ಬೆಂಗಳೂರು ಬ್ಲಾಸ್ಟ್ ಮುಚ್ಚಿ ಹಾಕಲು ಕಾಂಗ್ರೆಸ್ ಯತ್ನ: ಪ್ರಹ್ಲಾದ್ ಜೋಶಿ
ಧಾರವಾಡ, ಏಪ್ರಿಲ್ 14: ಕರ್ನಾಟಕ ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ಜನರು ಬೇಸತ್ತಿದ್ದಾರೆ. ಗ್ಯಾರೆಂಟಿ ಯೋಜನೆಗಳ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸಲಾಗುತ್ತಿದೆ. ಕಾಂಗ್ರೆಸ್ ನವರು ಬೆಂಗಳೂರು ಕೆಫೆ ಬ್ಲಾಸ್ಟ್ ವಿಚಾರವನ್ನು ಮುಚ್ಚಿ ಹಾಕಲು ಯತ್ನಿಸಿದ್ದಾರೆ ಎಂದು ಕೇಂದ್ರ ಸಚಿವರು ಆದ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿಯವರು ಆರೋಪಿಸಿದರು.
ವಿವಿಧ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಪ್ರಹ್ಲಾದ್ ಜೋಶಿಯವರು, ಬೆಂಗಳೂರು ಬ್ಲಾಸ್ಟ್ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಈ ಘಟನೆಯನ್ನು ಸಿಲೆಂಡರ್ ಸ್ಪೋಟ ಎಂದು ಹೇಳಿದ್ದರು. ಗೃಹ ಮಂತ್ರಿ ಸೇಡಿನಿಂದ ಹೀಗಾಗಿದೆ ಎಂದು ಅವರು ಆಪಾದಿಸಿದರು. ಸಿಲಿಂಡರ್ ಸ್ಪೋಟ ಎಂದು ಮುಚ್ಚಿಹಾಕುವ ಯತ್ನ ನಡೆಸಿದ್ದರು ಎಂದರು.

ಉಗ್ರರಿಗೆ ಕಾಂಗ್ರೆಸ್ ಅನುಕಂಪ: ಪ್ರಹ್ಲಾದ್ ಜೋಶಿ
ಕರ್ನಾಟಕದಲ್ಲಿ ರಾಜ್ಯ ಸರ್ಕಾರದ ನಡತೆ ಸರಿ ಇಲ್ಲ. ತಮ್ಮ ಮತ ಬ್ಯಾಂಕ್ ಗಾಗಿ, ವೋಟ್ ಬ್ಯಾಂಕ್ ರಾಜಕರಾಣಕ್ಕಾಗಿ ಟೇರಿರಿಸ್ಟ್ ಗಳಿಗೆ ಕಾಂಗ್ರೆಸ್ ಪಕ್ಷ ಅನುಕಂಪ ತೋರಿಸುತ್ತಾರೆ ಎಂದು ಅವರು ಟೀಕಾ ಪ್ರಹಾರ ನಡೆಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಈ ಗ್ಯಾರೆಂಟಿ ಯೋಜನೆಗಳು ಲೋಕಸಭಾ ಚುಣಾವಣೆಯ ನಂತರ ಇರುವುದಿಲ್ಲ. ದೇಶದಲ್ಲಿ ಕಾಂಗ್ರೆಸ್ ಪಕ್ಷ 60 ವರ್ಷದಲ್ಲಿ ಏನು ಮಾಡಿದೆ? ಎಂದು ಪ್ರಶ್ನಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಲಿಷ್ಠವಾದ ಮೇಲೆ ಹೀಗೆಲ್ಲ ಮಾತನಾಡುತ್ತಿದ್ದಾರೆ ಎಂದು ಹೇಳಿದರು.
ಮೈಸೂರನಲ್ಲೇ ಸಿದ್ದರಾಮಯ್ಯಗೆ ಭಯ ಕಾಡುತ್ತಿದೆ
ಸಿಎಂ ಸಿದ್ದರಾಮಯ್ಯ ಅವರನ್ನು ಇತ್ತಿಚೆಗೆ ಶ್ರೀನಿವಾಸ್ ಪ್ರಸಾದ ಅವರ ಭೇಟಿ ವಿಚಾರ ಪ್ರಶ್ನೆಗೆ ಉತ್ತರಿಸಿದ ಅವರು, ಅವರಿಗೆ ಸ್ವ ಕ್ಷೆತ್ರದಲ್ಲಿ ಭಯ ಶುರುವಾಗಿದೆ. ಹಿರಿಯ ದಲಿತ ನಾಯಕನನ್ನು ಹಿನಾಯವಾಗಿ ಕೆಟ್ಟದಾಗಿ ನಡೆಸಿಕ್ಕೊಂಡಿದ್ದಾರೆ. ಇವತ್ತು ಅವರ ಮನೆಗೆ ಹೋಗುತ್ತಾರೆ ಅಂದರೆ ಏನಿದರ ಅರ್ಥ.

ಸಿದ್ದರಾಮಯ್ಯನವರಿಗೆ ಸ್ವಕ್ಷೇತ್ರ ಮೈಸೂರಿನಲ್ಲಿ ಸೋಲಿನ ಭಯ ಶುರುವಾಗಿದೆ. ಹೀಗಾದರೆ ರಾಜ್ಯದಲ್ಲಿ ಕಾಂಗ್ರೆಸ್ ಕತೆ ಏನಾಗಲಿದೆ ಎಂಬದು ಗೊತ್ತಾಗುತ್ತದೆ ಎಂದು ಕುಟಕಿದರು.
ಪ್ರಧಾನಿಯವರ ಮೇಲೆ ಜನರ ವಿಶ್ವಾಸ
ಧಾರವಾಡ ಕ್ಷೇತ್ರದ ಕಣವಿ ಹೊನ್ನಾಪೂರ ಗ್ರಾಮ ಸೇರಿದಂತೆ ಮೂರು ನಾಲ್ಕು ಗ್ರಾಮಗಳಲ್ಲಿ ಅವರು ಅದ್ಧೂರಿ ಚುನಾವಣೆ ಪ್ರಚಾರ ನಡೆಸಿದ್ದಾರೆ. ಈ ಭಾಗದಲ್ಲಿ ಬಿಜೆಪಿ ಪರ ಅಲೆ ಇದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಅವರು ತಿಳಿಸಿದರು.
ಭಾರತದಲ್ಲಿ ಎರಡು ಭಾರಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಇರುವ ಜನರ ವಿಶ್ವಾಸ ಹಾಗೇ ಇದೆ. ಇತ್ತ ಕಳೆದ 10 ವರ್ಷದಿಂದ ದೇಶ ಅಭಿವೃದ್ಧಿಯತ್ತ ಸಾಗಿದೆ. ಮತ್ತೊಂದು ಕಾಂಗ್ರೆಸ್ ಪಕ್ಷದಿಂದ ಜನರು ಬೇಸತ್ತಿದ್ದಾರೆ ಎಂದು ಅವರು ಹೇಳಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications