ಧಾರವಾಡದ ದಿಶಾ ಹೆಗಡೆಗೆ ಸಂಶೋಧನೆ ಮಾಡುವ ಕನಸು
ಧಾರವಾಡ, ಮೇ 13 : ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು ಶೇ 81.82 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ಧಾರವಾಡದ ದಿಶಾ ಹೆಗಡೆ 622 ಅಂಕಗಳನ್ನುಗಳಿಸಿ ರಾಜ್ಯದಲ್ಲಿಯೇ ದ್ವಿತೀಯ ಸ್ಥಾನ ಪಡೆದಿದ್ದಾಳೆ.
ಧಾರವಾಡ ಶಾಂತಿ ಸದನ ಶಾಲೆಯ ವಿದ್ಯಾರ್ಥಿನಿ ದಿಶಾ ಶ್ರೀಕಾಂತ ಹೆಗಡೆ ಮತ್ತು ಪುಷ್ಪಲತಾ ಹೆಗಡೆ ದಂಪತಿಯ ಪುತ್ರಿ. 625 ಅಂಕಗಳಿಗೆ 622 ಅಂಕಗಳನ್ನುಗಳಿಸಿರುವ ದಿಶಾ ರಾಜ್ಯದಲ್ಲಿಯೇ ಎರಡನೇ ಸ್ಥಾನಗಳಿಸಿ ಪೋಷಕರು ಮತ್ತು ಶಾಲೆಗೆ ಕೀರ್ತಿ ತಂದಿದ್ದಾಳೆ. [ಫಲಿತಾಂಶ, ಅಂಕಪಟ್ಟಿಗಾಗಿ ಇಲ್ಲಿ ಕ್ಲಿಕ್ಕಿಸಿ]

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಇಂಗ್ಲಿಷ್ನಲ್ಲಿ 125ಕ್ಕೆ 124, ಕನ್ನಡದಲ್ಲಿ 100ಕ್ಕೆ 100, ಗಣಿತದಲ್ಲಿ 100ಕ್ಕೆ 100, ಹಿಂದಿಯಲ್ಲಿ 100ಕ್ಕೆ 100, ವಿಜ್ಞಾನದಲ್ಲಿ 100ಕ್ಕೆ 100, ಸಮಾಜ ವಿಜ್ಞಾನದಲ್ಲಿ 100ಕ್ಕೆ 98 ಅಂಕಗಳನ್ನು ದಿಶಾ ಹೆಗಡೆ ಪಡೆದಿದ್ದಾಳೆ. [SSLC ಜಿಲ್ಲಾವಾರು ಫಲಿತಾಂಶ]
ಮೂಲತಃ ಶಿರಸಿ ತಾಲೂಕಿನ ಬೂದಿಮುರುಡು ಗ್ರಾಮದ ಕೃಷಿ ಕುಟುಂಬದಲ್ಲಿ ಜನಿಸಿರುವ ದಿಶಾ ಹೆಗಡೆ ತಂದೆ ಶ್ರೀಕಾಂತ ಹೆಗಡೆ ಸಿವಿಲ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಧಾರವಾಡದ ನಾರಾಯಣಪುದಲ್ಲಿ ವಾಸವಾಗಿದ್ದಾರೆ. [ಕಲೆಯಲ್ಲಿ ಅರಳಿದ ಧಾರವಾಡದ ಪ್ರತಿಭೆ ಶಶಿಕಲಾ]
ಸಹೋದರಿ ಸಾಧನೆ ಮುರಿದ ದಿಶಾ : ದಿಶಾ ಶ್ರೀಕಾಂತ ಹೆಗಡೆ ಮತ್ತು ಪುಷ್ಪಲತಾ ಹೆಗಡೆ ದಂಪತಿಯ ದ್ವಿತೀಯ ಪುತ್ರಿ. ದಂಪತಿಯ ಮೊದಲ ಪುತ್ರಿ ದಿವ್ಯಾ ಕಳೆದ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಧಾರವಾಡ ಜಿಲ್ಲೆಗೆ 10ನೇ ಸ್ಥಾನ ಪಡೆದಿದ್ದಳು. ಈಗ ದಿಶಾ ಹೆಗಡೆ ರಾಜ್ಯದಲ್ಲಿಯೇ ದ್ವಿತೀಯ ಸ್ಥಾನಗಳಿಸುವ ಮೂಲಕ ಸಹೋದರಿ ಸಾಧನೆಯನ್ನು ಮುರಿದಿದ್ದಾಳೆ.
ಸಂಶೋಧನೆ ಮಾಡುವ ಕಸಸು : 'ರಾಜ್ಯಕ್ಕೆ 2ನೇ ಸ್ಥಾನಗಳಿಸುತ್ತೇನೆ ಎಂದು ಕೊಂಡಿರಲಿಲ್ಲ. ವಿಜ್ಞಾನದಲ್ಲಿ ಪಿಎಚ್ಡಿ ಪದವಿ ಪಡೆದು, ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂಬ ಗುರಿ ಇದೆ' ಎಂದು ದಿಶಾ ಹೆಗಡೆ ಫಲಿತಾಂಶದ ಬಳಿಕ ಸಂತಸದಿಂದ ಪ್ರತಿಕ್ರಿಯೆ ನೀಡಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications