತಿಳಿಸಿದರು.
ಬೇಂದ್ರೆಯವರ 120ನೇ ಜನ್ಮದಿನದ ಅಂಗವಾಗಿ ಟ್ರಸ್ಟ್ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜ. 12ರಂದು ಯುವ ಕವಿ ದಿನವೆಂದು ಆಚರಿಸಲಾಗುತ್ತಿದ್ದು, ಆಯ್ದ ಕವಿಗಳಿಂದ ಕವನ ವಾಚನ ಹಾಗೂ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications