ಬೋರ್ವೆಲ್ ನೀರು ಹಳ್ಳಕ್ಕೆ ಹರಿಸಿ ಮೂಕ ಪ್ರಾಣಿಗಳ ದಾಹ ತೀರಿಸುತ್ತಿರುವ ರೈತ
ಹುಬ್ಬಳ್ಳಿ, ಏಪ್ರಿಲ್ 07: ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದೆ. ಬಹುತೇಕ ಕಡೆಗಳಲ್ಲಿ ಕುಡಿಯುವ ನೀರಿಗೆ ತಾತ್ವಾರ ಎದುರಾಗಿದೆ. ಬಿಡು ಬೇಸಿಗೆಗೆ ಮನುಷ್ಯರೇ ಒಡ್ಡಾಡುವ ಸಮಯದಲ್ಲಿ ಪ್ರಾಣಿ, ಪಕ್ಷಿಗಳ ಪರಿಸ್ಥಿತಿ ಹೇಳತೀರದಾಗಿದೆ. ಇಂತಹ ಸಂದರ್ಭದಲ್ಲಿ ರೈತರೊಬ್ಬರು ಪ್ರಾಣಿಗಳಿಗಾಗಿ ಬೋರ್ ವೆಲ್ ನೀರು ಹರಿಸುವ ಮೂಲಕ ಮೂಕ ಜೀವಿಗಳಿಗೆ ಆಸರೆಯಾಗಿದ್ದಾರೆ.
ಅವಳಿ ನಗರ ಹುಬ್ಬಳ್ಳಿ-ಧಾರವಾಡ ವ್ಯಾಪ್ತಿಯಲ್ಲೂ ನೀರು ಪೂರೈಕೆಯಲ್ಲಿ ಕೆಲವೆಡೆ ಸಮಸ್ಯೆ ಆಗಿದೆ. ಜಿಲ್ಲಾಸ್ಪತ್ರೆಯಲ್ಲಿ ಸಮರ್ಪಕ ನೀರಿಲ್ಲದೇ ರೋಗಿಗಳು ಪರದಾಡುತ್ತಿದ್ದಾರೆ. ಮನುಷ್ಯನಂತೆ ಪ್ರಾಣಿಗಳು ಬೇಸಿಗೆಯ ಸಂದರ್ಭದಲ್ಲಿ ನೀರಿಲ್ಲದೇ ಮೂಕವೇದನೆ ಅನುಭವಿಸುತ್ತಿವೆ. ಇದನ್ನು ಕಂಡ ರೈತರೊಬ್ಬರು ನೀರು ಹರಿಸಿ ಪ್ರಾಣಿಗಳಿಗೆ ಆಸರೆಯಾಗಿದ್ದಾರೆ.

ಪ್ರಾಣಿಗಳು ನೀರಿಗಾಗಿ ಹಪಾಹಪಿಸುತ್ತಿರುವುದನ್ನು ನೋಡಲಾರದೇ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮಸಳಿಕಟ್ಟಿ ಗ್ರಾಮದ ರೈತ ಗೋವಿಂದ ಗುಂಡಕಲ್ ಅವರು ಬೋರ್ ಬೆಲ್ ಮೂಲಕ ಬತ್ತಿ ಹೋಗಿದ್ದ ಹಳ್ಳಕ್ಕೆ ನೀರು ತುಂಬಿಸಿದ್ದಾರೆ. ಹಳ್ಳಕ್ಕೆ ನೀರು ಹರಿಸಿ ಪ್ರಾಣಿಗಳ ದಾಹ ತೀರಿಸಲು ಮುಂದಾಗಿದ್ದಾರೆ.
ವನ್ಯಜೀವಿಗಳಿಗೆ ನೀರು ಹರಿಸಿ ಮಾನವೀಯತೆ
ರೈತ ಗೋವಿಂದ ಗುಂಡಕಲ್ ಅವರು ಸರಿಸುಮಾರು ಮೂರು ವರ್ಷದಿಂದ ಬರಗಾಲದ ಸಂದರ್ಭದಲ್ಲಿ ಕಾಡಿನ ವನ್ಯಜೀವಿಗಳಿಗೆ ಜಾನುವಾರುಗಳಿಗೆ ಪ್ರಾಣಿ ಪಕ್ಷಿ ಸಂಕುಲಕ್ಕೆ ಬತ್ತಿ ಹೋದ ಹಳ್ಳಕ್ಕೆ ನೀರು ಬಿಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇವರ ಈ ಕಾರ್ಯ ಇತರರಿಗೂ ಮಾದರಿಯಾಗಿದೆ.
ರಣಬಿಸಿಲಿನ ತಾಪಕ್ಕೆ ತನ್ನ ಜಮೀನಿನಲ್ಲಿರುವ ಕೊಳವೆ ಬಾವಿಯ ಮುಖಾಂತರ ಪ್ರತಿನಿತ್ಯ ನೀರು ಹಾಯಿಸುತ್ತಿರುವ ರೈತ ಗೋವಿಂದ ಗುಂಡುಕಲ್ ಅವರು ಕೃಷಿ ಜಮೀನಿನಲ್ಲಿ ಜೀವನ ನಡೆಸುತ್ತಾ ಬದುಕು ಕಟ್ಟಿಕೊಂಡಿದ್ದಾರೆ. ಬರಗಾಲದಲ್ಲಿ ಹೆಚ್ಚಾಗಿರುವ ಈ ರಣಬಿಸಿಲಿಗೆ ಪ್ರಾಣಿಗಳ ವೇದನೆ ಅರ್ಥೈಸಿಕೊಂಡಿದ್ದಾರೆ.
ಜಮೀನಿಗೆ ನಿರಿಲ್ಲದಿದ್ದರೂ ಪ್ರಾಣಿಗಳಿಗೆ ಆಸರೆ
ಇವರು ತಮ್ಮ ಜಮೀನಿಗೆ ನೀರು ಇಲ್ಲದಿದ್ದರೂ ಪರವಾಗಿಲ್ಲ ಆದರೆ ಮೂಕ ಪ್ರಾಣಿಗಳಿಗೆ ಕುಡಿಯಲು ನೀರು ಕೊಟ್ಟು ದಾಹ ನೀಗಿಸಿದ್ದಾರೆ. ರೈತ ಗೋವಿಂದ ಅವರ ಕಾರ್ಯ ನಿಜಕ್ಕೂ ಶ್ಲಾಘನೀಯ. ಈ ಮಾನವೀಯ ಕಾರ್ಯಕ್ಕೆ ತಾಲೂಕಿನ ವಿವಿಧ ಅಧಿಕಾರಿಗಳು ಮುಂದಾಗಬೇಕಾಗಿದೆ.

ಬೋರ್ವೆಲ್ ಪೈಪ್ ಮೂಲಕ ಹಳ್ಳಕ್ಕೆ ನೀರು
ಪ್ರತಿಯೊಬ್ಬ ಜೀವಿಯಲ್ಲೂ ಒಳ್ಳೆಯ ಭಾವನೆ ಇರುವುದಕ್ಕೆ ಗೋವಿಂದ ಗುಂಡಕಲ್ಲು ಅವರು ಸಾಕ್ಷಿಯಾಗಿದ್ದಾರೆ. ಕಾಡಿನ ವನ್ಯಜೀವಿ ಪಶು-ಪಕ್ಷಿ ದಾಹವನ್ನು ನೀಗಿಸುತ್ತಿರುವ ರೈತ ಈ ಬರಗಾಲದ ಪರಿಸ್ಥಿತಿ ಇರುವುದರಿಂದ ಕಾಡಿನಂಚಿನಲ್ಲಿರುವ ಈ ರೈತನ ಜಮೀನಿನ ಪಕ್ಕದ ಹಳ್ಳಕ್ಕೆ ಪ್ರತಿನಿತ್ಯ ಕೊಳವೆಬಾವಿ ಪೈಪ್ ಮುಖಾಂತರ ನೀರು ಬಿಡುತ್ತಿರುವುದು ಈ ಕಾರ್ಯ ಮೆಚ್ಚಿಕೊಳ್ಳುವಂತದ್ದು ಎಂದು ಸ್ಥಳೀಯರು ಹೇಳಿದ್ದಾರೆ.
ಸಮರ್ಪಕ ವಿದ್ಯುತ್ ಪೂರೈಸಲು ಒತ್ತಾಯ
ಪ್ರಾಣಿ ಪಕ್ಷಿಗಳಿಗೆ ನೀರಿನ ಆಸರೆಯಾಗುವುದು ನಮಗೆ ತೃಪ್ತಿ ತಂದಿದೆ. ಒಂದು ಹೊತ್ತು ಊಟ ಇಲ್ಲದಿದ್ದರೂ ಪರವಾಗಿಲ್ಲ ಜೀವನ ನಡೆಯುತ್ತೆ. ಪ್ರತಿ ಕ್ಷಣದಲ್ಲೂ ನೀರು ಸಕಲ ಜೀವಿಗಳಿಗೆ ಅವಶ್ಯವಾಗಿದೆ. ಪ್ರಾಣಿ ಸಂಕುಲಗಳು ಸಂತೋಷಪಟ್ಟರೆ ಅದೇ ನಮಗೆ ಸಂತೋಷ ಎನ್ನುತ್ತಾರೆ ರೈತ ಗೊವಿಂದ್ ಗುಂಡುಕಲ್ ಪುತ್ರ ಮಾರುತಿ ಗುಂಡುಕಲ್.
ವಿದ್ಯುತ್ ಇಲ್ಲದಿರುವುದರಿಂದ ಕೊಳವೆ ಬಾವಿ ಸ್ಥಗಿತಗೊಂಡಿತ್ತು. ಕಾಡಿನಂಚಿನಲ್ಲಿರುವ ಜಮೀನುಗಳಿಗೆ ನಿರಂತರವಾಗಿ ವಿದ್ಯುತ್ ನೀಡಬೇಕು. ಈ ಬರಗಾಲದ ಸಂದರ್ಭದಲ್ಲಿ ನೀರಿನ ಭವಣೆ ನೀಗಿಸಲು ತಾಲೂಕಿನ ಎಲ್ಲಾ ಅಧಿಕಾರಿ ವರ್ಗದವರು ಮುಂದಾಗಬೇಕಾಗಿದೆ. ವನ್ಯಜೀವಿ ಪ್ರಾಣಿ ಸಂಕುಲಕ್ಕೆ ಅರಣ್ಯದಲ್ಲಿ ಹಳ್ಳ ಕೊಳ್ಳ ಬತ್ತಿರುವುದರಿಂದ ವಿಶೇಷ ಕಾರ್ಯಾಚರಣೆ ಮಾಡಲು ಅಧಿಕಾರಿ ವರ್ಗ ಮುಂದಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ












Click it and Unblock the Notifications