Get Updates
Get notified of breaking news, exclusive insights, and must-see stories!

Dharwad Lok Sabha Election Result 2024: ಯಾರಾಗಲಿದ್ದಾರೆ ಪೇಡಾನಗರಿಯ ಅಧಿಪತಿ?

Dharwad Lok Sabha Election 2024: ಈಗಾಗಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ 2024ರ ಎರಡು ಹಂತದ ಲೋಕಸಭಾ ಚುನಾವಣೆ ಮುಗಿದಿದ್ದು, ಫಲಿತಾಂಶಕ್ಕೆ ಇನ್ನು ಕೇವಲ ಒಂದು ವಾರ ಅಷ್ಟೇ ಬಾಕಿಯಿದೆ. ಇನ್ನು ಮೇ 7ರಂದು ಧಾರವಾಡ ಲೋಕಸಭಾ ಕಣಕ್ಕೆ ಚುನಾವಣೆ ನಡೆದಿದ್ದು, ಈ ಬಾರಿ ಯಾರು ವಿಜಯದ ಮಾಲೆ ಹಾಕಿಕೊಳ್ಳಲಿದ್ದಾರೆ ಎನ್ನುವ ಮುನ್ನೋಟವನ್ನು ಇಲ್ಲಿ ತಿಳಿಯಿರಿ.

ಈ ಬಾರಿ ಧಾರವಾಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಪ್ರಹ್ಲಾದ್ ಜೋಶಿ ಮತ್ತು ಕಾಂಗ್ರೆಸ್‌ನಿಂದ ವಿನೋದ್‌ ಅಸೂಟಿ ಅವರು ಕಣಕ್ಕಿಳಿದಿದ್ದರು. ಈ ಇಬ್ಬರಲ್ಲಿ ಕ್ಷೇತ್ರದಲ್ಲಿ ಹೆಚ್ಚು ವರ್ಚಸ್ಸು ಹೊಂದಿರುವವರು ಯಾರು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

Dharwad Lok Sabha Election 2024 Results Who Will Win Pralhad Joshi Or Vinod Asooti

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ನೇರಾ ಹಣಾಹಣಿ ಏರ್ಪಟ್ಟಿದ್ದು, ಸತತವಾಗಿ ನಾಲ್ಕು ಬಾರಿ ಗೆಲುವಿನ ನಗೆ ಬೀರಿ ಇದೀಗ ಬಿಜೆಪಿಯ ಪ್ರಲ್ಹಾದ್‌ ಜೋಶಿ ಅವರು 5ನೇ ಬಾರಿಯ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಇನ್ನು ಕಾಂಗ್ರೆಸ್‌ನಿಂದ‌ ಹೊಸಮುಖ ವಿನೋದ ಅಸೂಟಿ ಪ್ರಹ್ಲಾದ್‌ ಜೋಶಿಯವರಿಗೆ ಎದುರಾಳಿಯಾಗಿದ್ದಾರೆ.

ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್‌ ಜೋಶಿ ಅವರ ಪ್ಲಸ್‌

* ಕ್ಷೇತ್ರದ ರಾಜಕೀಯದಲ್ಲಿ ಪಳಗಿದವರಾಗಿದ್ದಾರೆ.

* ಅಪಾರ ಅನುಭವವುಳ್ಳ ಧೀರ್ಘಾವಧಿ ರಾಜಕೀಯದ ಅನುಭವ ಹೊಂದಿದ್ದಾರೆ.

ಪ್ರಹ್ಲಾದ್‌ ಜೋಶಿ ಅವರ ಮೈನಸ್‌

* ಮೀಸಲಾತಿ ವಿಚಾರದಲ್ಲಿ ಜೋಶಿಯವರಿಗೆ ಹಿನ್ನೆಡೆಯಾಗುವ ಸಾಧ್ಯತೆ ಇದೆ.

* ಶೆಟ್ಟರ್‌ ಅವರಿಗೆ ಧಾರವಾಡ ಕ್ಷೇತ್ರದಿಂದ ಟಿಕೆಟ್‌ ತಪ್ಪಿರುವುದು ಹೊಡೆತ ಕೊಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ವಿನೋದ್‌ ಅಸೂಟಿ ಅವರ ಪ್ಲಸ್

* ಮೀಸಲಾತಿ ಕೈತಪ್ಪಿದ ಕಾರಣದಿಂದ ಜಾತಿ ಮೀರಿ ವಿನೋದ್‌ ಅಸೂಟಿಗೆ ಬೆಂಬಲ ಸಿಗುವ ಸಾಧ್ಯತೆಯಿದೆ.

* ಹೊಸ ಮುಖವನ್ನು ಗೆಲ್ಲಿಸಿದರೆ, ಏನಾದರೂ ಮೀಸಲಾತಿ ವಿಚಾರದಲ್ಲಿ ಬದಲಾವಣೆ ಆಗಬಹುದು ಎನ್ನುವ ನಿರೀಕ್ಷೆಯೂ ಇರಬಹುದು.

ವಿನೋದ್ ಅಸೂಟಿ ಅವರ ಮೈನಸ್‌

* ಮತ್ತೊಂದೆಡೆ ವಿನೋದ ಅಸೂಟಿ ಕೆಲ ವರ್ಷಗಳಿಂದ ಮಾತ್ರ ರಾಜಕಾರದಲ್ಲಿ ಗುರುತಿಸಿಕೊಂಡಿದ್ದಾರೆ.

* ಮೊದಲ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದವರಾಗಿದ್ದಾರೆ. ಆದ್ದರಿಂದ ಹಿನ್ನಡೆಯಾಗುವ ಸಾಧ್ಯತೆಯಿದೆ.

ಇನ್ನು ದಿಂಗಾಲೇಶ್ವರ ಸ್ವಾಮೀಜಿ ಅವರು ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಪ್ರಲ್ಹಾದ್‌ ಜೋಶಿ ಅವರು ಬ್ರಾಹ್ಮಣ ಸಮುದಾಯದವರಾಗಿದ್ದು, ವಿನೋದ ಅಸೂಟಿ ಕುರುಬ ಕುಟುಂಬದವರಾಗಿದ್ದಾರೆ. ಆದರೂ ಕ್ಷೇತ್ರದಲ್ಲಿ ಜಾತಿ ಮೀರಿ ಪ್ರೀತಿ ತೋರಿದ ಉದಾಹರಣೆಗಳಿವೆ. 1951ರಿಂದ 1991ರವರೆಗೆ ನಡೆದ ಚುನಾವಣೆಗಳಲ್ಲಿ ಕಾಂಗ್ರೆಸ್‌ ಸತತ ಗೆಲುವು ದಾಖಲಿಸಿದ್ದು, 1996ರಿಂದ ಸತತ ಸೋಲನುಭವಿಸಿದ್ದು, 1996ರಿಂದ ಬಿಜೆಪಿ ವಿಜಯದ ಮಾಲೆಯನ್ನು ಹಾಕಿಕೊಳ್ಳುತ್ತಲೇ ಬಂದಿದೆ.

ಹಾವೇರಿ ಜಿಲ್ಲೆಯ ಶಿಗ್ಗಾವಿ ಸಹಿತ 8 ವಿಧಾನಸಭಾ ಕ್ಷೇತ್ರಗಳು ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿವೆ. ಬಿಜೆಪಿ ಮತ್ತು ಕಾಂಗ್ರೆಸ್‌ ಶಾಸಕರು ತಲಾ 4 ಕ್ಷೇತ್ರಗಳಲ್ಲಿದ್ದಾರೆ. ಇನ್ನು ಜಗದೀಶ್‌ ಶೇಟ್ಟರ್‌ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಿ ಪುನಃ ಬಿಜೆಪಿಗೆ ಮರಳಿದ್ದದ್ದು, ಅವರು ಧಾರವಾಡ ಕ್ಷೇತ್ರದ ಬಿಜೆಪಿ ಟಿಕೆಟ್‌ ಮೇಲೆ ಕಣ್ಣಿಟ್ಟಿದ್ದರು. ಆದರೆ ಕೊನೆಗೂ ಈ ಕ್ಷೇತ್ರದ ಟಿಕೆಟ್‌ ಕೈತಪ್ಪಿದ್ದು, ಈ ಹಿನ್ನೆಲೆ ಲಿಂಗಾಯತ ಸಮುದಾಯದ ಶೆಟ್ಟರ್ ಅವರನ್ನು ಬೆಳಗಾವಿ ಕ್ಷೇತ್ರದಿಂದ ಸ್ಪರ್ಧೆಗಿಳಿಸಲಾಯಿತು. ಇದೇ ವಿಚಾರ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೂ ಕಾರಣವಾಯಿತು.

2013ರಿಂದ ಕಾಂಗ್ರೆಸ್‌ನಲ್ಲಿರುವ ವಿನೋದ ಅವರು, 2018ರಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲನುಭವಿಸಿದ್ದರು. ಇನ್ನು ಮತ್ತೊಂದೆಡೆ ನಾಲ್ಕು ಅವಧಿಯ ಅಭಿವೃದ್ಧಿ ಕಾರ್ಯ, ನರೇಂದ್ರ ಮೋದಿ ಪ್ರಭೆಯನ್ನು ಪ್ರಹ್ಲಾದ್‌ ಜೋಶಿ ಅಬರು ನಂಬಿದ್ದಾರೆ. ಹಾಗೆಯೇ ಕಾಂಗ್ರೆಸ್‌ನ 5 ಗ್ಯಾರಂಟಿ ಯೋಜನೆಗಳು ಕೈಹಿಡಿಯಲಿವೆ ಎಂಬ ನಿರೀಕ್ಷೆಯಲ್ಲಿ ವಿನೋದ ಅಸೂಟಿ ಇದ್ದಾರೆ.

ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಮೇ 07ರಂದು ನಡೆದ ಮತದಾನ ನಡೆದಿದ್ದು, ಶೇಕಡಾ 74.37ರಷ್ಟು ಮತದಾನವಾಗಿದೆ. ಇನ್ನು ಈ ಕ್ಷೇತ್ರವು ಭಾರತದ ರಾಜಕಾರಣದಲ್ಲಿ ಹೆಸರುವಾಸಿಯಾದ ರಾಜಕೀಯ ಶಕ್ತಿ ಕೇಂದ್ರವಾಗಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಇದು ತೀವ್ರ ಪೈಪೋಟಿಯ ಕದನಕ್ಕೆ ಸಾಕ್ಷಿಯಾಯಿತು. ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ 2019ರ ಸಾರ್ವತ್ರಿಕ ಚುನಾವಣೆಯಲ್ಲಿ 6,84,837 ಮತಗಳನ್ನು ಪಡೆಯುವ ಮೂಲಕ 2,05,072 ಮತಗಳ ಗೆಲುವಿನ ಅಂತರದಿಂದ ಗೆಲುವು ಸಾಧಿಸಿದ್ದರು.

ಇನ್ನು 4,79,765 ಮತಗಳನ್ನು ಪಡೆದ ಐಎನ್‌ಸಿ ಯ ವಿನಯ ಕುಲಕರ್ಣಿ ಅವರು ಪ್ರಹ್ಲಾದ್ ಜೋಶಿ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದರು. ಧಾರವಾಡ ವೈವಿಧ್ಯಮಯ ಜನಸಮೂದಾಯವನ್ನು ಪ್ರತಿಬಿಂಬಿಸುತ್ತದೆ ಮತ್ತು ಕರ್ನಾಟಕದ ನಿರ್ಣಾಯಕ ಕ್ಷೇತ್ರವಾಗಿ ಉಳಿದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+