ಧಾರವಾಡದ ಬರೋಬ್ಬರಿ 77 ಗ್ರಾಮಗಳಲ್ಲಿ ಜಲ ಕ್ಷಾಮ: ಹನಿ ನೀರಿಗೂ ಜನರ ಸರ್ಕಸ್
ಧಾರವಾಡ ಜುಲೈ 03: ಮಳೆಗಾಲ ಆರಂಭವಾಗಿದ್ದರೂ ಧಾರವಾಡ ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ಭವಣೆ ಮಾತ್ರ ಕಡಿಮೆಯಾಗಿಲ್ಲ. ಜಿಲ್ಲೆಯ ಬರೋಬ್ಬರಿ 77 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. 4 ಹಳ್ಳಿಗಳಿಗೆ ಟ್ಯಾಂಕರ್ ನೀರು ಆಧಾರವಾಗಿದ್ದು, ಕೆಲವೆಡೆ ಖಾಸಗಿ ಬೋರ್ವೆಲ್ ಮೂಲಕ ನೀರು ಪೂರೈಕೆ ಮಾಡಲಾಗಿತ್ತಿದೆ. ಈ ನಡುವೆ ಕೆರೆ ಕಟ್ಟೆಗಳೆಲ್ಲ ಬತ್ತಿ ಮೈದಾನದಂತಾಗಿವೆ.
ಅಂತರ್ಜಲ ಪಾತಾಳಕ್ಕೆ ಇಳಿದು ಬೋರವೆಲ್ಗಳು ಕೆಟ್ಟು ನಿಂತಿವೆ. ಕುಡಿಯುವ ನೀರಿಗಾಗಿ ಕಿಲೋ ಮೀಟರ್ಗಟ್ಟಲೇ ದೂರ ಕ್ರಮಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಧಾರವಾಡ ಜಿಲ್ಲೆಯ ಬರೋಬ್ಬರಿ 77 ಗ್ರಾಮಗಳಲ್ಲಿ ಕುಡಿಯುವ ನೀರಿಗಾಗಿ ಊಹೆಗೂ ನಿಲುಕದ ಪರಿಸ್ಥಿತಿ ನಿರ್ಮಾಣವಾಗಿದೆ.

ಮಳೆ ಕೊರತೆಯಿಂದ ಬರ ಎದುರಾಗುತ್ತದೆ ಎಂಬ ಆತಂಕದ ಮಧ್ಯೆಯೇ ಬರದ ಭೀಕರತೆ ಸಾಕ್ಷಿಕರಿಸುವ ದೃಶ್ಯಗಳು ಕಣ್ಣಿಗೆ ರಾಚುತ್ತಿವೆ. ಜಿಲ್ಲೆಯಲ್ಲಿ ಮೇ ಎರಡನೆಯ ವಾರದಲ್ಲೇ ಮಳೆ ಶುರುವಾಗುತ್ತಿತ್ತು. ಆದರೆ ಈ ವರ್ಷ ಮಾತ್ರ ಜುಲೈ ತಿಂಗಳ ಆರಂಭವಾದರೂ ಮಳೆಯಾಗಿಲ್ಲ. ಮಳೆ ಕೊರತೆಯಿಂದ ಶೇ. 10ರಷ್ಟು ಮಾತ್ರ ಬಿತ್ತನೆಯಾಗಿದೆ. ಬಿತ್ತನೆ ಮಾಡಲು ತಂದಿಟ್ಟ ಬೀಜ ಹಾಗೂ ಗೊಬ್ಬರ ಮನೆಯ ಮೂಲೆ ಸೇರಿವೆ.
ಮಳೆ ಇಲ್ಲದ ಕಾರಣ ಕೃಷಿ ಚಟುವಟಿಕೆಗಳೇ ಸ್ಥಗಿತಗೊಂಡು, ಕುಂಟಿ ಕೂರಿಗೆ ಅಟ್ಟದಿಂದ ಇನ್ನೂ ಇಳಿದಿಲ್ಲ. ಯಾವಾಗ ಮಳೆ ಸುರಿಯುತ್ತದೋ ಎಂದು ರೈತರು ಮುಗಿಲು ನೋಡುತ್ತಿದ್ದಾರೆ. ಈ ನಡುವೆ ಜಿಲ್ಲೆಯ 4 ಹಳ್ಳಿಗಳಲ್ಲಂತೂ ಹನಿ ನೀರಿಗೂ ಪರದಾಟ ಎದುರಾಗಿದೆ.
ಕಲಘಟಗಿ ತಾಲೂಕಿನ ಸಂಗಮೇಶ್ವರ, ಕೊಡಗಿ, ಹಸರಂಬಿ ಹಾಗೂ ಕುಂದಗೋಳ ತಾಲೂಕು ಬೆಟದೂರ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಕುಡಿಯುವ ನೀರಿನ ಪರದಾಟದೊಂದಿಗೆ ಇದೀಗ ಹಣ ಖರ್ಚು ಮಾಡಿ ಬೆಳೆಗೆ ಟ್ಯಾಂಕರ್ ಮೂಲಕ ನೀರು ಹಾಕುವ ಸಾಹಸವನ್ನೂ ಕೂಡ ರೈತರು ಮಾಡುತ್ತಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭಗೊಂಡು ಮತ್ತೊಂದು ಹಂಗಾಮಿಗೆ ಸಿದ್ಧತೆಯಾಗಬೇಕಿತ್ತು. ಆದರೆ ಜಿಲ್ಲೆಯಲ್ಲಿ ತುಂತುರು ಮಳೆ ಕೂಡ ಸುರಿಯದ ಪರಿಣಾಮ ಬರದ ಭಯ ಸೃಷ್ಟಿಯಾಗಿದೆ. ಆಕಾಶದಲ್ಲಿ ಮೋಡಗಳು ಆವರಿಸುತ್ತಿವೆ, ಆದರೆ ಮಳೆ ಹನಿ ಮಾತ್ರ ಕಾಣುತ್ತಿಲ್ಲ. ಸ್ಥಿತಿ ಹೀಗೆ ಮುಂದುವರಿದರೆ ರೈತರ ಪರಿಸ್ಥಿತಿ ದಯನೀಯವಾಗಲಿದ್ದು, ಹುಬ್ಬಳ್ಳಿ ಧಾರವಾಡ ಅವಳಿ ನಗರದ ಬಹುತೇಕ ಕಡೆಯಲ್ಲಿ ಹನಿ ನೀರಿಗಾಗಿ ಜನರು ಪರದಾಡಬೇಕಾದ ಸ್ಥಿತಿ ಎದುರಾಗಲಿದೆ.
ಒಟ್ಟಿನಲ್ಲಿ ಧಾರವಾಡ ಜಿಲ್ಲೆಯ ಜನರ ದುರಾದೃಷ್ಟವೋ ಏನೋ ಗೊತ್ತಿಲ್ಲ. ಮಳೆಯಾದರೇ ಪ್ರವಾಹ ಭೀತಿ ಎದುರಾಗುತ್ತದೆ. ಮಳೆ ಬರದಿದ್ದರೇ ಕುಡಿಯುವ ಹನಿ ನೀರಿಗೂ ಹಾಹಾಕಾರ ಉಂಟಾಗುತ್ತದೆ. ಈ ಬಗ್ಗೆ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಕಾರ್ಯವನ್ನು ಮಾಡಬೇಕಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications