ದಿನೇಶ್ ಗುಂಡೂರಾವ್ ವಿರುದ್ಧ ಭೂ ಅಕ್ರಮ ಆರೋಪ
ಧಾರವಾಡ, ಏ. 28: ಸಮಾಜ ಪರಿವರ್ತನಾ ಸಮುದಾಯದ ಅಧ್ಯಕ್ಷ ಎಸ್.ಆರ್.ಹಿರೇಮಠ ಸಚಿವ ದಿನೇಶ್ ಗುಂಡೂರಾವ್ ಮತ್ತು ಅವರ ಕುಟುಂಬ 720 ಕೋಟಿ ಮೌಲ್ಯದ ಭೂ ಕಬಳಿಕೆ ಮಾಡಿದೆ ಎಂದು ಆರೋಪಿಸಿದ್ದಾರೆ. ದಿನೇಶ್ ಗುಂಡೂರಾವ್ ಮತ್ತು ಅವರ ಕುಟುಂಬ ಸದಸ್ಯರು ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ದೂರಿದ್ದಾರೆ.
ಧಾಡವಾಡದಲ್ಲಿ ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ ಎಸ್.ಆರ್.ಹಿರೇಮಠ, ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬ ಬೆಂಗಳೂರು ಉತ್ತರ ತಾಲೂಕಿನ ಜಾಲಹಳ್ಳಿಯ ನವರತ್ನ ಅಗ್ರಹಾರ ಬಳಿ 720 ಕೋಟಿ ಮೊತ್ತದ 64 ಎಕರೆ ಗೋಮಾಳ ಜಮೀನು ಕಬಳಿಕೆ ಮಾಡಿದೆ ಎಂದು ದಾಖಲೆ ಬಿಡುಗಡೆ ಮಾಡಿದರು.

ದಿನೇಶ್ ಗುಂಡೂರಾವ್ ಸಹೋದರರಾದ ರಾಜೇಶ್, ಮಹೇಶ ಹಾಗೂ ತಾಯಿ ವರಲಕ್ಷ್ಮಿ ಹೆಸರಿನಲ್ಲಿ 47.16 ಎಕರೆ ಜಮೀನು ಹಾಗೂ ದಿನೇಶ್ ಅವರ ಚಿಕ್ಕಮ್ಮ ಜಮುನಾ ಹೆಸರಿನಲ್ಲಿ 17.13 ಎಕರೆ ಗೋಮಾಳ ಜಮೀನು ಕಬಳಿಕೆ ಮಾಡಲಾಗಿದೆ ಎಂದು ದಾಖಲೆಗಳನ್ನು ನೀಡಿದರು.
ಗೋಮಾಳ ಜಮೀನು ಗುಳುಂ : ಬೆಂಗಳೂರು ಉತ್ತರ ಕ್ಷೇತ್ರದ ಶಾಸಕ ಎಂ. ಶ್ರೀನಿವಾಸ್ ಕೆಂಗೇರಿ ಬಳಿ ಬಿ.ಎಂ. ಕಾವಲಹಳ್ಳಿಯಲ್ಲಿ ಅಕ್ರಮವಾಗಿ 18 ಎಕರೆ ಗೋಮಾಳ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಶ್ರೀನಿವಾಸ್ ಅವರು ನಡೆಸಿರುವ ಅಕ್ರಮದಲ್ಲಿ ಹಲವು ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.
ನಿರ್ದಿಷ್ಟ ಉದ್ದೇಶಕ್ಕೆ ಇಟ್ಟ ಗೋಮಾಳ ಭೂಮಿ ಹಾಗೂ ಸಾಮೂಹಿಕ ಭೂಮಿಗಳನ್ನು ಸಕ್ರಮಗೊಳಿಸಿ ಕಾಣಿಕೆ ರೂಪದಲ್ಲಿ ಅರ್ಜಿದಾರರಿಗೆ ಕೊಟ್ಟು ಅಕ್ರಮ ಸಾಗುವಳಿಯನ್ನು ಸಕ್ರಮಗೊಳಿಸುವುದು ಕಾನೂನು ಬಾಹಿರ ಎಂದು 2012ರ ನವೆಂಬರ್ ತಿಂಗಳಲ್ಲಿ ನ್ಯಾಯಮೂರ್ತಿ ಶೈಲೇಂದ್ರಕುಮಾರ್ ಅವರು ಆದೇಶ ನೀಡಿದ್ದರು. ಆದರೆ, ಶ್ರೀನಿವಾಸ್ ಈ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದರು.
ಎರಡನೇ ಆರೋಪ : ಎಸ್.ಆರ್.ಹಿರೇಮಠ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಏ.16ರಂದು ಸುಮಾರು ರೂ. 120 ಕೋಟಿ ಬೆಲೆಬಾಳುವ 10 ಎಕರೆ ಭೂಮಿ ಅತಿಕ್ರಮಣ ಮಾಡಿಕೊಂಡಿರುವ ಆರೋಪವನ್ನು ಮಾಡಿದ್ದರು. ಭೂಮಿ ಒತ್ತುವರಿಯ ನೈತಿಕ ಹೊಣೆ ಹೊತ್ತು ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದರು. ಭಾನುವಾರ ಮತ್ತೊಂದು ಆರೋಪವನ್ನು ಮಾಡಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications