Rain Alert: ಜಿಲ್ಲೆಯಲ್ಲಿ ನಿರಂತರ ಮಳೆ: ಶಾಲಾ ಕಾಲೇಜುಗಳಿಗೆ ನಾಳೆ ಜು.26ರಂದು ರಜೆ ಘೋಷಣೆ
ಧಾರವಾಡ, ಜುಲೈ 25: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಕಳೆದ ಎರಡು ವಾರಗಳಿಂದ ನಿರಂತರ ಮಳೆಯಾಗುತ್ತಿದೆ. ವಾತಾವರಣ ಶೀತಮಯವಾಗಿದ್ದು, ಎಲ್ಲೆಡೆ ಅನಾರೋಗ್ಯದ ಆತಂಕ ಎದುರಾಗಿದೆ. ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಆಗಿದೆ.
ಧಾರವಾಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿದೆ. ಇದರಿಂದ ತಂಪು (ಶೀತ) ಗಾಳಿ ಬೀಸುತ್ತಿರುವದರಿಂದ ಇಂದಿನಿಂದ (ಜುಲೈ 25 ಮತ್ತು 26 ರಂದು) ಎರಡು ದಿನ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಬಹುತೇಕ ಕಡೆಗೆ ನಿರಂತರವಾಗಿ ಮಳೆ ಆಗುತ್ತಿದೆ. ಮತ್ತು ತಂಪುಗಾಳಿ ಬಿಸುತ್ತಿದೆ. ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪೂರ್ವ ಪ್ರಾಥಮಿಕ ಶಾಲೆ, ಖಾಸಗಿ, ಅನುದಾನಿತ, ಸರ್ಕಾರಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದರು.
ಈ ರಜಾ ದಿನಗಳನ್ನು ಮುಂದಿನ ಸಾರ್ವಜನಿಕ ರಜಾ ದಿನಗಳಂದು ಹೆಚ್ಚುವರಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣೆಕೆ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೂಚಿಸಿದ್ದಾರೆ.
ಹುಬ್ಬಳ್ಳಿ ಧಾರವಾಡ ಸೇರಿದಂತೆ ಸತತವಾಗಿ ಸುರಿಯುತ್ತಿರುವ ಪುಷ್ಯ ಮಳೆಯಿಂದ ಕೃಷ್ಣಾ, ದೂಧಗಂಗಾ, ವೇದಗಂಗಾ, ತುಂಗಭದ್ರಾ, ವರದಾ ನದಿಗಳು ಅಪಾಯದ ಮಟ್ಟ ಮೀರಿ ಆರ್ಭಟಿಸುತ್ತಿವೆ. ಮುಂಜಾಗ್ರತೆ ಕ್ರಮವಾಗಿ ನದಿ ತೀರದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್ಡಿಆರ್ಎಫ್) ತಂಡಗಳನ್ನು ನಿಯೋಜಿಸಲಾಗಿದೆ.
ಜಿಲ್ಲೆ ವ್ಯಾಪ್ತಿಯಲ್ಲಿ ಮಳೆ ಅವಾಂತರ: ಸಾವು ನೋವು
ಈಗಾಗಲೇ ಈ ಭಾಗದಲ್ಲಿ ಮಳೆ ಅನಾಹುತಕ್ಕೆ ಮೂವರು ಮೃತಪಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಯಲ್ಲಾಪುರ ತಾಲೂಕಿನ ಕಬ್ಬಿನಗದ್ದೆಯ ವಿನಯ ಮಂಜುನಾಥ ಗಾಡಿಗ (25) ಮರ ಬಿದ್ದು ಮೃತಪಟ್ಟಿದ್ದಾರೆ. ಮುಂಡಗೋಡ ತಾಲೂಕಿನ ಮಳಗಿ ಧರ್ಮಾ ಡ್ಯಾಂನಲ್ಲಿ ಈಜಲು ಹೋಗಿದ್ದ ಮುಡಸಾಲಿ ಗ್ರಾಮದ ಶ್ರೀಕಾಂತ ಹರಿಜನ (20) ನೀರು ಪಾಲಾಗಿದ್ದರೆ ಮುದ್ದೇಬಿಹಾಳ ತಾಲೂಕಿನ ನಾರಾಯಣಪುರ ಎಡದಂಡೆ ಕಾಲುವೆಯಲ್ಲಿ ಕಾಲು ಜಾರಿ ಬಿದ್ದಿದ್ದ ಕುರಿಗಾಹಿ ಮಂಜುನಾಥ ಮಾದರ (28) ಮೃತದೇಹ ಯಾದಗಿರಿ ಜಿಲ್ಲೆ ಹೊರಟ್ಟಿ ಗ್ರಾಮದ ಕಾಲುವೆಯಲ್ಲಿ ಬುಧವಾರ ದೊರಕಿದೆ. ಹೀಗೆ ಜಿಲ್ಲೆ ವ್ಯಾಪ್ತಿಯಲ್ಲಿ ನಾನಾ ಅವಾಂತರಗಳು ಕಳೆದ ಕೆಲವೇ ವಾರಗಳಲ್ಲಿ ಸಂಭವಿಸಿವೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications