ಧಾರವಾಡ : ಯೋಗೇಶ ಗೌಡ ಕೊಲೆ, ಐವರ ಬಂಧನ

ಹುಬ್ಬಳ್ಳಿ, ಜೂನ್ 17 : ಧಾರವಾಡ ಜಿಲ್ಲಾ ಪಂಚಾಯಿತಿ ಬಿಪಿಪಿ ಸದಸ್ಯ ಯೋಗೇಶ ಗೌಡ ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಜೂನ್ 15ರ ಮುಂಜಾನೆ ಯೋಗೇಶ್ ಗೌಡ ಕೊಲೆ ನಡೆದಿತ್ತು.

ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಪಾಂಡುರಂಗ ರಾಣೆ ಅವರು ಈ ಕುರಿತು ಮಾಹಿತಿ ನೀಡಿದರು. ಹತ್ಯೆಗೆ ಸಂಬಂಧಿಸಿದಂತೆ ಬಸವರಾಜ ಮುತ್ತಗಿ (37), ವಿಕ್ರಂ ಬಳ್ಳಾರಿ (26), ವಿನಾಯಕ ಕಟಗಿ (34), ಕೀರ್ತಿಕುಮಾರ ಕುರಹಟ್ಟಿ (25), ಸಂದೀಪ್ ಅಲಿಯಾಸ್‌ ಸ್ಯಾಂಡಿ ಸವದತ್ತಿ (28) ಎಂಬುವವರನ್ನು ಬಂಧಿಸಲಾಗಿದೆ. [ಧಾರವಾಡದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯನ ಹತ್ಯೆ]

murder

ಜಮೀನು ವಿವಾದದಿಂದಾಗಿ ಕೊಲೆ : ನಾಗೇಶ ಎಂಬುವವರಿಗೆ ಸೇರಿದ 40 ಎಕರೆ ಜಮೀನು ಧಾರವಾಡ ಬಳಿಯ ಬೆಳ್ಳಿಗಟ್ಟಿ ಗ್ರಾಮದಲ್ಲಿತ್ತು. ಇದರಲ್ಲಿ 25.8 ಎಕರೆ ನೋಟರಿಯಾಗಿತ್ತು. ಉಳಿದ ಜಾಗದಲ್ಲಿ 9 ಎಕರೆಯನ್ನು ಯೋಗೇಶ ಗೌಡ ಖರೀದಿಸಿದ್ದರು. [ಯೋಗೇಶಗೌಡ ಕೊಲೆ ಹಿಂದೆ ಕಾಣದ ಕೈ ಕೈವಾಡ]

ಆದರೆ, ಅದರೊಂದಿಗೆ 15 ಎಕರೆ ಜಮೀನು ಒತ್ತುವರಿ ಮಾಡಿಕೊಂಡಿದ್ದರು. ಇದೇ ಸಮಯದಲ್ಲಿ ಕನ್ನಡಪರ ಸಂಘಟನೆಯೊಂದರ ಮುಖ್ಯಸ್ಥ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರ ವಿನಯ ಕುಲಕರ್ಣಿ ಅವರ ಆಪ್ತನಾಗಿದ್ದ ಬಸವರಾಜ ಮುತ್ತಗಿ ನಾಗೇಶ ಅವರಿಂದ 5 ಎಕರೆ ಜಮೀನು ಖರೀದಿಸಿದ್ದ.

yogesh

ತನ್ನ ಜಮೀನನ್ನು ಖರೀದಿಸಿದರೆ ಕೊಲೆ ಮಾಡುವುದಾಗಿ ಯೋಗೇಶ ಗೌಡ ಬಸವರಾಜ ಮುತ್ತಗಿಗೆ ಬೆದರಿಕೆ ಹಾಕಿದ್ದ. ಈ ಸೇಡಿನಿಂದಾಗಿ ಯೋಗೇಶ ಗೌಡನನ್ನು ಕೊಲೆ ಮಾಡಲಾಗಿದೆ.

ಬಸವರಾಜ ಮುತ್ತಗಿ ಅಪರಾಧ ಶಾಸ್ತ್ರದಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದ. ರಿಯಲ್ ಎಸ್ಟೇಟ್ ವ್ಯವಹಾರ ಮಾಡುವುದರೊಂದಿಗೆ ಸಾಮಾಜಿಕ ಕಾರ್ಯಗಳನ್ನು ಕೂಡ ಮಾಡುತ್ತಿದ್ದ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+