21ದಿನದಲ್ಲಿ ಜನನ-ಮರಣ ನೋಂದಣಿ ಮಾಡಲು ಡಿಸಿ ಸೂಚನೆ
ಧಾರವಾಡ, ಆಗಸ್ಟ್ 22: ಜಿಲ್ಲೆಯಾದ್ಯಂತ ಸರ್ಕಾರಿ ಹಾಗೂ ಖಾಸಗಿ ಆರೋಗ್ಯ ಸಂಸ್ಥೆಗಳಲ್ಲಿ ಆಗುವ ಜನನ ಮತ್ತು ಮರಣಗಳನ್ನು ನಿಗದಿತ 21 ದಿನಗಳ ಒಳಗಾಗಿಯೇ 'ಜನನ ಮರಣ ಅಧಿನಿಯಮದಡಿ' ನೋಂದಣಿ ಕಾರ್ಯ ನಡೆಸಬೇಕು. ನೋಂದಣಿ ಆದ ಬಳಿ ಮೊದಲ ಪ್ರತಿಯನ್ನು ಹಣ ಪಡೆಯದೇ, ಉಚಿತವಾಗಿ ನೀಡಬೇಕು ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು. ಸರ್ಕಾರಿ, ಖಾಸಗಿ ಆರೋಗ್ಯ ಸಂಸ್ಥೆಗಳಲ್ಲಿ ಜರುಗುವ ಮರಣ ಘಟನೆಗಳಿಗೆ ಮರಣ ಕಾರಣ ವೈದ್ಯಕೀಯ ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ತಪ್ಪದೇ ಜನನ ಮರಣಗಳ ಮುಖ್ಯ ನೋಂದಣಾಧಿಕಾರಿಗಳು, ಬೆಂಗಳೂರು ಇವರಿಗೆ ನೇರವಾಗಿ ಸಲ್ಲಿಸುವಂತೆ ಹಾಗೂ ಯಾವುದೇ ಮರಣ ಘಟನೆ ಜರುಗದೇ ಇರುವ ಪಕ್ಷದಲ್ಲಿ ಶೂನ್ಯ ವರದಿಯನ್ನು ಸಲ್ಲಿಸುವಂತೆ ಅವರು ತಿಳಿಸಿದರು.

ವಿವರ ಆನ್ಲೈನ್ನಲ್ಲಿ ದಾಖಲಿಸಿ
ಧಾರವಾಡದ ಎಲ್ಲ ಸರ್ಕಾರಿ, ಖಾಸಗಿ ಆರೋಗ್ಯ ಸಂಸ್ಥೆಗಳ ವೈಧ್ಯಾಧಿಕಾರಿಗಳಿಗೆ ನಿಗಧಿತ ಅವಧಿಯಲ್ಲಿ ಜನನ ಮರಣಗಳ ವಿವರಗಳನ್ನು ಆನ್ಲೈನ್ನಲ್ಲಿ ಸಹ ದಾಖಲಿಸಬೇಕು. ಇನ್ನೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳುಈ ನೋಂದಣಿ ಕಾರ್ಯವನ್ನು ವೈದ್ಯಕೀಯ ಸಂಸ್ಥೆಗಳಲ್ಲಿ ಸರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದರು.
ಹೋಂ ಲೋನ್ ಮಾಡುವಾಗ ಹಿಡನ್ ಚಾರ್ಜಸ್ ಗೊತ್ತಿರಲಿ
ಜನನ ಮತ್ತು ಮರಣ ನೋಂದಣಿಗಳಲ್ಲಿ ತಿದ್ದುಪಡೆಗೆ ಅವಕಾಶ ನೀಡದೆ ಸರಿಯಾಗಿ ನಿಗಧಿತ ಅವಧಿಯೊಳಗೆ ನೋಂದಣಿ ಕಾರ್ಯ ಕೈಗೊಂಡು ಸಾರ್ವಜಕನಿಕರಿಗೆ ತೊಂದರೆಯಾಗದಂತೆ ಪ್ರಮಾಣ ಪತ್ರ ನೀಡಬೇಕು.
375 ಅರ್ಜಿ ಸ್ವೀಕೃತ
2024 ಜಿಲ್ಲೆಯಲ್ಲಿ ಜುಲೈ 1ರಿಂದ ಗ್ರಾಮೀಣ ಭಾಗದ ಎಲ್ಲಾ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ ಮರಣಗಳ ಉಪನೋಂದಣಾಧಿಕಾರಿಯಾಗಿ ಸರ್ಕಾರವು ನೇಮಕ ಮಾಡಿದೆ. ಜುಲೈ 2024ರೊಳಗೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ 375 ಅರ್ಜಿಗಳು ಸ್ವೀಕೃತವಾಗಿದೆ. ಅವುಗಳ ಪೈಕಿ 311 ಅರ್ಜಿಗಳ ಅನುಮೋದನೆ ಮರಣಪ್ರಮಾಣ ಪತ್ರಗಳನ್ನು ವಿತರಿಸಿರುವ ಕುರಿತು ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳು ನಿರ್ದೇಶಿಸಿದರು.

ಜಿಲ್ಲೆಯಲ್ಲಿ ಹೊಸದಾಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳಿಗೆ ಜನನ ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಿರುವ ಹಾಗೂ ನೋಂದಣಿ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಅದಕ್ಕಾಗಿ ಗ್ರಾಮ ಪಂಚಾಯತಿಯಲ್ಲಿ ಇರುವ ಸ್ವಚ್ಚತಾ ವಾಹಿನಿ ಮುಖಾಂತರ ಮತ್ತು ಡಂಗೂರ ಸಾರುವ ಮುಖಾಂತರ, ಗ್ರಾಮ ಸಭೆಯಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಎಸ್.ಮುಗನೂರಮಠ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಶಿ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಉಪನಿರ್ದೇಶಕಿ ಡಾ. ಕುಕನೂರ, ತಾಲೂಕ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು, ಪಟ್ಟಣ ಪಂಚಾಯತಿ ಮತ್ತು ಪುರಸಭೆಗಳ ಮುಖ್ಯಾಧಿಕಾರಿಗಳು ಪಾಲ್ಗೊಂಡಿದ್ದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications