ಸಂಬಳದಲ್ಲಿ ಮಾಸ್ಕ್ ಹಂಚಿ ಕೊರೊನಾ ಜಾಗೃತಿಗೆ ಮುಂದಾದ ಧಾರವಾಡದ ಯುವ ವೈದ್ಯ
ಧಾರವಾಡ, ನವೆಂಬರ್ 16: ಜನರಿಗೆ ಉಚಿತವಾಗಿ ಮಾಸ್ಕ್ ವಿತರಿಸುವ ಮೂಲಕ ಕೊರೊನಾ ಸೋಂಕಿನ ಕುರಿತು ಜಾಗೃತಿ ಮೂಡಿಸಲು ಮುಂದಾಗಿದ್ದಾರೆ ಧಾರವಾಡದ ಯುವ ವೈದ್ಯ.
ಧಾರವಾಡದ ಕಮಲಾಪುರ ನಿವಾಸಿಯಾಗಿರುವ ಡಾ. ಮಯೂರೇಶ್ ಲೋಹಾರ್, ಕೊರೊನಾ ಸೋಂಕಿನ ಕುರಿತ ಜಾಗೃತಿಗೆ ಈ ಭಿನ್ನ ನಡೆ ಇಟ್ಟಿರುವವರು. ಇದೇ ಜುಲೈ ತಿಂಗಳಿನಲ್ಲಿ ಎಂಬಿಬಿಎಸ್ ಮುಗಿಸಿದ ಮಯೂರೇಶ್, ಹಾವೇರಿ ಜಿಲ್ಲೆಯ ಸವಣೂರು ತಾಲೂಕು ಆಸ್ಪತ್ರೆಗೆ ಕೆಲಸಕ್ಕೆ ಹಾಜರಾದರು. ಅದಾಗಲೇ ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದರಿಂದ ಮಯೂರೇಶ್ ಅವರನ್ನು ಕೂಡಲೇ ಕೋವಿಡ್ ವಾರ್ಡ್ ಗೆ ನಿಯೋಜಿಸಲಾಯಿತು.
ಅಂದಿನಿಂದ ಮೂರು ತಿಂಗಳುಗಳ ಕಾಲ ಮಯೂರೇಶ್ ಒಂದು ದಿನ ರಜೆಯನ್ನು ತೆಗೆದುಕೊಳ್ಳದೇ ಕೆಲಸ ನಿರ್ವಹಿಸಿದ್ದಾರೆ. ಅಷ್ಟೇ ಅಲ್ಲದೇ, ತಮ್ಮ ವೇತನದಿಂದ ಒಂದು ಲಕ್ಷ ಐವತ್ತು ಸಾವಿರ ರೂಪಾಯಿ ಖರ್ಚು ಮಾಡಿ ಜನರಿಗೆ ಉಚಿತವಾಗಿ ಮಾಸ್ಕ್ ವಿತರಿಸುತ್ತಿದ್ದಾರೆ.

ತಮ್ಮ ಸ್ನೇಹಿತರ ಜೊತೆ ಸೇರಿ ಧಾರವಾಡದ ಮಾರುಕಟ್ಟೆ, ಬಸ್ ನಿಲ್ದಾಣ, ಶಿಕ್ಷಣ ಸಂಸ್ಥೆ, ಸರ್ಕಾರಿ ಕಚೇರಿಗಳಿಗೆ ತೆರಳಿ ಮಾಸ್ಕ್ ವಿತರಣೆ ಮಾಡಿದ್ದಾರೆ. ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಪೊಲೀಸ್ ಇಲಾಖೆ ಸೇರಿದಂತೆ ಸುಮಾರು ಹತ್ತು ಸಾವಿರ ಮಾಸ್ಕ್ ಗಳನ್ನು ತಮ್ಮ ಖರ್ಚಿನಿಂದಲೇ ಉಚಿತವಾಗಿ ನೀಡಿದ್ದಾರೆ. 5,000 ಎನ್ 95 ಹಾಗೂ 5,000 ಥ್ರೀ ಲೇಯರ್ ಮಾಸ್ಕ್ ಗಳನ್ನು ಹಂಚಿದ್ದು, ಬಿಒ ಕಚೇರಿಗೆ 1000, ಪೊಲೀಸ್ ಇಲಾಖೆಗೆ 500 ಮಾಸ್ಕ್ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಡಾ. ಮಯೂರೇಶ್, ಭಾರತವನ್ನು ಕೊರೊನಾದಿಂದ ಮುಕ್ತಗೊಳಿಸಲೇಕು. ಆದರೆ ಕೆಲವರಿಗೆ ಅನಿವಾರ್ಯ ಕಾರಣದಿಂದ ಮಾಸ್ಕ್ ಕೊಳ್ಳಲು ಸಾಧ್ಯವಾಗಿರುವುದಿಲ್ಲ. ಅಂಥವರಿಗೆ ಉಚಿತವಾಗಿ ಮಾಸ್ಕ್ ನೀಡುವ ಮೂಲಕ ಕೊರೊನಾ ಜಾಗೃತಿ ಮೂಡಿಸಲು ಮುಂದಾಗಿದ್ದೇವೆ. ನನ್ನ ಸ್ನೇಹಿತರೂ ಈ ಕಾರ್ಯಕ್ಕೆ ಕೈಜೋಡಿಸಿದ್ದಾರೆ ಎಂದು ಹೇಳಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications