ಧಾರವಾಡ: ನವಲಗುಂದ ಠಾಣೆಯಲ್ಲಿ ಲಾಕಪ್ ಡೆತ್?
ಧಾರವಾಡ, ಡಿ. 1 : ದೇವರ ದರ್ಶನ ಮಾಡಿದವ ಜೂಜಾಡುತ್ತ ನಿಂತಿದ್ದ, ದಾಳಿ ಮಾಡಿದ ಪೊಲೀಸರು ಆತನನ್ನು ಬಂಧಿಸಿ ಕರೆದೊಯ್ದರು. ಮರುದಿನ ಬೆಳಗಾಗುವುದರೊಳಗೆ ಆತ ಸಾವಿಗೀಡಾದ ಎಂಬ ಸುದ್ದಿ ಬಂತು.
ಹೌದು ಇಂಥ ಪ್ರಕರಣ ನಡೆದಿರುವುದು ಧಾರವಾಡ ತಾಲೂಕಿನ ನವಲಗುಂದದಲ್ಲಿ. ಪೊಲೀಸರ ವಶದಲ್ಲಿದ್ದ ಮಲ್ಲಿಕಾರ್ಜುನ ಅಡಕಿ (43) ಸಾವು ಲಾಕಪ್ ಡೆತ್ ಎಂದು ಆರೋಪಿಸಿ ಮೃತನ ಕುಟುಂಬದವರು ಶವಾಗಾರದ ಎದುರು ಪ್ರತಿಭಟನೆ ನಡೆಸಿದರು.[ಬೆಂಗಳೂರಿನ ಸರ್ಜಾಪುರ ಠಾಣೆಯಲ್ಲಿ ಲಾಕಪ್ ಡೆತ್?]

ಹುಬ್ಬಳ್ಳಿಯ ಅಕ್ಕಿಹೊಂಡ ನಿವಾಸಿ ಆಟೊ ಚಾಲಕ ಮಲ್ಲಿಕಾರ್ಜುನ ಅಡಕಿ ತಾಲೂಕಿನ ಯಮನೂರು ಗ್ರಾಮದ ಚಾಂಗದೇವರ ದರ್ಶನಕ್ಕೆಂದು ಆಗಮಿಸಿದ್ದ. ಪೂಜೆಯ ಬಳಿಕ ಸ್ನೇಹಿತರೊಂದಿಗೆ ದೇವಾಲಯದ ಸಮೀಪ ಜೂಜಾಡುತ್ತಿದ್ದ. ಈ ವೇಳೆ ದಾಳಿ ನಡೆಸಿದ ನವಲಗುಂದ ಪೊಲೀಸರು ಮಲ್ಲಿಕಾರ್ಜುನ ಅಡಕಿ ಸೇರಿದಂತೆ 9 ಮಂದಿಯನ್ನು ಬಂಧಿಸಿದ್ದರು.
ಆದರೆ ರಾತ್ರಿ ಮಲ್ಲಿಕಾರ್ಜುನ ಅಡಕಿ ಸಾವನ್ನಪ್ಪಿದ್ದಾನೆ. ಈ ಸುದ್ದಿ ತಿಳಿದ ಕುಂಟುಬಸ್ಥರು ಸ್ಥಳಕ್ಕೆ ಆಗಮಿಸಿ ಪ್ರತಿಭಟನೆ ಶುರುಹಚ್ಚಿಕೊಂಡರು. ಲಾಕಪ್ ಡೆತ್ ಎಂಬ ಸುದ್ದಿ ಹರಡದ್ದು ಜನರನ್ನು ಮತ್ತಷ್ಟು ಆಕ್ರೋಶಗೊಳ್ಳುವಂತೆ ಮಾಡಿತ್ತು. [ಕವಿವಿ ಪ್ರಕರಣದ ವಾಲೀಕಾರ ಕತೆಯೇನು?]
ಪೊಲೀಸರ ದೌರ್ಜನ್ಯದಿಂದಲೇ ಅಡಕಿ ಮೃತಪಟ್ಟಿದ್ದು ಸೂಕ್ತ ಕ್ರಮ ಜರುಗಿಸಬೇಕು. ಅಲ್ಲದೇ ಮೃತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ, ಮರಣೋತ್ತರ ಪರೀಕ್ಷೆ ಒರದಿ ಬಂದ ನಂತರ ಸತ್ಯಾಸತ್ಯತೆ ತಿಳಿಯಲಿದೆ. ಇದನ್ನಿ ಸಿಐಡಿ ಒಪ್ಪಿಸಲಾಗಿದ್ದು ಇಲಾಖೆಯಿಂದ ತಪ್ಪಾಗಿದ್ದರೆ ಅಪರಾಧಿಗಳಿಗೆ ತಕ್ಕ ಶಿಕ್ಷೆ ವಿಧಿಸಲಾಗುವುದು ಎಂದು ತಿಳಿಸಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications