ಧಾರವಾಡ: ಬೆಣ್ಣೆ ಹಳ್ಳ ಮತ್ತು ತುಪ್ಪರಿ ಹಳ್ಳ "ಪ್ರವಾಹ ಸಮಸ್ಯೆ" ಪರಿಹಾರಕ್ಕೆ 200 ಕೋಟಿ ರೂ!
ಹುಬ್ಬಳ್ಳಿ: ಧಾರವಾಡದಲ್ಲಿ ಉತ್ತಮ ಮಳೆಯಾಗುತ್ತಿದೆ. ನೆರೆ ಪ್ರವಾಹ ಉಂಟಾಗುವ ಹಳ್ಳಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ. ನೆರೆ ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅತೀ ಹೆಚ್ಚು ಮಳೆಯಿಂದ ಬೆಣ್ಣೆ ಹಳ್ಳ ಹಾಗೂ ತುಪ್ಪರಿ ಹಳ್ಳಗಳು ಪ್ರವಾಹವನ್ನು ಉಂಟಾಗುತ್ತಿದೆ. ಈ ಸಮಸ್ಯೆಯನ್ನು ಪರಿಹರಿಸುವ ಉದ್ದೇಶದಿಂದ 200 ಕೋಟಿ ರೂಪಾಯಿ ವೆಚ್ಚದಲ್ಲಿ ಬೆಣ್ಣೆ ಹಳ್ಳ ಮತ್ತು ತುಪ್ಪರಿ ಹಳ್ಳಗಳ ಹೂಳೆತ್ತುವ ಕಾರ್ಯವನ್ನು ಟೆಂಡರ್ ಪ್ರಕ್ರಿಯೆ ಮುಗಿದ ಬಳಿಕ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಹೇಳಿದ್ದಾರೆ.
ಬುಧವಾರ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ, ಇಂಗಳಹಳ್ಳಿ ಗ್ರಾಮಗಳಲ್ಲಿ ನೆರೆ ಪ್ರವಾಹ ಉಂಟಾಗುವ ಸಾಧ್ಯತೆ ಇರುವ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿದರು. ಬೆಣ್ಣೆ ಹಳ್ಳ ಹಾಗೂ ತುಪ್ಪರಿ ಹಳ್ಳ ಹೂಳೆತ್ತುವ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಲ್ಲಿ ಅನುದಾನ ನೀಡುವಂತೆ ಕೋರಲಾಗಿತ್ತು. ಅದರಂತೆ ಬಜೆಟ್ನಲ್ಲಿ 200 ಕೋಟಿ ರೂಪಾಯಿ ಹಣವನ್ನು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಟೆಂಡರ್ ಪ್ರಕ್ರಿಯೆ ಮುಗಿದ ಬಳಿಕ ಹೂಳೆತ್ತುವ ಕಾರ್ಯವನ್ನು ಆರಂಭಿಸಲಾಗುವುದು. ಮುಂದಿನ 5 ರಿಂದ 10 ವರ್ಷಗಳ ಕಾಲ ಯಾವುದೇ ರೀತಿಯ ಸಮಸ್ಯೆ ಉದ್ಭವಿಸುವುದಿಲ್ಲ. ಬೆಣ್ಣೆ ಹಳ್ಳ ಮತ್ತು ತುಪ್ಪರಿ ಹಳ್ಳಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದಿದ್ದಾರೆ.

ಈಗಾಗಲೇ ನೆರೆ ಪ್ರವಾಹ ಸಂಭವಿಸುವ ಹಳ್ಳಿಗಳನ್ನು ಗುರುತಿಸಲಾಗಿದೆ. ಪ್ರವಾಹದಿಂದಾಗಿ ಯಾವುದೇ ರೀತಿಯ ಜೀವಹಾನಿ ಆಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೇ ಟಾಸ್ಕ ಫೋರ್ಸ್ ತಂಡವನ್ನು ರಚನೆ ಮಾಡಲಾಗುವುದು. ಟಾಸ್ಕ ಫೋರ್ಸ್ ತಂಡಕ್ಕೆ ಲೈಫ್ ಜಾಕೆಟ್ ಸೇರಿದಂತೆ ಅಗತ್ಯ ಸಲಕರಣೆಗಳನ್ನು ಒದಗಿಸಲಾಗುತ್ತದೆ ಎಂದರು.
ಶಾಸಕರಾದ ಎನ್.ಎಚ್.ಕೋನರಡ್ಡಿ ಮಾತನಾಡಿ, ಹವಾಮಾನ ಇಲಾಖೆಯ ಮುನ್ಸೂಚನೆ ಮೇರೆಗೆ ಮುಂಗಾರು ಮಳೆ ಬೇಗನೆ ಪ್ರಾರಂಭವಾಗಿದೆ. ರೈತರಲ್ಲಿ ಸಂತೋಷದ ವಾತಾವರಣ ಸೃಷ್ಟಿಯಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಮೇರೆಗೆ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ನಿರ್ದೇಶನದಂತೆ ಆಯಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸ್ಥಳೀಯ ಶಾಸಕರು ನೆರೆ ಪ್ರವಾಹ ಉಂಟಾಗುವ ಹಾನಿಯನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬೆಣ್ಣೆ ಹಳ್ಳ ಹಾಗೂ ತುಪ್ಪರಿ ಹಳ್ಳದ ಪ್ರದೇಶಗಳಿಗೆ ಭೇಟಿ ನೀಡಲಾಗಿದೆ. ಬಜೆಟ್ ನಲ್ಲಿ ಘೋಷಿಸಿದ 200 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ಹಳ್ಳಗಳ ಹೂಳೆತ್ತುವ ಕಾರ್ಯವನ್ನು ಟೆಂಡರ್ ಪ್ರಕ್ರಿಯೆ ಮುಗಿದ ಬಳಿಕ ಮುಂದಿನ ದಿನಗಳಲ್ಲಿ ಕಾಮಗಾರಿಯನ್ನು ಆರಂಭಿಸಲಾಗುವುದು. ಅಪಾರ ಪ್ರಮಾಣದ ಮಳೆಯನ್ನು ಎದುರಿಸಲು ಸಿದ್ಧರಾಗಬೇಕಿದೆ. ರೈತರು ಸಹ ನಮ್ಮದೊಂದಿಗೆ ಸಹಕರಿಸುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಜೆ.ಬಿ.ಮಜ್ಜಗಿ, ಹುಬ್ಬಳ್ಳಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಮಚಂದ್ರ ಹೊಸಮನಿ, ನೀರಾವರಿ ಇಲಾಖೆಯ ಎಇಇ ರವೀಂದ್ರ ಜಾಲಗಾರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಗದೀಶ ಪಾಟೀಲ್, ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕಿ ಮಂಜುಳಾ ತೆಂಬದ, ಹುಬ್ಬಳ್ಳಿ ಗ್ರಾಮೀಣ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಿವಾನಂದ ಭೂಮಣ್ಣವರ, ಶಿರಗುಪ್ಪಿ ಗ್ರಾಮ ಪಂಚಾಯತ ಅಧ್ಯಕ್ಷೆ ನಿರ್ಮಲಾ ಸಿ.ಜೆ., ಉಪಾಧ್ಯಕ್ಷ ಚನ್ನಬಸಪ್ಪ ಬಳಿಗೇರ, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ದಾವಲಸಾಬ ಪಿಂಜಾರ, ಇಂಗಳಹಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷೆ ಸುಧಾ ರೊಟ್ಟಿಗವಾಡ, ಉಪಾಧ್ಯಕ್ಷೆ ಶಾಂತವ್ವ ಬಟಗುರ್ಕಿ, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ರಾಜೇಶ್ವರಿ ಎಂ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಹಲವರು ಇದ್ದರು.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ












Click it and Unblock the Notifications