ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಆಶ್ರಯವಾದ ಜನಜಾಗೃತಿ ಸಂಘ
ಧಾರವಾಡ, ಆಗಸ್ಟ್, 15: ಧಾರವಾಡದಲ್ಲಿ ಜನ ಜಾಗೃತಿ ಸಂಘ ಹಾಗೂ ಬಸವರಾಜ ಕೋರವಾರ ಗೆಳೆಯರ ಬಳಗದ ವತಿಯಿಂದ ಗ್ರಾಮೀಣ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ ಆರಂಭಗೊಂಡಿದೆ.
ಬಡ ಗ್ರಾಮೀಣ ವಿದ್ಯಾರ್ಥಿಗಳ ಜ್ಞಾನದ ದಾಹವನ್ನು ತೀರಿಸಲು ಈ ಸಂಘ ಮುಂದಾಗಿದೆ. ಕಳೆದ ಮೂರು ತಿಂಗಳಿನಿಂದ ನಿರಂತರವಾಗಿ ಶ್ರಮಿಸುತ್ತಿರುವ ಈ ಸಂಘದ ಸದಸ್ಯರು ಧಾರವಾಡ ತಾಲೂಕಿನ ಗ್ರಾಮೀಣ ಸರ್ಕಾರಿ ಶಾಲೆಗೆ ಉಚಿತವಾಗಿ ನೋಟ್ಬುಕ್ ವಿತರಿಸುತ್ತಿದೆ. ಆ ಮೂಲಕ ಬಡ ಮಕ್ಕಳ ಅಕ್ಷರದ ದಾಹವನ್ನು ನೀಗಿಸುತ್ತಿದ್ದಾರೆ. ಜಿಲ್ಲೆಯ 31ಕ್ಕೂ ಹೆಚ್ಚು ಗ್ರಾಮೀಣ ಶಾಲೆಗಳ 13 ಸಾವಿರ ವಿದ್ಯಾರ್ಥಿಗಳಿಗೆ ಸುಮಾರು 80,000 ನೋಟ್ಬುಕ್ಗಳನ್ನು ವಿತರಿಸಿದ್ದಾರೆ.
ಧಾರವಾಡ ನಗರದ ಸರ್ಕಾರಿ ಶಾಲೆಗಳಲ್ಲಿ ಪ್ರತಿ ವರ್ಷ ಸುಮಾರು 5 ಸಾವಿರ ನೋಟ್ಬುಕ್ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತಿತ್ತು. ಈಗ ಗ್ರಾಮೀಣ ಭಾಗದ ಶಾಲೆಯ ಮಕ್ಕಳಿಗೂ ನೋಟ್ಬುಕ್ ವಿತರಿಸುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ನಮ್ಮ ಈ ಸೇವೆ ಧಾರವಾಡ ಜಿಲ್ಲೆಯ ಸರ್ಕಾರಿ ಶಾಲೆಗಳ ಮಕ್ಕಳನ್ನು ವಿದ್ಯಾಭ್ಯಾಸದಲ್ಲಿ ಮುಂದೆ ತರುವುದೇ ಆಗಿದೆ. ಈ ವರ್ಷ ನೋಟ್ಬುಕ್ ವಿತರಿಸುವಂತೆ ಗ್ರಾಮೀಣ ಮಕ್ಕಳ ಪೋಷಕರಿಂದ ಮನವಿ ಬಂದಿದೆ. ಗ್ರಾಮೀಣ ಕುಟುಂಬಗಳ ಆರ್ಥಿಕ ಸ್ಥಿತಿಯನ್ನು ನೋಡಿ, ಅಲ್ಲಿನ ಶಾಲೆ ಮಕ್ಕಳಿಗೂ ಈ ಸೇವೆಯನ್ನು ವಿಸ್ತರಿಸಿದ್ದೇವೆ ಎಂದು ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ್ ಕೊರವರ ಹೇಳಿದ್ದಾರೆ.

ಪಲಿಮಾರು ಪ್ರಿಂಟರ್ಸ್ನಲ್ಲಿ ಆರ್ಡರ್:
ಈ ಯೋಜನೆಯು ಯಾವುದೇ ಖಾತೆಯನ್ನು ನಿರ್ವಹಿಸುತ್ತಿಲ್ಲ. ಸುಮಾರು 50-60 ಸ್ನೇಹಿತರು ನೇರವಾಗಿ ಹುಬ್ಬಳ್ಳಿಯ ಪಲಿಮಾರು ಪ್ರಿಂಟರ್ಸ್ನಲ್ಲಿ ಆರ್ಡರ್ಗಳನ್ನು ನೀಡುತ್ತಿದ್ದು, ಅವರು ನೋಟ್ಬುಕ್ಗಳನ್ನು ನಮಗೆ ಸಗಟು ಬೆಲೆಗೆ ನೀಡುತ್ತಾರೆ. 1 ರಿಂದ 3ನೇ ತರಗತಿಯಲ್ಲಿ ಓದುತ್ತಿರುವ ಪ್ರತಿ ವಿದ್ಯಾರ್ಥಿಗೆ ತಲಾ ಮೂರು ನೋಟ್ಬುಕ್ ವಿತರಿಸಲಾಗುತ್ತಿದೆ. 4 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ 12 ನೋಟ್ಬುಕ್ ನೀಡಲಾಗುತ್ತದೆ. ಸರ್ಕಾರಿ ಶಾಲಾ ಶಿಕ್ಷಕರು ನೀಡಿದ ಅವಶ್ಯಕತೆಗಳನ್ನು ಸಹ ನಾವು ಈಡೇರಿಸುತ್ತಿದ್ದೇವೆ ಎಂದು ಅವರು ಹೇಳಿದರು.

ಮುಂದಿನ ತಿಂಗಳೊಳಗೆ ಒಂದು ಲಕ್ಷ ನೋಟ್ಬುಕ್ಗಳನ್ನು ವಿತರಿಸುವ ಗುರಿಯನ್ನು ನಮ್ಮ ಜನಜಾಗೃತಿ ಸಂಘ ಹೊಂದಿದೆ. ಈ ಸಂಘ ಗ್ರಾಮೀಣ ಭಾಗದ ಬಡ ಮಕ್ಕಳಿಗೆ ಶಿಕ್ಷಣ ಮುಂದುವರೆಸಲು ಸದಾ ಸಹಕಾರ ನೀಡುತ್ತಿದೆ. ಜ್ಞಾನದ ಹಸಿವಿನೊಂದಿಗೆ ಈ ಸಂಘವು ಪರಿಸರ ಸಂರಕ್ಷಣೆಯಲ್ಲಿ ನಿರತವಾಗಿದೆ. ಪ್ರತಿ ಶಾಲೆಗಳಿಗೆ ತೆರಳಿ ಅಲ್ಲಿ ನೋಟ್ಬುಕ್ ವಿತರಣೆ ಮಾಡುವುದಲ್ಲದೇ ಶಾಲಾ ಮಕ್ಕಳಿಂದಲೇ ಸಸಿಗಳನ್ನು ನೆಡೆಸುತ್ತಿದ್ದಾರೆ. ನೋಟ್ಬುಕ್ ವಿತರಣೆ ಜೊತೆಗೆ ಪರಿಸರ ಸ್ನೇಹಿ ಕಾರ್ಯದಲ್ಲಿ ತೊಡಗಿರುವ ಈ ಸಂಘಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications