E-Khata Update: ಈ ಜಿಲ್ಲೆಯ ಜನರು ಗಮನಿಸಬೇಕಾದ ಮಾಹಿತಿ, ಅ.7 ರಿಂದ ಇ-ಖಾತಾ ಲಭ್ಯ
ಧಾರವಾಡ, ಅಕ್ಟೋಬರ್ 02: ಕರ್ನಾಟಕದ ನಗರಾಭಿವೃದ್ಧಿ ಇಲಾಖೆಯು ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶ ಸಂಯೋಜನೆ ಮಾಡಲು ಒಪ್ಪಿದೆ. ಆದ್ದರಿಂದ ತಂತ್ರಾಂಶಗಳ ಸಂಯೋಜನೆ, ಇ-ಖಾತಾ ಪಡೆಯುವ ಕುರಿತು ಅಪ್ಡೇಟ್ ಮಾಹಿತಿ ಸಿಕ್ಕಿದೆ.
ಹೌದು ಈ ಕುರಿತು ಧಾರವಾಡ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಅವರು ಮಾಹಿತಿ ನೀಡಿದ್ದಾರೆ. ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿ ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಿಕೊಳ್ಳುವಂತೆ ಇಲಾಖೆ ನಿರ್ದೇಶಿಸಿದೆ. ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2.0 ತಂತ್ರಾಂಶದೊಂದಿಗೆ ಸಂಯೋಜಿಸಲಾಗಿದೆ. ಇದರ ಸೇವೆ ನಿಮಗೆ ಅಕ್ಟೊಬರ್ 07ರಿಂದ ಲಭ್ಯವಾಗುವಂತೆ ಸರ್ಕಾರ ಆದೇಶಿಸಿದೆ ಎಂದು ಹೇಳಿದರು.

ಜಿಲ್ಲೆಯ ನಗರದ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಅಕ್ಟೋಬರ್ 07ರಿಂದ ಧಾರವಾಡ ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪ-ನೋಂದಣಿ ಕಛೇರಿಗಳಲ್ಲಿ ಸಂಸ್ಥೆಗಳ ತಂತ್ರಾಂಶದಿಂದಲೇ (ಇ-ಖಾತಾ) ಪಡೆಯಬೇಕು ಎಂದು ಅವರು ಸಾರ್ವಜನಿಕರಿಗೆ ಸೂಚಿಸಿದ್ದಾರೆ.
ಧಾರವಾಡ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ, ಖಾತಾ ತಂತ್ರಾಂಶ ವ್ಯವಸ್ಥೆ, ಸೇವೆಯನ್ನು ಜಾರಿಗೆ ತರಲಾಗಿದೆ ಎಂದರು.

ಕಾವೇರಿ ತಂತ್ರಾಂಶ ಸಂಯೋಜನೆ
2006ರಲ್ಲಿ ಕೃಷಿ ಜಮೀನಿನ ನೋಂದಣಿಗಾಗಿ 'ನೋಂದಣಿ ಮತ್ತು ಮುದ್ರಾಂಕ ಇಲಾಖೆ'ಯ ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಿದೆ. ಭೂಮಿಯ (ಹೊಲದ) ಜಮೀನಿನ ಸರ್ವೇ ನಕ್ಷೆ (ಸ್ಕೆಚ್) ನಮೂನೆ 11ಇ ಇರುವ ಮೋಜಣಿ ತಂತ್ರಾಂಶದೊಂದಿಗೆ ಕಾವೇರಿ ತಂತ್ರಾಂಶವನ್ನು 2016ರ ಅಕ್ಟೋಬರ್ 05ರಂದು ಸಂಯೋಜಿಸಲಾಯಿತು.
ಇನ್ನೂ ಗ್ರಾಮ ಪಂಚಾಯತ ವ್ಯಾಪ್ತಿಯ ಕೃಷಿಯೇತರ ಸ್ವತ್ತುಗಳ ದಸ್ತಾವೇಜುಗಳ ನೋಂದಣಿ ಮಾಡಿಕೊಳ್ಳಲು ಇಲಾಖೆಯು 2014 ರಿಂದ ತಂತ್ರಾಂಶ ಸಂಜೋಜನೆ ಮಾಡಿತು. ನಗರ ಭಾಗದಲ್ಲಿ ಕೃಷಿಯೇತರ ಆಸ್ತಿಗಳಿಗೆ ಕಾರ್ಯಚಟುವಟಿಕೆಗಾಗಿ ಇ- ಆಸ್ತಿ ತಂತ್ರಾಂಶ ರೂಪಿಸಲಾಗಿದೆ.
ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಇ-ಆಸ್ತಿ ತಂತ್ರಾಂಶವನ್ನು ಕಾವೇರಿ 2.0 ತಂತ್ರಾಂಶದೊಂದಿಗೆ ಪ್ರಾಯೋಗಿಕವಾಗಿ ರಾಮನಗರ ಮತ್ತು ಕನಕಪುರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ 2020ರ ಜನವರಿಯಲ್ಲಿ ಒಟ್ಟಗೂಡಿಸಿ ಸಂಯೋಜನೆ ಮಾಡಿದೆ. ಅಲ್ಲಿಂದ ಜನರಿಂದ ಯಶಸ್ವಿ ನೋಂದಣಿ ಯಶಸ್ವಿಯಾಗಿದೆ. ಇಲ್ಲಿ ಇಖಾತಾ ಪಡೆಯಲಾಗುತ್ತಿದೆ.
ವ್ಯಾಜ್ಯ ಸೃಷ್ಟಿ, ಮೋಸ ಹೋಗುವುದು ತಪ್ಪಲಿದೆ?
ಆಸ್ತಿಗೆ ಸಂಬಂಧಿಸಿದಂತೆ ಎರಡು ತಂತ್ರಾಂಶಗಳನ್ನು ಹೀಗೆ ಸಂಯೋಜನೆ ಮಾಡುವುದರಿಂದ ಇ-ಆಸ್ತಿ ತಂತ್ರಾಂಶದಿಂದಾಗಿ ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೊಸ ಹೋಗುವುದು ತಪ್ಪಲಿದೆ. ಇ-ಖಾತಾದಿಂದ ಮಾತ್ರ ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಕಷ್ಟವಾಗುವುದಿಲ್ಲ. ಇದೆಲ್ಲವು ಖರೀದಿ ವೇಳೆ ಮಹತ್ವದ ಪಾತ್ರ ನಿರ್ವಹಿಸುತ್ತವೆ.
ಮುಖ್ಯವಾಗಿ ಸ್ವಂತ ಆಸ್ತಿಯ ಮಾಲೀಕರಿಗೆ ವಂಚನೆ ಮಾಡಿ ಬೇರೆಯವರಿಗೆ ಸ್ವತ್ತು ನೋಂದಣಿ ಆಗುವುದಕ್ಕೆ ಇದು ಕಡಿವಾಣ ಹಾಕುತ್ತದೆ. ಈ ತಂತ್ರಾಂಶಗಳ ಸಹಾಯದಿಂದ ಆಸ್ತಿ ಖರೀದಿಸುವವರು ನೀವೆ ನೈಜ ಮಾಲೀಕರನ್ನು ಗುರುತಿಸಬಹುದಾಗಿದೆ. ಇದರಿಂದ ಮುಂದಿನ ದಿನಮಾನಗಳಲ್ಲಿ ಎದುರಾಗುವ ಕಾನೂನು ವ್ಯಾಜ್ಯಗಳನ್ನು ನಿಯಂತ್ರಿಸಿದಂತಾಗುತ್ತದೆ. ಪ್ರಾಥಮಿಕ ಹಂತದಲ್ಲಿ ವ್ಯಾಜ್ಯ ಹುಟ್ಟದಂತೆ ತಪ್ಪಿಸುವ ಉದ್ದೇಶಕ್ಕೆ ಈ ತಂತ್ರಾಂಶಗಳ ಸಂಯೋಜನೆ ಪರಿಣಾಮಕಾರಿಯಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications