ವಿನಯ್ ಕುಲಕರ್ಣಿಗೆ ಡಿಸಿಎಂ ಪಟ್ಟ ನೀಡಿ: ಧಾರವಾಡದ ಮುರುಘಾಮಠ ಶ್ರೀಗಳ ಒತ್ತಾಯ
ಧಾರವಾಡ, ಮೇ, 15: ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಗೆಲುವು ದಾಖಲಿಸಿರುವ ವಿನಯ್ ಕುಲಕರ್ಣಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಧಾರವಾಡದ ಪ್ರಸಿದ್ಧ ಮುರುಘಾಮಠದ ಡಾ.ಮಲ್ಲಿಕಾರ್ಜುನ ಸ್ವಾಮೀಜಿ ಒತ್ತಾಯಿಸಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಜನಪ್ರಿಯ ಶಾಸಕರಾಗಿದ್ದಾರೆ. ಅಲ್ಲದೆ ಉತ್ತರ ಕರ್ನಾಟಕದ ಪ್ರಬಲ ನಾಯಕರು ಕೂಡ ಆಗಿದ್ದಾರೆ. ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿದರೆ ಚೆನ್ನಾಗಿರುತ್ತದೆ. ಇದು ನನ್ನ ಸ್ವಂತ ವಿಚಾರವಾಗಿದೆ. ಸಾಮಾಜಿಕವಾಗಿ ನಾನು ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೇನೆ ಎಂದರು.

ವಿನಯ್ ಕುಲಕರ್ಣಿ ಮುರುಘಾಮಠದ ಕಾರ್ಯಾಧ್ಯಕ್ಷರು ಆಗಿದ್ದಾರೆ. ಅವರ ಜೊತೆ ಉಳಿದ ಲಿಂಗಾಯತ ಶಾಸಕರಿಗೂ ಒಳ್ಳೆಯ ಸ್ಥಾನಮಾನ ಕೊಡಬೇಕು. ವಿನಯ್ ಕುಲಕರ್ಣಿ ಈ ಹಿಂದೆಯೂ ಸಚಿವರಾಗಿ ಕೆಲಸ ಮಾಡಿದ್ದಾರೆ. ಅವರಿಗೆ ಡಿಸಿಎಂ ಸ್ಥಾನ ಕೊಟ್ಟಿದ್ದೇ ಆದಲ್ಲಿ ಅವರು ಇನ್ನೂ ಎತ್ತರಕ್ಕೆ ಬೆಳೆಯಲು ಪುಷ್ಠಿ ನೀಡಿದಂತಾಗುತ್ತದೆ. ಅವರು ನಮ್ಮ ಮಠದ ಕಾರ್ಯಾಧ್ಯಕ್ಷರಾಗಿರುವುದರಿಂದ ಇದರಲ್ಲೂ ನಮ್ಮ ಸ್ವಾರ್ಥ ಇದೆ ಎಂದರು.
ನಿರ್ಲಕ್ಷ್ಯ ಮಾಡಿದರೆ ಪೆಟ್ಟು ತಿನ್ನುತ್ತಾರೆ
ಮತ್ತೊಂದೆಡೆ ನಾನು ಹಿಂದೆ ಯಡಿಯೂರಪ್ಪನ ಕಣ್ಣೀರನಲ್ಲಿ ಬಿಜೆಪಿ ಸರ್ಕಾರಕೊಚ್ಚಿ ಹೋಗುತ್ತದೆ ಎಂದಿದ್ದೆ. ಇವತ್ತು ಆ ಪಕ್ಷದ ನಾಯಕರಿಗೆ ಅರಿವಾಗಿದೆ. ಅಲ್ಲದೆ ಅಧಿಕಾರ ಬಂದ ಸಂದರ್ಭದಲ್ಲಿ ಆ ಪಕ್ಷದ ನಾಯಕರನ್ನು ನಿರ್ಲಕ್ಷ್ಯ ಮಾಡಿದರೆ ತಿನ್ನಬಾರದ ಪೆಟ್ಟು ತಿನ್ನುತ್ತಾರೆ ಎಂದು ಶಿರಹಟ್ಟಿ ಮಠದ ದಿಂಗಾಲೇಶ್ವರ ಸ್ವಾಮೀಜಿ ಹುಬ್ಬಳ್ಳಿಯಲ್ಲಿ ಹೇಳಿದರು.
ಹುಬ್ಬಳ್ಳಿ ತಾಲೂಕಿನ ನೂಲ್ವಿ ಹೊರವಲಯದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಾನು ಅವತ್ತು ಒಬ್ಬ ವ್ಯಕ್ತಿ ಉದ್ದೇಶಿಸಿ ಮಾತಾಡಿರಲಿಲ್ಲ. ಯಡಿಯೂರಪ್ಪ ಎಲ್ಲರಿಗೂ ಬೇಕಾದ ನಾಯಕರು. ಅವತ್ತು ಎಲ್ಲ ಸಮಾಜದ ನಾಯಕರು ಯಡಿಯೂರಪ್ಪರನ್ನು ಮಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಸಬೇಕು ಎಂದಿದ್ದರು. ಆದರೆ ಯಾವುದೋ ಕೆಟ್ಟ ಉದ್ದೇಶ, ಅಥವಾ ಸ್ವಾರ್ಥಕ್ಕೆ ತೆಗೆದುಕೊಂಡ ನಿರ್ಣಯ ಇಂದಿನ ಹೀನಾಯ ಪರಿಸ್ಥಿತಿಗೆ ಕಾರಣವಾಗಿದೆ ಎಂದರು.
ಹಿಂದೆ ಪರ್ಸೆಂಟೇಜ್ ಬಗ್ಗೆ ದುರಹಂಕಾರಿಯಾಗಿ ಮಾತನಾಡಿದ್ದರು. ಗುಂಡಾ ವೃತ್ತಿಯಲ್ಲಿ ದಾಳಿ ಮಾಡಿದ್ದರು. ಅದರ ಪರಿಣಾಮವೇ ಇಂದು ಕಾಡುತ್ತಿದೆ ಎಂದು ಸ್ವಾಮೀಜಿ ಹೇಳಿದರು. ಅಲ್ಲದೆ ಸ್ವಾಮೀಜಿ ಗಂಭಿರ ಹೇಳಿಕೆ ಮಾಡಿದಾಗ, ಚಿಂತನ ಮಂಥನ ಮಾಡಬೇಕು. ಕೇಸರಿ ಪಡೆ ಎಂದು ಹೇಳಿ ಅಧಿಕಾರಕ್ಕೆ ಬಂದು, ಖಾವಿಧಾರಿಗಳನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಖಾವಿ ದಾರಿಗಳು ಪಾಠ ಮಾಡಿದ್ದರು, ಆದರೆ ಅವರು ಪಾಠವನ್ನು ಕಲಿಯಲಿಲ್ಲ. ರಾಜ್ಯದ ಹಿರಿಯ ನಾಯಕರನ್ನು ಕಡೆಗಣಿಸಿದ್ದೆ ಬಿಜೆಪಿ ಇಂದಿನ ಸ್ಥಿತಿಗೆ ಕಾರಣವಾಗಿದೆ. ಯಡಿಯೂರಪ್ಪ, ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ ಅವರನ್ನು ಕಡೆಗಣಸಿರೋದೆ ಇದಕ್ಕೆಲ್ಲ ಕಾರಣ. ಪಕ್ಷ ಕಟ್ಟದ ವ್ಯಕ್ತಿ ಮಾತು ಕೇಳಬೇಕು ಅಂದರೆ ಏನು.? ಎಂದ ಪ್ರಶ್ನಿಸುವ ಮೂಲಕ ಪರೋಕ್ಷವಾಗಿ ಬಿ.ಎಲ್.ಸಂತೋಷ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸುವಾಗ ಹೇಗೆ ನಡೆಸಿಕೊಂಡರು ಎನ್ನುವ ವಿಚಾರ ಇಡೀ ರಾಜ್ಯಕ್ಕೆ ಗೊತ್ತಿದೆ. ಬಿಜೆಪಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಚುನಾವಣೆ ಒಂದೇ ಅಂತಾ ತಿಳಿದುಕೊಂಡಿದ್ದರು. ಜಗದೀಶ್ ಶೆಟ್ಟರ್, ಸವದಿಯನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕಿತ್ತು ಎಂದರು. ಹಾಗೆಯೆ ಬ್ರಾಹ್ಮಣ ವಿಚಾರವಾಗಿ ನಾನು ಆರು ತಿಂಗಳ ನಂತರ ಸುದ್ದಿಗೋಷ್ಠಿ ಮಾಡುತ್ತೇನೆ. ರಾಜ್ಯದಲ್ಲಿ ಏನಾಗಿದೆ ಅನ್ನುವ ದಾಖಲೆ ಇದೆ ಎಂದರು.
ಬ್ರಾಹ್ಮಣರ ಬಗ್ಗೆ ಮಾತನಾಡುವುದಕ್ಕೆ ನನಗೆ ಭಯ ಇಲ್ಲ. ನನಗೆ ಯಾರ ಅಂಕುಶವೂ ಇಲ್ಲ ಎಂದು ಸ್ವಾಮೀಜಿ ಗುಡುಗಿದರು.
ರಾಜ್ಯದ ನಾಯಕರನ್ನು ಬಹಳ ಕೆಟ್ಟ ರೀತಿಯಲ್ಲಿ ನೋಡಿಕೊಂಡರು. ಹಾಗೆಯೆ ದಕ್ಷಿಣ ಭಾರತದ ಕುದುರೆಗಳನ್ನು ಕತ್ತೆ ಅಂದುಕೊಂಡಿದ್ದೇ ಇದಕ್ಕೆಲ್ಲ ಕಾರಣ ಎಂದರು.
ಕರ್ನಾಟಕದ ನಾಯಕರನ್ನು ಬಿಟ್ಟು ಏನಾದರೂ ಮಾಡುತ್ತೇನೆ ಅಂದುಕೊಂಡರು. ರಾಜ್ಯದ ಮತದಾರರು ಬುದ್ಧಿಗೇಡಿಗಳಾ? ರಾಷ್ಟ್ರ ನಾಯಕರಿಗೆ ಸರಿಯಾದ ಪಾಠ ಕಲಿಸಿದ್ದಾರೆ. ಅಲ್ಲದೆ ರಾಜ್ಯವನ್ನು ಸರಿಯಾದ ರೀತಿ ನಡೆಸುವ ವ್ಯಕ್ತಿ ಸಿಎಂ ಆಗಬೇಕು ಎಂದು ಸ್ವಾಮೀಜಿ ಆಗ್ರಹಿಸಿದರು.
ಇನ್ನು ಸಮರ್ಥ, ಯೋಗ್ಯ ವ್ಯಕ್ತಿ ಸಿಎಂ ಆಗಬೇಕು. ಕರ್ನಾಟಕವನ್ನು ಒಂದೇ ದೃಷ್ಟಿಕೋನದಲ್ಲಿ ನೋಡುವವರು ಸಿಎಂ ಆಗಬೇಕು. ಲಿಂಗಾಯತ ನಾಯಕನಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಅದರಲ್ಲೂ ಉತ್ತರ ಕರ್ನಾಟಕದ ಲಿಂಗಾಯತ ನಾಯಕನಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಇದು ನಮ್ಮ ಅಭಿಪ್ರಾಯ ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications