Get Updates
Get notified of breaking news, exclusive insights, and must-see stories!

Drought Relief Fund: ಬರ ಪರಿಹಾರ ಹಣ ಸಾಲದ ಖಾತೆಗೆ ಜಮೆ ಮಾಡದಂತೆ ಸೂಚನೆ

ಧಾರವಾಡ, ಮೇ. 19: ಸರಕಾರದಿಂದ ಬಿಡುಗಡೆ ಆಗಿರುವಂತಹ ಪ್ರೋತ್ಸಾಹ ಧನ, ಬರ ಪರಿಹಾರ ನೇರವಾಗಿ ಫಲಾನುಭವಿಗಳ ಖಾತೆಗೆ (ಡಿಬಿಟಿ ಮೂಲಕ) ಸಂದಾಯವಾಗಿರುವಂತಹ ಹಣವನ್ನು ಯಾವುದೇ ಕಾರಣಕ್ಕೆ ಸಾಲದ ಖಾತೆಗೆ ಜಮಾ ಮಾಡಬಾರದೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚಿಸಿದ್ದಾರೆ.

ಸರಕಾರವು ಯಾವುದೇ ಪ್ರೋತ್ಸಾಹ ಧನ ಅಥವಾ ಸಹಾಯ ಧನವನ್ನು ರೈತರ ಹಾಗೂ ಸಾರ್ವಜನಿಕರ ಜೀವನೋಪಾಯಕ್ಕಾಗಿ ಬಿಡುಗಡೆ ಮಾಡುತ್ತದೆ. ಆದ್ದರಿಂದ ಬರ ಪರಿಹಾರದ ಹಣ ಸೇರಿದಂತೆ ವೃದ್ಯಾಪ್ಯ ವೇತನ, ಅಂಗವಿಕಲರ ಮಾಶಾಸನ, ನರೇಗಾ ಕೂಲಿ ಹಾಗೂ ಇತರೆ ಸರಕಾರದಿಂದ ಬಿಡುಗಡೆ ಆಗಿರುವಂತಹ ಪ್ರೋತ್ಸಾಹ ಧನ ಸಾಲದ ಖಾತೆಗೆ ಜಮಾ ಮಾಡಬಾರದೆಂದು ತಿಳಿಸಿದ್ದಾರೆ.

Do not deposit drought relief fund into loan account DC Order

ಬರ ಪರಿಹಾರದ ಹಣ ಸಾಲದ ಖಾತೆಗೆ ಜಮಾ ಮಾಡಬೇಡಿ

ಸರಕಾರದಿಂದ ಬಿಡುಗಡೆ ಮಾಡಿರುವ ಬರ ಪರಿಹಾರದ ಹಣವು ಬ್ಯಾಂಕಿನಲ್ಲಿ ಸಾಲದ ಖಾತೆಗೆ ಜಮಾ ಆಗಿತ್ತಿರುವ ಕುರಿತು ರೈತರಿಂದ ದೂರುಗಳು ಬಂದಿವೆ. ಹೀಗಾಗಿ ಧಾರವಾಡ ರೂಡ್ ಸೆಟ್ ಆವರಣದ ಸಭಾಂಗಣದಲ್ಲಿ (RUDSETI) ಆವರಣದಲ್ಲಿ ಆರ್.ಬಿ.ಐ ಅಧಿಕಾರಿ ಮೋನಿ ರಾಜ ಬ್ರಹ್ಮ, ಜಿಲ್ಲಾ ಲೀಡ ಬ್ಯಾಂಕ ವ್ಯವಸ್ಥಾಪಕರ ಪ್ರಭುದೇವ ಎನ್‌ಜಿ ಉಪಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ಬ್ಯಾಂಕಿನ ವ್ಯವಸ್ಥಾಪಕರುಗಳ ಜೊತೆ ತುರ್ತು ಸಭೆ ಮಾಡಿದ್ದಾರೆ.

ಸರಕಾರದಿಂದ ಬಿಡುಗಡೆಯಾದ ಯಾವುದೇ ತರಹದ ಪ್ರೋತ್ಸಾಹ ಧನವನ್ನು ಸಾಲದ ಖಾತೆಗೆ ಹೊಂದಾಣಿಕೆ ಮಾಡದೆ ಗ್ರಾಹಕರ ಉಪಯೋಗಕ್ಕೆ ಅನುಕೂಲ ಮಾಡಿಕೊಡಬೇಕು. ಅವರ ಜೊತೆ ಸಂಯಮದಿಂದ ವರ್ತಿಸಬೇಕು. ತಾಂತ್ರಿಕ ಸಮಸ್ಯೆ ಇದ್ದರೆ ಗ್ರಾಹಕರಿಗೆ ಸರಿಯಾಗಿ ತಿಳುವಳಿಕೆ ನೀಡಿ ಮಾರ್ಗದರ್ಶನ ಮಾಡಬೇಕು ಮತ್ತು ಸಮಸ್ಯೆಯನ್ನು ಬೇಗನೆ ಪರಿಹರಿಸಬೇಕು ಎಂದು ತಿಳಿಸಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ಬ್ಯಾಂಕ್‌ಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಸರಕಾರದ ಯೋಜನೆಗಳ ಲಾಭವನ್ನು ತಲುಪಿಸುತ್ತಿವೆ. ಆದರೆ ಎಲ್ಲ ಬ್ಯಾಂಕ್ ಗಳು ಇದನ್ನು ಅನುಸರಿಸಬೇಕು. ಸರಿಯಾದ ಸಮಯಕ್ಕೆ ಉದ್ಯೋಗಿಗಳಿಗೆ ಸಾಲ, ಸಹಾಯಧನ ಸೌಲಭ್ಯ ದೊರೆಯಬೇಕು ಎಂದು ಹೇಳಿದ್ದಾರೆ.

Do not deposit drought relief fund into loan account DC Order

ಪ್ರೋತ್ಸಾಹ ಧನವನ್ನು ಸಾಲಕ್ಕೆ ಜಮೆ ಮಾಡಬಾರದು

ರೈತರ ಸಹಮತ ವಿಲ್ಲದೆ ಬರಪರಿಹಾರ ಸೇರಿದಂತ ಯಾವ ಪ್ರೋತ್ಸಹಧನವನ್ನು ಸಾಲಕ್ಕೆ ಜಮೆ ಮಾಡಬಾರದು. ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಎಲ್ಲ ಬ್ಯಾಂಕ್ ಶಾಖೆಗಳಿಗೆ ಮಾಹಿತಿ ನೀಡಿ, ರೈತರಿಗೆ ತೊಂದರೆ ಆಗದಂತೆ ನಿರಂತರ ನಿಗಾ ವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚಿಸಿದ್ದಾರೆ.

ಜಿಲ್ಲೆಯ ಬ್ಯಾಂಕುಗಳಿಂದ 2,90,392 ಫಲಾನುಭವಿಗಳು ಕೃಷಿ ಸಾಲ ಪಡೆದಿದ್ದಾರೆ. ಗೊತ್ತುಪಡಿಸಿದ ಗುರಿಗೆ ಹೋಲಿಸಲಾಗಿ ಶೇ. 125 ಕೃಷಿ ಸಾಲ ಮತ್ತು ಶೇ.164 ಆಧ್ಯತಾ ವಲಯಕ್ಕೆ ಹೆಚ್ಚಿನ ಸಾಲವನ್ನು ವಿತರಿಸಲಾಗಿದೆ ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪ್ರಭುದೇವ ಎನ್. ಜಿ. ಮಾಹಿತಿ ನೀಡಿದ್ದಾರೆ.

2024-25 ನೇ ಸಾಲಿನಲ್ಲಿ ಬೆಳೆ ಸಾಲ ವಲಯದಲ್ಲಿ 1,27,283 ಫಲಾನುಭವಿಗಳು ಇದ್ದು, ಮಾರ್ಚ್ 2024 ರ ಅಂತ್ಯಕ್ಕೆ 1,640.27 ಕೋಟಿ ರೂ.ಗಳಷ್ಟು ಗುರಿ ಹೊಂದಿದ್ದು, 2291.25 ಕೋಟಿ ರೂ.ಗಳಷ್ಟು ಸಾಧನೆ ಮಾಡಲಾಗಿದೆ. ಒಟ್ಟು 140 ರಷ್ಟು ಶೇಕಡಾವಾರು ಸಾಧನೆ ಆಗಿದೆ. ಕೃಷಿ ಅವಧಿ ಸಾಲ ವಲಯದಲ್ಲಿ 1,63,109 ಫಲಾನುಭವಿಗಳು ಇದ್ದು, ಮಾರ್ಚ್ 2024 ರ ಅಂತ್ಯಕ್ಕೆ 1,741.76 ಕೋಟಿ ರೂ.ಗಳಷ್ಟು ಗುರಿ ಹೊಂದಿದ್ದು, 1,946.22 ಕೋಟಿ ರೂ.ಗಳಷ್ಟು ಸಾಧನೆ ಮಾಡಲಾಗಿದೆ ಎಂದಿದ್ದಾರೆ.

ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ವಲಯದಲ್ಲಿ 47,160 ಫಲಾನುಭವಿಗಳು ಇದ್ದಾರೆ. ಇತರ ಆಧ್ಯತಾ ವಲಯದಲ್ಲಿ 68,824 ಫಲಾನುಭವಿಗಳು ಇದ್ದಾರೆ. ಆಧ್ಯತಾ ರಹಿತ ವಲಯದಲ್ಲಿ 1,39,313 ಫಲಾನುಭವಿಗಳು ಇದ್ದಾರೆ. ಒಟ್ಟಾರೆಯಾಗಿ 5,45,689 ಫಲಾನುಭವಿಗಳು ಇದ್ದು ಮಾರ್ಚ್ 2024 ರ ಅಂತ್ಯಕ್ಕೆ 14,580.46 ಕೋಟಿ ರೂ.ಗಳಷ್ಟು ಗುರಿ ಹೊಂದಿದ್ದು, 19,560.73ಕೋಟಿ ರೂ.ಗಳಷ್ಟು ಸಾಧನೆ ಮಾಡಲಾಗಿದೆ. ಒಟ್ಟು 139 ಶೇಕಡಾವಾರು ಸಾಧನೆ ಆಗಿದೆ ಎಂದು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+