ಅಭಿವೃದ್ಧಿ ಹೆಸರಲ್ಲಿ ಮೂಲಸೌಕರ್ಯ ಕಸಿದ ಅಧಿಕಾರಿಗಳು: ಸಂಕಷ್ಟದಲ್ಲಿ ಹಾಳಕುಸುಗಲ್ ಗ್ರಾಮ
ಹುಬ್ಬಳ್ಳಿ, ಆಗಸ್ಟ್ 11: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಾಳಕುಸುಗಲ್ ಗ್ರಾಮದಲ್ಲಿ ಮಳೆಗೆ ಸಂಪೂರ್ಣ ರಸ್ತೆ ಹಾಳಾಗಿದ್ದು ಇಡೀ ಗ್ರಾಮದಲ್ಲಿ ರಸ್ತೆ ಗುಂಡಿಗಳು ಬಿದ್ದು ಶಾಲೆಗೆ ಹೋಗಲು ಆಗುತ್ತಿಲ್ಲ ಎಂದು ಶಾಲಾ ಮಕ್ಕಳು ಗ್ರಾಮದ ರಸ್ತೆ ನಡುವೆ ಮುಳ್ಳುಗಳಿಗೆ ಬೆಂಕಿ ಹಚ್ಚಿ ಇಡೀ ದಿನ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಸ್ತೆಯಲ್ಲಿ ಗುಂಡಿಗಳು ಇವೆಯೇ ಅಥವಾ ಗುಂಡಿಗಳಲ್ಲಿ ರಸ್ತೆಗಳು ಇವೆಯಾ ಎನ್ನುವ ಭಾವನೆ ರಸ್ತೆಗಳನ್ನು ನೋಡಿದರೆ ಆಗುತ್ತದೆ.

ಐತಿಹಾಸಿಕ ಹಿನ್ನೆಲೆಯ ಈ ಊರಿನಲ್ಲಿ ನೀವು ಒಂದು ಸಲ ಹೋಗಿ ಬರಬೇಕಾದರೆ ಖಂಡಿತವಾಗಿಯೂ ಸಾವಿರ ಸಲ ವಿಚಾರ ಮಾಡಬೇಕು. ಅಷ್ಟರ ಮಟ್ಟಿಗೆ ರಸ್ತೆ ಹದಗೆಟ್ಟಿದ್ದು, ಮಹಿಳೆಯರು, ಮಕ್ಕಳು ವಯೋವೃದ್ಧರು ಪ್ರತಿನಿತ್ಯ ಪರದಾಡುತ್ತಿದ್ದಾರೆ.
ಹುಬ್ಬಳ್ಳಿಯ ಗ್ರಾಮೀಣ ಪ್ರದೇಶಕ್ಕೆ ಸಾವಿರಾರು ಕೋಟಿ ಅನುದಾನದಿಂದ ಅಭಿವೃದ್ಧಿಯಾಗಿದೆ. ಯಾವುದೇ ಗ್ರಾಮೀಣ ರೈತರ ಸಾರ್ವಜನಿಕರಿಗೆ ಮೂಲ ಸೌಕರ್ಯಗಳಿಗೆ ಹಾಗೂ ಕಚ್ಚಾ ರಸ್ತೆಗಳಿಗೆ ರಾಜ್ಯದಲ್ಲಿ ಹೆಚ್ಚಿನ ಅನುದಾನ ಬಂದಿರುವ ಕ್ಷೇತ್ರವಾಗಿದೆ ಎಂದು ಜನಪ್ರತಿನಿಧಿಗಳು ಹೇಳಿದರೆ ತಾಲೂಕಿನ ಹಾಳಕುಸುಗಲ್ಲ ಗ್ರಾಮ ಮಾತ್ರ ಮೂಲ ಸೌಕರ್ಯಗಳಿಂದ ನಲುಕುತ್ತಿದೆ. ಈ ಭಾಗದ ಜನರು ಅಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ ಹಿಡಿಶಾಪ ಮಕ್ಕಳು ಹಾಕುತ್ತಿರುವುದು ಸಹಜವಾಗಿದೆ.
ಇಂತಹ ಸಾಕಷ್ಟು ಸಮಸ್ಯೆಗಳ ಸುರಿಮಾಲೆಯನ್ನು ಹೊತ್ತಿರುವ ಈ ಗ್ರಾಮದಲ್ಲಿ ಈ ಹಿಂದೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಮಾಡಿದರು ಏನು ಪ್ರಯೋಜನ ಆಗಿಲ್ಲ. ಈ ಗ್ರಾಮದಲ್ಲಿ ಒಂದಲ್ಲಾ ಎರಡಲ್ಲ ಎಲ್ಲಿ ನೋಡಿದರಲ್ಲಿ ರಸ್ತೆಗಳ ಸ್ಥಿತಿ ಚಿಂತಾಚಿನಕವಾಗಿವೆ. ಪಟ್ಟಣದಿಂದ ಹಾಳಕುಸುಗಲ್ಲ ಗ್ರಾಮಕ್ಕೆ ಬರುವಂತಹ ಮುಖ್ಯರಸ್ತೆ ಕಾಂಕ್ರಿಟ್ ಕಾಮಗಾರಿಗೆ ಚರಂಡಿ ಕೆಲಸಕ್ಕೆಂದು ತೆಗೆದಿರುವಂತಹ ತಗ್ಗಿನಿಂದ ಗ್ರಾಮಕ್ಕೆ ಹೋಗಲು ಸಹ ರಸ್ತೆ ಇಲ್ಲದಂತಾಗಿದೆ. ಇನ್ನೇನು ಮುಖ್ಯರಸ್ತೆಯ ಸಮಸ್ಯೆ ಬಿಟ್ಟು ಗ್ರಾಮದ ಒಳರಸ್ತೆಗಳ ಸ್ಥಿತಿಯಂತೂ ನಡೆದುಕೊಂಡು ಹೋಗಲು ಸಾಧ್ಯವೇ ಇಲ್ಲದಂತಾಗಿದೆ.

ರೈತರ ಚಕ್ಕಡಿ, ಟ್ರ್ಯಾಕ್ಟರ್ಗಳು ಮಣ್ಣಿನ ರಾಡಿಯಲ್ಲಿ ಸಿಲುಕಿಕೊಳ್ಳುತ್ತವೆ. ಇನ್ನು ರೈತರು ತಮ್ಮ ಮನೆಗಳಿಗೆ ಹೋಗಬೇಕೆಂದರೆ ಹರಸಾಹಸವೇ ಪಡಬೇಕು. ಸತತ ಮಳೆಯಿಂದ ರಸ್ತೆಗಳು ಹಾಳಾಗಿಲ್ಲ. ಆದರೆ ಗ್ರಾಮ ಅಭಿವೃದ್ದಿ ಹೆಸರಿನಲ್ಲಿ ಹಾಳಾಗಿರುವುದು ಸತ್ಯ. ರಸ್ತೆ, ನೀರು ಇತರೆ ಸರ್ಕಾರದ ಯೋಜನೆಗಳು ಸರಿಯಾಗಿ ಗ್ರಾಮಕ್ಕೆ ತಲುಪಬೇಕಾಗಿದೆ. ಹೆಸರಿಗೆ ಮಾತ್ರ ಅಭಿವೃದ್ದಿ ಜಪವಾಗಿದೆ ಎಂದು ಸ್ಥಳೀಯರಾದ ಪ್ರಕಾಶ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು.
ರಸ್ತೆಗಳ ಸ್ಥಿತಿ ಒಂದು ಕಡೆಯಾದರೆ ಗ್ರಾಮದ ಅಂಗನವಾಡಿ ಕೇಂದ್ರ ಬೀಳುವ ಸ್ಥಿತಿಯಲ್ಲಿದೆ. ಇದರಲ್ಲಿಯೇ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಿಗೆ ಪಾಠವನ್ನು ಮಾಡುತ್ತಿದ್ದಾರೆ. ಆದರೆ ಅದೇ ಆವರಣದಲ್ಲಿರುವ ಶಾಲಾ ಕೊಠಡಿಯಲ್ಲಿ ರಸ್ತೆ ಕಾಮಗಾರಿಗೆ ಬಂದಂತಹ ಗುತ್ತಿಗೆದಾರರಿಗೆ ಉತ್ತಮ ಕೊಠಡಿ ನೀಡಿ, ಅಂಗನವಾಡಿಯಲ್ಲಿ ಕಲಿಯುತ್ತಿರುವ ಮಕ್ಕಳ ಹಿತ ಕಾಪಾಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಮೂಲ ಸೌಕರ್ಯಗಳಿಂದ ವಂಚಿತವಾದ ಹಾಳಕುಸುಗಲ್ಲ ಗ್ರಾಮಕ್ಕೆ ಜನಪ್ರತಿನಿಧಿಗಳು, ಅಧಿಕಾರಿಗಳು ಬರಬೇಕಾಗಿದೆ. ಇದರ ವಾಸ್ತವಿಕ ಪರಿಸ್ಥಿತಿ ನೋಡಬೇಕಾಗಿದೆ ಎನ್ನುವುದು ಸ್ಥಳೀಯರ ಆಗ್ರಹವಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications