ಹುಬ್ಬಳ್ಳಿ: ಜಾರ್ಜ್ ಪ್ರತಿಕೃತಿ ದಹಿಸಿದ ಬಿಜೆಪಿ ಕಾರ್ಯಕರ್ತರು

ಹುಬ್ಬಳ್ಳಿ,ಜುಲೈ, 15: ಆತ್ಮಹತ್ಯೆ ಮಾಡಿಕೊಂಡ ಡಿವೈಎಸ್ಪಿ ಗಣಪತಿ ಅವರ ಸಾವಿಗೆ ಸಚಿವ ಕೆ.ಜೆ.ಜಾರ್ಜ್ ಕಾರಣ, ಜಾರ್ಜ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಸ್ಥಳೀಯ ದುರ್ಗದಬೈಲ್ ನಲ್ಲಿ ಪ್ರತಿಭಟನೆಯನ್ನು ನಡೆಸಿದ ಬಿಜೆಪಿ ಕಾರ್ಯಕರ್ತರು ಸಚಿವ ಜಾರ್ಜ್ ಪ್ರತಿಕೃತಿ ದಹಿಸಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.[ಸಿಐಡಿ ವರದಿ ಸೋರಿಕೆಯಾಗಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ]

karnataka

ಕೊಲೆಗಡುಕ ಸರಕಾರ, ದಕ್ಷ ಅಧಿಕಾರಿಗಳಿಗೆ ಸಾವಿನ ಭಾಗ್ಯ ನೀಡುವ ಸರಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರನ್ನುದ್ದೇಶಿಸಿ ಸಂಸದ ಪ್ರಹ್ಲಾದ ಜೋಶಿ ಮಾತನಾಡಿದರು.[ಹುಬ್ಬಳ್ಳಿ ಬಸ್ ನಿಲ್ದಾಣದಲ್ಲಿ ವೈಫೈ: ಧಾರವಾಡಕ್ಕೂ ಶೀಘ್ರ]

ರಾಜ್ಯ ಸರಕಾರದ ಆಡಳಿತ ವ್ಯವಸ್ಥೆ ಕುಸಿದಿದೆ, ವಿಧಾನ ಸೌಧದಲ್ಲಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದರೂ ಅದಕ್ಕೆ ಕ್ಯಾರೆ ಮಾಡುತ್ತಿಲ್ಲ. ಹಲವಾರು ವಿಧೇಯಕಗಳನ್ನು ವಿಧಾನ ಮಂಡಲದಲ್ಲಿ ಚರ್ಚಿಸದೇ ಅಂಗೀಕಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಆದ್ದರಿಂದ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಕರೆಯಿಸಿಕೊಂಡು ಚರ್ಚಿಸಬೇಕು ಎಂದರು.

ರಾಜ್ಯಪಾಲರೇ ಜಾರ್ಜ್ ರಾಜೀನಾಮೆಗೆ ಸೂಚನೆ ನೀಡಬೇಕೆಂದು ಹೇಳಿದ ಜೋಶಿ, ಅಧಿವೇಶನವನ್ನು ಮುಂದೂಡಿದರೆ ತಾವು ಸುಮ್ಮನಿರಲ್ಲ ಈ ಕುರಿತು ಸಂಸತ್ತಿನಲ್ಲಿಯೂ ಚರ್ಚಿಸುತ್ತೇವೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+