Dingaleshwar Swamiji: ಪೀಠವೋ... ಚುನಾವಣೆಯೋ... ದಿಂಗಾಲೇಶ್ವರ ಸ್ವಾಮೀಜಿ ಮುಂದೆ ಆಯ್ಕೆಯಿಟ್ಟ ಭಕ್ತರು!
ಗದಗ, ಏಪ್ರಿಲ್. 15: ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಕದನಕಣ ಸಿದ್ಧವಾಗುತ್ತಿದೆ. ಧಾರವಾಡದಿಂದ ದಿಂಗಾಲೇಶ್ವರ ಸ್ವಾಮಿ ಕಣಕ್ಕಿಳಿದಿದ್ದಾರೆ. ಲಿಂಗಾಯತ ಸಮುದಾಯವನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿ- ಧಾರವಾಡ ಕ್ಷೇತ್ರದಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಸ್ಪರ್ಧೆ ನಡೆಸುತ್ತಿದ್ದಾರೆ. ಇದು ಅವರ ಭಕ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.
ದಿಂಗಾಲೇಶ್ವರ ಸ್ವಾಮೀಜಿ ಚುನಾವಣೆಗೆ ಸ್ಪರ್ಧಿಸುವ ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸಬೇಕು. ಇಲ್ಲದಿದ್ದರೇ ಪೀಠವನ್ನು ತೊರೆಯುವಂತೆ ಆಯ್ಕೆ ನೀಡಿದ್ದಾರೆ. ಭಕ್ತರು ಏಪ್ರಿಲ್ 18 ರವರೆಗೆ ಸ್ವಾಮೀಜಿಯ ನಿರ್ಧಾರಕ್ಕಾಗಿ ಕಾಯುವುದಾಗಿ ತಿಳಿಸಿದ್ದಾರೆ. ಇಲ್ಲದೇ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದರೆ ಶಿರಹಟ್ಟಿ ಫಕೀರೇಶ್ವರ ಮಠವನ್ನು ತೊರೆಯಬೇಕು ಎಂದು ಭಕ್ತರು ತಿಳಿಸಿದ್ದಾರೆ.

ಚುನಾವಣೆ ಬೇಕಿದ್ದರೇ ಪೀಠ ತೊರೆಯಿರಿ!
ಶಿರಹಟ್ಟಿ ಫಕೀರೇಶ್ವರ ಮಠದ ಪೀಠವು ಕೋಮು ಸೌಹಾರ್ದಕ್ಕೆ ಹೆಸರುವಾಸಿಯಾಗಿದ್ದು, ಸ್ವಾಮೀಜಿಗಳು ರಾಜಕೀಯಕ್ಕೆ ಬರದೆ ಭಕ್ತರಿಗೆ ದಾರಿ ತೋರಿಸಬೇಕು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಲಿಂಗಾಯತರಿಗೆ ಅನ್ಯಾಯ ಮಾಡಿದ್ದರೆ ಅದನ್ನು ಪ್ರಜ್ಞಾವಂತರು ಬಹಿರಂಗಪಡಿಸಬೇಕು. ಚುನಾವಣೆಯಲ್ಲಿ ಸ್ಪರ್ಧಿಸುವುದು ಮಠದ ಭಕ್ತರಿಗೂ ಒಳ್ಳೆಯದಲ್ಲ ಎಂದು ಆಗ್ರಹಿಸಿದ್ದಾರೆ.
ಗದಗ, ಲಕ್ಷ್ಮೇಶ್ವರ ಸೇರಿದಂತೆ ವಿವಿಧ ಭಾಗಗಳ ಮಠದ ಗಂಗಣ್ಣ ಮಹಾಂತಶೆಟ್ಟರ, ವೆಂಕನಗೌಡ ಗೋವಿಂದಗೌಡರ ಹಾಗೂ ಇತರ ಭಕ್ತರು ಶುಕ್ರವಾರದಿಂದ ಸರಣಿ ಸಭೆ ನಡೆಸಿ ಏಪ್ರಿಲ್ 18ರವರೆಗೆ ಕಾಯಲು ನಿರ್ಧರಿಸಿದ್ದಾರೆ. ದಿಂಗಾಲೇಶ್ವರ ಸ್ವಾಮಿಗಳು ಸ್ಪರ್ಧಿಸಲು ಮುಂದಾದರೆ ಬೇರೊಬ್ಬ ಮಠಾಧೀಶರನ್ನು ಆಯ್ಕೆ ಮಾಡುವುದಾಗಿ ಭಕ್ತರು ಎಚ್ಚರಿಸಿದ್ದಾರೆ.
ಚುನಾವಣಾ ಕಣಕ್ಕೆ ಇಳಿದ ಸ್ವಾಮೀಜಿಗೆ ಹೊಸ ಸಂಕಷ್ಟ
ಭಕ್ತರ ಈ ನಡೆ ಸ್ವಾಮೀಜಿಯವರಿಗೆ ಆಘಾತ ತಂದಿದೆ. ಆದರೆ ಅವರು ಮನಸ್ಸು ಬದಲಾಯಿಸಿದರೆ ಅವರು ಇನ್ನೂ ಪೀಠದ ಮುಖ್ಯಸ್ಥರಾಗಿ ಮುಂದುವರಿಯಬಹುದು ಎಂದು ಮಠಧ ಭಕ್ತರು ಹೇಳುತ್ತಿದ್ದಾರೆ. "ಶ್ರೀಗಳು ರಾಜಕೀಯ ಪ್ರವೇಶಿಸಿ ಯಾವುದೇ ಒಂದು ಪಕ್ಷದ ಭಾಗವಾಗಬಾರದು. ಅವರು ಸಮುದಾಯದ ಜನರಿಗಾಗಿ ಇದ್ದಾರೆ. ದಿಂಗಾಲೇಶ್ವರ ಸ್ವಾಮೀಜಿಗಳು ಇತರರಿಗೆ ಮಾರ್ಗವನ್ನು ತೋರಿಸಬೇಕು ಮತ್ತು ಮಾದರಿಯಾಗಬೇಕು. ದಿಂಗಾಲೇಶ್ವರ ದರ್ಶಿಗಳಿಗೆ ಇನ್ನೂ ಸಮಯವಿದೆ ಮತ್ತು ಅವರ ನಿರ್ಧಾರವನ್ನು ಮತ್ತೆ ಪರಿಶೀಲಿಸಬೇಕು" ಎಂದು ಹಲವು ಭಕ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಚುನಾವಣೆಯನ್ನು ಸೇಡು ತೀರಿಸಿಕೊಳ್ಳಲು ಅಥವಾ ಕೋಪವನ್ನು ವ್ಯಕ್ತಪಡಿಸಲು ಬಳಸಬಾರದು. ಇದು ಪ್ರಜಾಪ್ರಭುತ್ವ. ಸ್ವಾಮೀಜಿ ತಮ್ಮ ನಿರ್ಧಾರವನ್ನು ಮರುಪರಿಶೀಲಿಸಬೇಕು ಅಥವಾ ನಾವು ಏಪ್ರಿಲ್ 18 ರಂದು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.
ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ ಮಾತನಾಡಿ, ಮಠಾಧೀಶರು ರಾಜಕೀಯ ಮಾಡದೆ ಧಾರ್ಮಿಕ ವಿಚಾರಗಳ ಬಗ್ಗೆ ಜಾಗೃತಿ ಮೂಡಿಸಬೇಕು. ದಿಂಗಾಲೇಶ್ವರ ಶ್ರೀಗಳು ಸ್ಪರ್ಧಿಸಬೇಕೆಂದರೆ ಕೇಸರಿ ವಸ್ತ್ರ ತೆಗೆದು ಪೀಠ ತೊರೆಯಬೇಕು ಎಂದು ಹೇಳಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications