'ಡಿಕೆಶಿ ಬಾಯಲ್ಲೂ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಬರಬಹುದು'; ಶೆಟ್ಟರ್ ಕಿಡಿ
ಧಾರವಾಡ, ಫೆಬ್ರವರಿ 22; ಬೆಂಗಳೂರಿನಲ್ಲಿ ಕಳೆದ ಗುರುವಾರ ಅಮೂಲ್ಯ ಲಿಯೋನಾ ಎನ್ನುವಳು 'ಪಾಕ್ ಜಿಂದಾಬಾದ್' ಎಂದು ಕೂಗಿರುವುದು ರಾಜ್ಯದಲ್ಲಿ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.
ಈ ಕುರಿತು ಧಾರವಾಡದಲ್ಲಿ ಮಾತನಾಡಿರುವ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು, ಪಾಕ್ ಜಿಂದಾಬಾದ್ ಎಂದು ಕೂಗುವವರ ಹಿಂದೆ ಇರುವವರು ಕಾಂಗ್ರೆಸ್ನವರು ಎಂದು ನೇರವಾಗಿ ಕಾಂಗ್ರೆಸ್ ಮುಖಂಡರ ಕಡೆಗೆ ಬೊಟ್ಟು ಮಾಡಿದ್ದಾರೆ. ಕಾಂಗ್ರೆಸ್ ನಾಯಕರ ಬೆಂಬಲದಿಂದಾಗಿಯೇ ಹೆಚ್ಚಿನ ರೀತಿಯ ಚಟುವಟಿಕೆಗೆ ಇಂಬು ಕೊಟ್ಟಂತಾಗಿದೆ ಎಂದು ಆರೋಪಿಸಿದ್ದಾರೆ.
ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ಮಾತನಾಡಿರುವ ಜಗದೀಶ್ ಶೆಟ್ಟರ್ ಅವರು, ಮುಂದೊಂದು ದಿನ ಕಾಂಗ್ರೆಸ್ ಮುಖಂಡ ಡಿ ಕೆ ಶಿವಕುಮಾರ್ ಬಾಯಿಯಿಂದಲೂ ಪಾಕ್ ಜಿಂದಾಬಾದ್ ಘೋಷಣೆ ಹೊರ ಬರಬಹುದು ಎಂದು ವಿವಾದದ ಕಿಡಿ ಹೊತ್ತಿಸಿದ್ದಾರೆ.

ಡಿಕೆಶಿ ಪ್ರೋತ್ಸಾಹ ಕೊಡುತ್ತಿದ್ದಾರೆ
'ಪಾಕಿಸ್ತಾನ ಜಿಂದಾಬಾದ್ ಎನ್ನುವವರಿಗೆ ಡಿಕೆಶಿ ಪ್ರೋತ್ಸಾಹ ಕೋಡುವುದು ಖಂಡನಾರ್ಹ. ಇವತ್ತು ಹುಡುಗಿ ಬಾಯಲ್ಲಿ ಪಾಕಿಸ್ತಾನ ಬಂದಿದೆ, ಮುಂದೊಂದು ದಿನ ಡಿಕೆಶಿ ಬಾಯಲ್ಲಿ ಪಾಕಿಸ್ತಾನದ ಜಿಂದಾಬಾದ್ ಬಂದರೆ ಅಚ್ಚರಿ ಪಡಬೇಕಿಲ್ಲ' ಎಂದು ಡಿಕೆಶಿ ವಿರುದ್ದ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು.

ಡಿಕೆಶಿ ಏನು ಹೇಳಿದ್ದರು
'ಅಮೂಲ್ಯ ಲಿಯೋನ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ್ದ ಡಿ ಕೆ ಶಿವಕುಮಾರ್ ಅವರು, ಅಮೂಲ್ಯ ಪಾಕ್ ಪರ ಹೇಳಿಕೆ ಬಗ್ಗೆ ನಾನೇನೂ ಮಾತನಾಡುವುದಿಲ್ಲ. ಆದರೆ, ಏಕೆ ಏನು ಹೇಳಲು ಹೊರಟಿದ್ದಳು ಎಂಬುದಕ್ಕೆ ಅವಕಾಶ ಕೊಡಬೇಕಿತ್ತು' ಎಂದು ಹೇಳಿದ್ದರು. ಈ ಹೇಳಿಕೆಗೆ ಧಾರವಾಡದಲ್ಲಿ ಶೆಟ್ಟರ್ ಗರಂ ಆಗಿ ಪ್ರತಿಕ್ರಿಯಿಸಿದ್ದಾರೆ.

ದೇಶದ ರಕ್ಷಣೆಗೆ ಕಾಂಗ್ರೆಸ್ ಬೆಂಬಲಿಸಬೇಕು
'ಕಾಂಗ್ರೆಸ್ನವರು ಸಿಎಎ ಬಗ್ಗೆ ಮುಸಲ್ಮಾನರಲ್ಲಿ ಭಯ ಹುಟ್ಟಿಸುವ ಕೆಸಲ ಮಾಡುತ್ತಿದ್ದಾರೆ. ದೇಶದ ಸುರಕ್ಷತೆ, ದೇಶದ ರಕ್ಷಣೆಗೆ ಕಾಂಗ್ರೆಸ್ ಬೆಂಬಲಿಸಬೇಕು. ಕಾಂಗ್ರೆಸ್ ಸರ್ಕಾರ ಇದ್ದಾಗ ಅಕ್ರಮವಾಗಿ ಬಹಳ ಜನ ದೇಶದೊಳಗೆ ನುಸುಳಿದ್ದಾರೆ. ಬೆಂಗಳೂರಿನಲ್ಲಿ ಲಕ್ಷಾಂತರ ಜನ ಬಾಂಗ್ಲಾದವರಿದ್ದಾರೆ, ಅಂತಹವರನ್ನು ಮೋದಿ ಸರ್ಕಾರ ಹೊರ ಹಾಕುವ ಕೆಲಸ ಮಾಡುತ್ತಿದೆ' ಎಂದು ಶೆಟ್ಟರ್ ಪಾಕ್ ಪರ ಘೋಷಣೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಘಟಕರ ವಿಚಾರಣೆ
ಕಳೆದ ಗುರುವಾರ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಅಮೂಲ್ಯ ಲಿಯೋನಾ ಎನ್ನುವರಳು ದೇಶ ವಿರೋಧಿ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾವೇಶದ ಆಯೋಜಕರನ್ನು ಪೊಲೀಸರು ವಿಚಾರಣೆಗೆ ಕರೆದಿದ್ದಾರೆ. ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷಾ ಅವರನ್ನು ಪಶ್ಚಿಮ ವಿಭಾಗ ಪೊಲೀಸರು ಶನಿವಾರ ಮಧ್ಯಾಹ್ನ ವಿಚಾರಣೆ ನಡೆಸಿದ್ದಾರೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications