ಕುಂದಗೋಳ ಉಪ ಚುನಾವಣೆಗೆ ಆಯೋಗ ಸಿದ್ಧ, 214 ಮತಗಟ್ಟೆ ಸ್ಥಾಪನೆ
ಧಾರವಾಡ, ಮೇ 16 : ಧಾರವಾಡ ಜಿಲ್ಲೆಯ ಕುಂದಗಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಚುನಾವಣಾ ಆಯೋಗ ಸಿದ್ಧವಾಗಿದೆ. 214 ಮತಗಟ್ಟೆಗಳಲ್ಲಿ ಮೇ 19ರಂದು ಮತದಾನ ನಡೆಯಲಿದೆ.
ಕುಂದಗೋಳ ಉಪಚುನಾವಣೆಗೆ ನಡೆಯುವ ಮತದಾನಕ್ಕೆ ಮುನ್ನ ಮೇ.18 ರಂದು ಕುಂದಗೋಳದ ಹರಭಟ್ಟ ಮಹಾವಿದ್ಯಾಲಯ ಆವರಣದಲ್ಲಿ ಮಸ್ಟರಿಂಗ್ ಕಾರ್ಯ ನಡೆಯಲಿದೆ. ಕ್ಷೇತ್ರದಲ್ಲಿ 1,89,435 ಮತದಾರರಿದ್ದಾರೆ. ಒಟ್ಟು 214 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಚುನಾವಣಾ ಕರ್ತವ್ಯಕ್ಕೆ 968 ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಪ್ರತಿ ಮತಗಟ್ಟೆಗೆ ಒಂದರಂತೆ ಕಂಟ್ರೋಲ್ ಯುನಿಟ್, ಬ್ಯಾಲೆಟ್ ಯುನಿಟ್ ಹಾಗೂ ವಿವಿಪ್ಯಾಟ್ ಗಳನ್ನು ಒದಗಿಸಲಾಗುತ್ತದೆ.

ಹೆಚ್ಚುವರಿಯಾಗಿ 43 ಕಂಟ್ರೋಲ್ ಯುನಿಟ್, 44 ಬ್ಯಾಲೆಟ್ ಯುನಿಟ್ ಹಾಗೂ 157ವಿವಿಪ್ಯಾಟ್ ಗಳನ್ನು ಕಾಯ್ದಿರಿಸಲಾಗಿದೆ. ತಾಂತ್ರಿಕ ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಬಿಇಎಲ್ ಇಂಜಿನಿಯರ್ಗಳನ್ನು ಒಳಗೊಂಡ ಮೂರು ತಂಡಗಳನ್ನು ರಚಿಸಲಾಗಿದೆ.
ಪೊಲೀಸ್ ಬಂದೋಬಸ್ತ್ : ಉಪಚುನಾವಣೆಗೆ ಇಬ್ಬರು ಡಿವೈಎಸ್ಪಿ, 6 ಪೊಲೀಸ್ ಇನ್ಸ್ ಪೆಕ್ಟರ್ ಗಳು , 17 ಪಿಎಸ್ ಐ , 41 ಎ ಎಸ್ ಐ, 114 ಮುಖ್ಯಪೇದೆಗಳು, 144 ಪೊಲೀಸ್ ಕಾನ್ಸ್ ಟೇಬಲ್ ಗಳು, 216 ಗೃಹರಕ್ಷಕ ದಳ ಸಿಬ್ಬಂದಿ ಮತ್ತು 68 ಜನ ಅರೆಸೇನಾಪಡೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಕ್ಷೇತ್ರದಲ್ಲಿ 38 ಸೂಕ್ಷ್ಮ ಹಾಗೂ 33 ಅತಿಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಪ್ರತಿ ಮತಗಟ್ಟೆಗೆ ಇಬ್ಬರು ಆರಕ್ಷಕ ಸಿಬ್ಬಂದಿ , ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳಿಗೆ ಅರೆಸೇನಾಪಡೆಯ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ.
ಎಲ್ಲಾ 214 ಮತಗಟ್ಟೆಗಳಿಗೆ ವಿದ್ಯುತ್, ಕುಡಿಯುವ ನೀರು, ನೆರಳು, ಶೌಚಾಲಯ, ಮತದಾನ ಮಾಡಲು ಉತ್ತಮ ಗುಣಮಟ್ಟದ ಪ್ರತ್ಯೇಕ ವಿಭಾಗ, ವಿಕಲಚೇತನ ಮತದಾರರು ಇರುವ ಕಡೆಗಳಲ್ಲಿ ಇಳಿಜಾರು ನಿರ್ಮಾಣ ಮಾಡಲಾಗಿದೆ. 25 ಮತಗಟ್ಟೆಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ.
ಎಡಗೈ ಮಧ್ಯದ ಬೆರಳಿಗೆ ಶಾಹಿ : ಏಪ್ರಿಲ್ 23ರಂದು ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಿದ ಮತದಾರರಿಗೆ ಎಡಗೈ ತೋರು ಬೆರಳಿಗೆ ಚುನಾವಣಾ ಆಯೋಗದ ಅಳಿಸಲಾಗದ ಶಾಹಿ ಹಾಕಲಾಗಿದೆ. ಆದ್ದರಿಂದ, ಮೇ 9ರಂದು ನಡೆಯುವ ಚುನಾವಣೆಯಲ್ಲಿ ಎಡಗೈ ಮಧ್ಯದ ಬೆರಳಿಗೆ ಶಾಹಿ ಹಾಕಲು ಆಯೋಗ ಸೂಚನೆ ಕೊಟ್ಟಿದೆ.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ












Click it and Unblock the Notifications