ಕುಂದಗೋಳದ ಅಲ್ಲಾಪುರದಲ್ಲಿ ಕೆಂಡದ ಮೇಲೆ ಪುಟ್ಟ ಮಕ್ಕಳು
ಧಾರವಾಡ, ಅಕ್ಟೋಬರ್ 2: ಮೊಹರಂ ಆಚರಣೆ ನಡೆಯುತ್ತಿರುವುದು ಒಂದು ಕಡೆಯಾದರೆ, ಹರಕೆ ಹೊತ್ತ ಕಾರಣಕ್ಕೆ ಮಕ್ಕಳನ್ನು ಕೆಂಡದ ಮೇಲೆ ಮಲಗಿಸುವ ಆಚರಣೆಯೊಂದು ಈಗಲೂ ನಡೆದುಕೊಂಡು ಬರುತ್ತಿದೆ.
ಇಂಥದೊಂದು ಆಚರಣೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಅಲ್ಲಾಪುರದಲ್ಲಿ ನಡೆದಿದೆ. ಮೊಹರಂ ಅಂಗವಾಗಿ ಈ ಗ್ರಾಮದಲ್ಲಿ ಕೆಂಡದ ಮೇಲೆ ನಡೆಯುವ ಹಾಗೂ ದೇಹಕ್ಕೆ ಶಸ್ತ್ರಗಳನ್ನು ಚುಚ್ಚಿಕೊಳ್ಳುವ ಹಾಗೂ ಸಿಕ್ಕಿಸಿಕೊಳ್ಳುವ ಪದ್ಧತಿ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ.
ಕೆಂಡದ ಮೇಲೆ ಬಾಳೆ ಎಲೆಯನ್ನು ಹಾಕಿ, ಅದರ ಮೇಲೆ ಮಕ್ಕಳನ್ನು ಮಲಗಿಸುವುದರಿಂದ ರೋಗ-ರುಜಿನಗಳು ಬರುವುದಿಲ್ಲ ಎಂಬುದು ಸ್ಥಳೀಯರ ನಂಬಿಕೆ. ಆದ್ದರಿಂದ ಪುಟಾಣಿ ಮಕ್ಕಳನ್ನು ಕೆಂಡದ ಮೇಲೆ ಮಲಗಿಸುತ್ತಾರೆ. ಅಲ್ಲಾಪುರ ಗ್ರಾಮದ ಸುತ್ತಮುತ್ತಲಿನ ಜನರು ಕೆಂಡದ ಮೇಲೆ ನಡೆದು ತಮ್ಮ ಭಕ್ತಿಯನ್ನು ಅರ್ಪಿಸುತ್ತಾರೆ.

ಕೆಂಡದ ಮೇಲೆ ನಡೆದರೆ ಸಂಕಷ್ಟಗಳು ದೂರವಾಗುತ್ತವೆ ಎಂಬುದು ಜನರ ನಂಬಿಕೆ. ಮೊಹರಂ ಅಂದಾಕ್ಷಣ ಮುಸ್ಲಿಂ ಸಮುದಾಯದವರು ಮಾತ್ರ ಆಚರಣೆ ಮಾಡುತ್ತಾರೆ ಅಂತ ಅಂದುಕೊಂಡರೆ ಅದು ತಪ್ಪು. ಈ ಗ್ರಾಮದಲ್ಲಿ ಮುಸ್ಲಿಂ ಕುಟುಂಬದವರ ಜತೆಗೆ ಇತರ ಸಮುದಾಯದವರು ಸೇರಿಕೊಂಡು ಆಚರಣೆ ಮಾಡುತ್ತಾರೆ.
ಮುಖ್ಯವಾಗಿ ಮೊಹರಂ ಹಿನ್ನೆಲೆಯಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿ, ಮಧ್ಯರಾತ್ರಿ ದೇವರುಗಳನ್ನು ಗ್ರಾಮದಲ್ಲಿ ಮೆರವಣಿಗೆ ಮಾಡುತ್ತಾರೆ. ಆ ನಂತರ ಗ್ರಾಮದ ದರ್ಗಾವೊಂದರ ಬಳಿ ಕೂಡಿಸುತ್ತಾರೆ. ಐದಾರು ಗಿಡಗಳ ಕಟ್ಟಿಗೆಗೆ ಬೆಂಕಿ ಹಚ್ಚಿ, ಕೆಂಡ ಮಾಡ್ತಾರೆ. ಕೆಂಡದ ಮೇಲೆ ನಡೆದುಕೊಂಡು ಹೋಗುತ್ತಾರೆ.
ಇನ್ನು ಹರಕೆ ಹೊತ್ತವರು ಕೆಂಡದ ಮೇಲೆ ಬಾಳೆ ಎಲೆಯನ್ನು ಹಾಸಿ, ತಮ್ಮ ಮಕ್ಕಳನ್ನು ಅದರ ಮೇಲೆ ಮಲಗಿಸುತ್ತಾರೆ. ಆ ಮೂಲಕ ಹರಕೆಯನ್ನು ತಿರಿಸಿಕೊಳ್ಳುತ್ತಾರೆ. ಹೀಗೆ ಮಾಡುವುದರಿಂದ ಅವರಿಗೆ ಒಳ್ಳೆಯದು ಆಗುತ್ತದೆ ಎನ್ನುವ ನಂಬಿಕೆಯಿದೆ.
ಈ ಪದ್ಧತಿ ಹಲವಾರು ವರ್ಷಗಳಿಂದ ಗ್ರಾಮದಲ್ಲಿ ನಡೆದುಕೊಂಡು ಬಂದಿದೆ. ಇದುವರೆಗೂ ಯಾವುದೇ ಅನಾಹುತ ಸಂಭವಿಸಿಲ್ಲ. ಈ ಗ್ರಾಮದ ಮೇಲೆ ದೇವರ ಕೃಪೆ ಇದೆ, ಹೀಗಾಗಿ ಯಾವುದೇ ಅನಾಹುತ ಸಂಭವಿಸುವುದಿಲ್ಲ ಅಂತಲೂ ಇಲ್ಲಿನ ಜನರೇ ಹೇಳುತ್ತಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications