ಧಾರವಾಡ: ಪಕ್ಷೇತರ ಅಭ್ಯರ್ಥಿ ದಿಂಗಾಲೇಶ್ವರ ಶ್ರೀ ವಿರುದ್ಧ ಭಕ್ತರು ಅಸಮಾಧಾನ
ಧಾರವಾಡ, ಏಪ್ರಿಲ್ 11: ಧಾರವಾಡ ಲೋಕಸಭಾ ಚುನಾವಣಾ ಕ್ಷೇತ್ರದಲ್ಲಿ ಬಿಜೆಪಿ ಪ್ರಹ್ಲಾದ್ ಜೋಶಿ ವಿರುದ್ಧ ಪಕ್ಷೇತರವಾಗಿ ಕಣಕ್ಕೆ ಇಳಿದಿರುವ ಶಿರಹಟ್ಟಿ ಮಠದ ಶ್ರಿ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳ ವಿರುದ್ಧ ಅವರ ಭಕ್ತರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಿರಹಟ್ಟಿ ಮಠದ ಉತ್ತರಾಧಿಕಾರಿಯಾಗಿ ಎರಡು ವರ್ಷದ ಹಿಂದೆ ನಾವು (ಭಕ್ತರು) ಭಾವೈಕ್ಯತೆಯ ಮಠಕ್ಕೆ ಉತ್ತರಾಧಿಕಾರಿಯಾಗಿ ಮಾಡಿದ್ದೇವೆ. ಆದರೆ ಇವರು ರಾಜಕೀಯ ಮಾಡುತ್ತಿದ್ದಾರೆ. ಮಠದ ಉತ್ತರಾಧಿಕಾರಿಯಾಗಿ ಮಾಡಿದ್ದು, ರಾಜಕೀಯ ಮಾಡಲು ಅಲ್ಲ ಎಂದು ಭಕ್ತರು ಎಚ್ಚರಿಕೆ ನೀಡಿದ್ದಾರೆ.

ಒಂದು ವೇಳೆ ರಾಜಕೀಯ ಮಾಡುವುದೇ ಆದರೆ, ಶ್ರೀ ದಿಂಗಾಲೇಶ್ವರ ಸ್ವಾಮೀಜಿಯವರು ಮಠವನ್ನು ತೊರೆದು ಬೇಕಾದರೆ ರಾಜಕೀಯ ಮಾಡಲಿ ಎಂದು ಆಗ್ರಹಿಸಿದ್ದಾರೆ. ಭಾವೈಕ್ಯತೆಯ ಸಂಕೇತವಾಗಿ ಮಠ ಹೆಸರು ಮಾಡಿದೆ. ಇಲ್ಲಿದ್ದುಕೊಂಡು ರಾಜಕೀಯ ಮಾಡುವು ಸರಿಯಲ್ಲ ಎಂದು ಭಕ್ತ ಸಮೂಹ ಬೇಸರ ವ್ಯಕ್ತಪಡಿಸಿದೆ.
ನಿರೀಕ್ಷೆಯಷ್ಟು ಬಾರದ ಜನ
ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಂತೆ ಇತ್ತೀಚೆಗೆ ಶ್ರಿಗಳು ಚುನಾವಣಾ ಪ್ರಚಾರ ಸಭೆ ಆರಂಭಿಸಿದ್ದರು. ಆದರೆ ಅವರ ಬೆಂಬಲಕ್ಕೆ ನಿರೀಕ್ಷಿತ ಜನರು, ಭಕ್ತರು ಸೇರಿಲ್ಲ ಎನ್ನಲಾಗಿದೆ. ದಿಂಗಾಲೇಶ್ವರ ಸ್ವಾಮೀಜಿ ರಾಜಕೀಯಕ್ಕೆ ಬಂದಿರುವುದು ಭಕ್ತರಿಗೆ ಇಷ್ಟವಿಲ್ಲದ್ದಕ್ಕೆ ಬೆಂಬಲ ಅಷ್ಟಾಗಿ ಸಿಗುತ್ತಿಲ್ಲ ಎಂದು ತಿಳಿದು ಬಂದಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications