Dingaleshwar Swamiji: ಪೀಠವೋ... ಚುನಾವಣೆಯೋ... ದಿಂಗಾಲೇಶ್ವರ ಸ್ವಾಮೀಜಿ ಮುಂದೆ ಆಯ್ಕೆಯಿಟ್ಟ ಭಕ್ತರು!
ಗದಗ, ಏಪ್ರಿಲ್. 15: ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಕದನಕಣ ಸಿದ್ಧವಾಗುತ್ತಿದೆ. ಧಾರವಾಡದಿಂದ ದಿಂಗಾಲೇಶ್ವರ ಸ್ವಾಮಿ ಕಣಕ್ಕಿಳಿದಿದ್ದಾರೆ. ಲಿಂಗಾಯತ ಸಮುದಾಯವನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿ- ಧಾರವಾಡ ಕ್ಷೇತ್ರದಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಸ್ಪರ್ಧೆ ನಡೆಸುತ್ತಿದ್ದಾರೆ. ಇದು ಅವರ ಭಕ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.
ದಿಂಗಾಲೇಶ್ವರ ಸ್ವಾಮೀಜಿ ಚುನಾವಣೆಗೆ ಸ್ಪರ್ಧಿಸುವ ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸಬೇಕು. ಇಲ್ಲದಿದ್ದರೇ ಪೀಠವನ್ನು ತೊರೆಯುವಂತೆ ಆಯ್ಕೆ ನೀಡಿದ್ದಾರೆ. ಭಕ್ತರು ಏಪ್ರಿಲ್ 18 ರವರೆಗೆ ಸ್ವಾಮೀಜಿಯ ನಿರ್ಧಾರಕ್ಕಾಗಿ ಕಾಯುವುದಾಗಿ ತಿಳಿಸಿದ್ದಾರೆ. ಇಲ್ಲದೇ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದರೆ ಶಿರಹಟ್ಟಿ ಫಕೀರೇಶ್ವರ ಮಠವನ್ನು ತೊರೆಯಬೇಕು ಎಂದು ಭಕ್ತರು ತಿಳಿಸಿದ್ದಾರೆ.

ಚುನಾವಣೆ ಬೇಕಿದ್ದರೇ ಪೀಠ ತೊರೆಯಿರಿ!
ಶಿರಹಟ್ಟಿ ಫಕೀರೇಶ್ವರ ಮಠದ ಪೀಠವು ಕೋಮು ಸೌಹಾರ್ದಕ್ಕೆ ಹೆಸರುವಾಸಿಯಾಗಿದ್ದು, ಸ್ವಾಮೀಜಿಗಳು ರಾಜಕೀಯಕ್ಕೆ ಬರದೆ ಭಕ್ತರಿಗೆ ದಾರಿ ತೋರಿಸಬೇಕು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಲಿಂಗಾಯತರಿಗೆ ಅನ್ಯಾಯ ಮಾಡಿದ್ದರೆ ಅದನ್ನು ಪ್ರಜ್ಞಾವಂತರು ಬಹಿರಂಗಪಡಿಸಬೇಕು. ಚುನಾವಣೆಯಲ್ಲಿ ಸ್ಪರ್ಧಿಸುವುದು ಮಠದ ಭಕ್ತರಿಗೂ ಒಳ್ಳೆಯದಲ್ಲ ಎಂದು ಆಗ್ರಹಿಸಿದ್ದಾರೆ.
ಗದಗ, ಲಕ್ಷ್ಮೇಶ್ವರ ಸೇರಿದಂತೆ ವಿವಿಧ ಭಾಗಗಳ ಮಠದ ಗಂಗಣ್ಣ ಮಹಾಂತಶೆಟ್ಟರ, ವೆಂಕನಗೌಡ ಗೋವಿಂದಗೌಡರ ಹಾಗೂ ಇತರ ಭಕ್ತರು ಶುಕ್ರವಾರದಿಂದ ಸರಣಿ ಸಭೆ ನಡೆಸಿ ಏಪ್ರಿಲ್ 18ರವರೆಗೆ ಕಾಯಲು ನಿರ್ಧರಿಸಿದ್ದಾರೆ. ದಿಂಗಾಲೇಶ್ವರ ಸ್ವಾಮಿಗಳು ಸ್ಪರ್ಧಿಸಲು ಮುಂದಾದರೆ ಬೇರೊಬ್ಬ ಮಠಾಧೀಶರನ್ನು ಆಯ್ಕೆ ಮಾಡುವುದಾಗಿ ಭಕ್ತರು ಎಚ್ಚರಿಸಿದ್ದಾರೆ.
ಚುನಾವಣಾ ಕಣಕ್ಕೆ ಇಳಿದ ಸ್ವಾಮೀಜಿಗೆ ಹೊಸ ಸಂಕಷ್ಟ
ಭಕ್ತರ ಈ ನಡೆ ಸ್ವಾಮೀಜಿಯವರಿಗೆ ಆಘಾತ ತಂದಿದೆ. ಆದರೆ ಅವರು ಮನಸ್ಸು ಬದಲಾಯಿಸಿದರೆ ಅವರು ಇನ್ನೂ ಪೀಠದ ಮುಖ್ಯಸ್ಥರಾಗಿ ಮುಂದುವರಿಯಬಹುದು ಎಂದು ಮಠಧ ಭಕ್ತರು ಹೇಳುತ್ತಿದ್ದಾರೆ. "ಶ್ರೀಗಳು ರಾಜಕೀಯ ಪ್ರವೇಶಿಸಿ ಯಾವುದೇ ಒಂದು ಪಕ್ಷದ ಭಾಗವಾಗಬಾರದು. ಅವರು ಸಮುದಾಯದ ಜನರಿಗಾಗಿ ಇದ್ದಾರೆ. ದಿಂಗಾಲೇಶ್ವರ ಸ್ವಾಮೀಜಿಗಳು ಇತರರಿಗೆ ಮಾರ್ಗವನ್ನು ತೋರಿಸಬೇಕು ಮತ್ತು ಮಾದರಿಯಾಗಬೇಕು. ದಿಂಗಾಲೇಶ್ವರ ದರ್ಶಿಗಳಿಗೆ ಇನ್ನೂ ಸಮಯವಿದೆ ಮತ್ತು ಅವರ ನಿರ್ಧಾರವನ್ನು ಮತ್ತೆ ಪರಿಶೀಲಿಸಬೇಕು" ಎಂದು ಹಲವು ಭಕ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಚುನಾವಣೆಯನ್ನು ಸೇಡು ತೀರಿಸಿಕೊಳ್ಳಲು ಅಥವಾ ಕೋಪವನ್ನು ವ್ಯಕ್ತಪಡಿಸಲು ಬಳಸಬಾರದು. ಇದು ಪ್ರಜಾಪ್ರಭುತ್ವ. ಸ್ವಾಮೀಜಿ ತಮ್ಮ ನಿರ್ಧಾರವನ್ನು ಮರುಪರಿಶೀಲಿಸಬೇಕು ಅಥವಾ ನಾವು ಏಪ್ರಿಲ್ 18 ರಂದು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.
ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ ಮಾತನಾಡಿ, ಮಠಾಧೀಶರು ರಾಜಕೀಯ ಮಾಡದೆ ಧಾರ್ಮಿಕ ವಿಚಾರಗಳ ಬಗ್ಗೆ ಜಾಗೃತಿ ಮೂಡಿಸಬೇಕು. ದಿಂಗಾಲೇಶ್ವರ ಶ್ರೀಗಳು ಸ್ಪರ್ಧಿಸಬೇಕೆಂದರೆ ಕೇಸರಿ ವಸ್ತ್ರ ತೆಗೆದು ಪೀಠ ತೊರೆಯಬೇಕು ಎಂದು ಹೇಳಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications