ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚುನಾವಣೆ ವೇಳೆ ನವಲಗುಂದ ಕಾಂಗ್ರೆಸ್ಸಿನಲ್ಲಿ ಸೂತಕ

By Mahesh
|
Google Oneindia Kannada News

ಧಾರವಾಡ, ಮೇ 09: ನವಲಗುಂದ ‌ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಪರ ಪ್ರಚಾರ ನಡೆಸುವಾಗ ಚಕ್ಕಡಿಯಿಂದ ಬಿದ್ದು, ಗಾಯಗೊಂಡಿದ್ದ ಧಾರವಾಡ ಗ್ರಾಮೀಣ ಜಿಲ್ಲಾ ‌ಅಧ್ಯಕ್ಷ ಎಚ್.ವಿ.ಮಾಡಳ್ಳಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ನವಲಗುಂದ ‌ಪಟ್ಟಣದಲ್ಲಿ ಮಾಡಳ್ಳಿ ಕಾರ್ಯಕರ್ತರೊಂದಿಗೆ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಚಕ್ಕಡಿ ಮೇಲಿಂದ ಆಯತಪ್ಪಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ನಂತರ ಅವರನ್ನು ಹುಬ್ಬಳ್ಳಿಯ ಸುಚಿರಾಯು ಆಸ್ಪತ್ರೆಗೆ ಸೇರಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಯಿತು, ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಬೆಳಗಿನ ಜಾವ 3.30ಕ್ಕೆ ನಿಧನರಾಗಿದ್ದಾರೆ.

Elections 2018 : Dharwad district Congress H.V. Madalli passes away

ಮೇ 7ರಂದು ಸಂಜೆ ನವಲಗುಂದ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಶಲವಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಪರ ಪ್ರಚಾರ ನಡೆಸುವಾಗ ಈ ದುರ್ಘಟನೆ ನಡೆದಿತ್ತು.

ಮೃತರ ಅಂತ್ಯಕ್ರಿಯೆ ಬುಧವಾರ ಸಂಜೆ 5 ಗಂಟೆ ನವಲಗುಂದ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ನೆರವೇರಲಿದೆ. ಮೃತರು ಮೂವರು ಪುತ್ರಿಯರು ಹಾಗೂ ಒಬ್ಬ ಪುತ್ರ ವೆಂಕಟೇಶ ಸೇರಿ ಅಪಾರಬಂಧು ಬಳಗವನ್ನು ಅಗಲಿದ್ದಾರೆ.

English summary
Congress leader and President of Dharwad district unit H.V. Madalli, who had suffered head injury after a fall from bullock cart, died at a private hospital here on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X