Microfinance: ಮೈಕ್ರೋ ಫೈನಾನ್ಸ್ ವಿರುದ್ಧ ಧಾರವಾಡ ಜಿಲ್ಲಾಡಳಿತದ ಸಮರ ಶುರು
ಧಾರವಾಡ, ಜನವರಿ 31: ಮೈಕ್ರೋ ಫೈನಾನ್ಸ್, ವಿವಿಧ ಹಣಕಾಸು ಸಂಸ್ಥೆ ಹಾಗೂ ಲೇವಾದೇವಿಗಾರರು ಸಾಲ ವಸೂಲಾತಿಯಲ್ಲಿ ನಿಯಮ ಬಾಹೀರವಾಗಿ ನಡೆದುಕೊಂಡಲ್ಲಿ ತಕ್ಷಣ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಮೂಲಕ ಧಾರವಾಡದಲ್ಲಿ ಮೈಕ್ರೋ ಫೈನಾನ್ಸ್ ವಿರುದ್ಧ ಜಿಲ್ಲಾಡಳಿತ ಸಮರ ಆರಂಭವಾಗಿದೆ.
ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ, ಮೈಕ್ರೋ ಫೈನಾನ್ಸ್ ಕಂಪನಿಗಳ ಸಾಲ ವಸೂಲಾತಿ ನೆಪದಲ್ಲಿ ಸಾಲಗಾರರಿಗೆ ಆಗುತ್ತಿರುವ ಕಿರಕುಳ ಹಿನ್ನಲೆಯಲ್ಲಿ ಮೈಕ್ರೊಫೈನಾನ್ಸ್, ಫೈನಾನ್ಸ್ ಕಾರ್ಪರೇಷನ್, ಲೇವಾದೇವಿಗಾರರು, ಗಿರವಿದಾರರು ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಅವರು, ಮೈಕ್ರೊ ಫೈನಾನ್ಸ್ಗಳು ಭಾರತೀಯ ರೀಜರ್ವ್ ಬ್ಯಾಂಕ್ ನಿಯಮದ ಪ್ರಕಾರ ವ್ಯವಹಾರ ನಡೆಸಬೇಕು. ಸಾಲದ ಕಾರಣಕ್ಕೆ ಜೀವ ಹಾನಿ ಆಗಬಾರದು. ನಿರ್ದಿಷ್ಟ ಪಡಿಸಿರುವ ನಿಯಮಗಳ ಚೌಕಟ್ಟಿನಲ್ಲಿ ಸಾಲ ವಸೂಲಾತಿ ಆಗಬೇಕು ಹೊರತು, ಯಾವುದೇ ರೀತಿಯಲ್ಲಿ ಸಾಲಗಾರರಿಗೆ ತೊಂದರೆ ಕೊಡುತ್ತಿರುವ ಬಗ್ಗೆ ದೂರು ಬಂದಲ್ಲಿ ಮೈಕ್ರೋ ಫೈನಾನ್ಸ್ ವಿರುದ್ಧ ಕ್ರಮ ಜರುಗಿಸಲಾಗುತ್ತದೆ. ಸಾಮರ್ಥ್ಯಕ್ಕೆ ಅನುಗುಣವಾಗಿ ಸಾಲ ವಿತರಣೆ ಮಾಡಬೇಕು. ನಿಯಮ ಮೀರಿ ಸಾಲ ನೀಡಿ ಬಳಿಕ ಸಾಲಗಾರರ ಮೇಲೆ ದಬ್ಬಾಳಿಕೆ ನಡೆಸಿದಲ್ಲಿ ಅದಕ್ಕೆ ನಿಮ್ಮನ್ನೇ ಜವಾಬ್ದಾರರನ್ನಾಗಿ ಮಾಡಲಾಗುವುದೆಂದು ಎಂದು ತಿಳಿಸಿದರು.
ಸಾಲ ಪಡೆಯುವ ವ್ಯಕ್ತಿಗೆ ಸಾಲ ಎಷ್ಟು, ಬಡ್ಡಿದರ, ಕಂತುಗಳು, ವಸೂಲಿ ಸ್ಥಳ, ವಸೂಲುಗಾರ ಯಾರು, ಮುಂತಾದ ವಿವರ ಇರುವ ಕಾರ್ಡ್ ನೀಡಬೇಕು. ಇನ್ನು ಸಂಸ್ಥೆಯ ಕಚೇರಿಯಲ್ಲಿ ಅಥವಾ ವ್ಯವಹಾರದ ನಿರ್ದಿಷ್ಟ ಸ್ಥಳದಲ್ಲಿ ತಮ್ಮ ಮೈಕ್ರೊ ಫೈನಾನ್ಸ್ ಆರ್ಥಿಕ ಕಾರ್ಯಚಟುವಟಿಕೆಗಳ ಬಗ್ಗೆ ವಿವರವಾದ ಫಲಕವನ್ನು ಸಾರ್ವಜನಿಕರಿಗೆ ಅಥವಾ ಗ್ರಾಹಕರಿಗೆ ಕಾಣುವಂತೆ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಮೈಕ್ರೊ ಫೈನಾನ್ಸ್ ಸಾಲ ವಸೂಲು ಮಾಡುವವರು ಸಾಲಗಾರರ ಜೊತೆ ಮಾನವೀಯತೆಯಿಂದ ನಡೆದುಕೊಳ್ಳುವದನ್ನು ಕಲಿಯಬೇಕು. ಕೇವಲ ವ್ಯಾಪಾರದ ದೃಷ್ಠಿಯಿಂದ ನಡೆದುಕೊಂಡಿದ್ದು ಕಂಡುಬಂದಲ್ಲಿ ದೂರು ಬರದೇ ಇದ್ದರೂ ಸೊಮೋಟೋ ಕೇಸ್ ದಾಖಲಿಸಿ, ಕಾನೂನು ರೀತಿಯಲ್ಲಿ ಕ್ರಮಕೈಗೊಳ್ಳಲಾಗುವುದು ಎಂದುಸ ಎಚ್ಚರಿಕೆ ನೀಡಿದರು.

ವಿವಿಧ ಹಣಕಾಸು ಸಂಸ್ಥೆಗಳು ಸಾಲ ಕೊಟ್ಟ ಮೇಲೆ ಹೇಗೆ ವಸೂಲಾತಿ ಮಾಡಬೇಕೆಂಬುವುದರ ಬಗ್ಗೆ ನಿಯಮಗಳಿವೆ. ವಸೂಲಾತಿ ಮಾಡುವ ನಿಟ್ಟಿನಲ್ಲಿ ಗ್ರಾಹಕರಿಗೆ ತೊಂದರೆ ನೀಡಿದಲ್ಲಿ ನಿರ್ಧಾಕ್ಷಣ್ಯವಾಗಿ ಕ್ರಮಕೈಗೊಳ್ಳಲಾಗುತ್ತದೆ. ಗ್ರಾಹಕರ ಜೊತೆ ವಿನಯದಿಂದ ನಡೆದುಕೊಳ್ಳಬೇಕು. ಸಾಲ ವಸೂಲಾತಿಯಲ್ಲಿ ನಿಯಮ ಬಾಹೀರವಾಗಿ ಕ್ರಮವಹಿಸಿರುವ ಬಗ್ಗೆ ಈಗಾಗಲೇ ಮಹಾನಗರದಲ್ಲಿ ಒಂದು ಮತ್ತು ಜಿಲ್ಲಾ ಗ್ರಾಮೀಣದಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಹಾಯವಾಣಿಗೆ ಕರೆ
ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಸೇರಿದಂತೆ ಇತರೆ ಯಾವುದೇ ಹಣಕಾಸು ಸಂಸ್ಥೆಯವರು ಸಾಲ ವಸೂಲಾತಿಯಲ್ಲಿ ಕಿರುಕುಳ ನೀಡಿದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಿರುವ ಸಹಾಯವಾಣಿ ಅಥವಾ ಟೋಲ್ ಪ್ರೀ ನಂಬರಗೆ ಕರೆ ಮಾಡಿ, ಮಾಹಿತಿ ನೀಡಬಹುದು ಅಥವಾ ದೂರು ನಿವಾರಣಾ ಕೇಂದ್ರಕ್ಕೆ ಖುದ್ದಾಗಿ ಬಂದು ದಾಖಲೆಗಳೊಂದಿಗೆ ದೂರು ನೀಡಬಹುದು. ಮಾಹಿತಿದಾರರು ಬಯಸಿದ್ದಲ್ಲಿ ಅವರ ವಿವರಗಳನ್ನು ಗೌಪ್ಯವಾಗಿಟ್ಟು ಸಂಬಂಧಿಸಿದ ಮೈಕ್ರೊ ಫೈನಾನ್ಸ್, ಇತರ ಹಣಕಾಸು ಸಂಸ್ಥೆಗಳ ವಿರುದ್ಧ ಸರಕಾರಿ ಕಾನೂನುಗಳ ಪ್ರಕಾರ ಪೊಲೀಸ್ ತನಿಖೆ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಮೈಕ್ರೋ ಫೈನಾನ್ಸ್ ವಿರುದ್ಧ ಜಿಲ್ಲಾಡಳಿತ ಈಗಾಗಲೇ ತೆಗೆದುಕೊಂಡಿರುವ ಕ್ರಮದ ಬಗ್ಗೆ ವಿವರಿಸಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications