ಕರ್ನಾಟಕ ವಿವಿಯಲ್ಲಿ ಜ.20ರಿಂದ 'ಧಾರವಾಡ ಸಾಹಿತ್ಯ ಸಂಭ್ರಮ'
ಧಾರವಾಡ, ಡಿಸೆಂಬರ್ 21: ಧಾರವಾಡ ಸಾಹಿತ್ಯ ಸಂಭ್ರಮ ಐದನೇ ಆವೃತ್ತಿ ಜನವರಿ 20ರಿಂದ ಮೂರು ದಿನ ನಡೆಯಲಿದ್ದು, ರಾಷ್ಟೀಯ ಜಲನೀತಿ, ಎಡ-ಬಲಗಳ ನಡುವೆ, ರಾಷ್ಟ್ರೀಯ ಜ್ವಲಂತ ಸಮಸ್ಯೆಗಳ ಕುರಿತು ವಿಶೇಷ ಗೋಷ್ಠಿ ನಡೆಯಲಿದೆ ಎಂದು ಧಾರವಾಡ ಸಾಹಿತ್ಯ ಸಂಭ್ರಮ ಟ್ರಸ್ಟ್ ನ ಅಧ್ಯಕ್ಷ ಡಾ. ಗಿರಡ್ಡಿ ಗೋವಿಂದರಾಜು ತಿಳಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 15 ಕವಿಗೋಷ್ಠಿ. ಕೆಲ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು. ಐದನೇ ಅವೃತ್ತಿಯನ್ನು ಕೆ.ಎಸ್.ನಿಸ್ಸಾರ್ ಅಹಮದ್ ಉದ್ಘಾಟಿಸಲಿದ್ದಾರೆ. ವಿಮರ್ಶಕ ಜಿ.ಎಚ್. ನಾಯಕ ಅವರು ಆಶಯ ಭಾಷಣ ಮಾಡಲಿದ್ದು, ಸಮಾರೋಪ ಭಾಷಣ ಗುರುಲಿಂಗ ಕಾಪಸೆ ನೆರವೇರಿಸಲಿದ್ದಾರೆ ಎಂದರು.
ಪ್ರಸಿದ್ಧ ಪುರಾಣಶಾಸ್ತ್ರಜ್ಞ ಮುಂಬೈನ ದೇವದತ್ತ ಪಟ್ಟನಾಯಕ ಅವರು ಈ ಬಾರಿ ಸಂಭ್ರಮದ ಗೋಷ್ಠಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಸುಮತೀಂದ್ರ ನಾಡಿಗ, ಸುಂದರ ಸಾರುಕ್ಕೈ, ಲಕ್ಷ್ಮೀಶ ತೋಳ್ಪಾಡಿ, ವೈದೇಹಿ, ನಾ. ಡಿಸೋಜಾ, ಮಲ್ಲಿಕಾ ಘಂಟಿ, ಕೆ. ಸತ್ಯನಾರಾಯಣ. ನಟರಾಜ್ ಹುಳಿಯಾರ್, ಓ.ಎಲ್. ನಾಗಭೂಷಣ ಸ್ವಾಮಿ ಮೊದಲಾದ ಲೇಖಕರು ಸಂವಾದದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.[ಕರ್ನಾಟಕ ವಿವಿಯಲ್ಲಿ ಜ.22ರಿಂದ 'ಧಾರವಾಡ ಸಾಹಿತ್ಯ ಸಂಭ್ರಮ']

ಮೊದಲ ದಿನ ಪೂರ್ಣಿಮಾ ಭಟ್ ಕುಲಕರ್ಣಿ ಅವರಿಂದ ಶಾಸ್ತ್ರೀಯ ಗಾಯನ, ಎರಡನೇ ದಿನ ಧಾರವಾಡ ರಂಗಾಯಣ ತಂಡ ಪ್ರಸ್ತುತಪಡಿಸುವ 'ತಮಾಷಾ' ನಾಟಕ ಪ್ರದರ್ಶನ ಹಾಗೂ ಮೂರನೇ ದಿನ ಟಿ.ಎಸ್. ನಾಗಾಭರಣ ಅವರ ನಿರ್ದೇಶನದ ಇನ್ನೂ ಬಿಡುಗಡೆಯಾಗದ 'ಅಲ್ಲಮ' ಚಿತ್ರ ಪ್ರದರ್ಶನ ನಡೆಯಲಿದೆ' ಎಂದರು.[ಜನವರಿ 16ರಿಂದ ಧಾರವಾಡ ಸಾಹಿತ್ಯ ಸಂಭ್ರಮ]
'ಈ ಬಾರಿಯೂ vividlipi.com ಅಂತರಜಾಲ ತಾಣದ ಮೂಲಕ ಸಂಭ್ರಮದ ನೇರ ಪ್ರಸಾರಕ್ಕೆ ಟ್ರಸ್ಟ್ ಯೋಜನೆ ರೂಪಿಸಿದೆ. ಸಂಭ್ರಮದಲ್ಲಿ ಪಾಲ್ಗೊಳ್ಳುವ ಆಸಕ್ತರಿಗೆ ಆನ್ಲೈನ್ ನೋಂದಣಿ ಡಿ. 24ರ ಬೆಳಿಗ್ಗೆ 10ಕ್ಕೆ ಆರಂಭವಾಗಲಿದೆ. www.dharwadsahityasambhrama.com ಜಾಲತಾಣದ ಮೂಲಕ ಹೆಸರು ನೋಂದಾಯಿಸಿ ಕೊಳ್ಳಬಹುದಾಗಿದೆ. ನೋಂದಣಿ 300 ಪ್ರತಿನಿಧಿಗಳಿಗೆ ಮಾತ್ರ ಸೀಮಿತವಾಗಿದ್ದು, ಪ್ರವೇಶ ಶುಲ್ಕ ₹ 750ಕ್ಕೆ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 98454 47002 ಸಂಪರ್ಕಿಸಬದಾಗಿದೆ ಡಾ. ಗಿರಡ್ಡಿ ಗೋವಿಂದರಾಜ ತಿಳಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications