ಯಡಿಯೂರಪ್ಪಗೆ ಹುಬ್ಬಳ್ಳಿಯಲ್ಲಿ ಧೈರ್ಯ ತುಂಬಿದ ಎಚ್ಡಿಕೆ
ಹುಬ್ಬಳ್ಳಿ, ಜೂ.23 : 'ಸಿದ್ದರಾಮಯ್ಯ ಅವರು ಯಡಿಯೂರಪ್ಪ ಅವರಿಗೆ ಸುಮ್ಮನೆ ತೊಂದರೆ ಕೊಡುತ್ತಿದ್ದಾರೆ' ಎಂದು ಸೋಮವಾರ ಕುಮಾರಸ್ವಾಮಿ ಅವರು ಬಿಎಸ್ವೈ ಪರವಾಗಿ ಮಾತನಾಡಿದ್ದರು. ಇಂದು ಉಭಯ ನಾಯಕರು ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದ್ದು, ತೀವ್ರ ಕುತೂಹಲ ಕೆರಳಿಸಿದೆ. ಇಬ್ಬರು ನಾಯಕರ ನಡುವೆ ಮಹತ್ವದ ಮಾತುಕತೆ ನಡೆಯುತ್ತಿದೆ ಎಂಬ ಗುಸುಗುಸು ಆರಂಭವಾಗಿದೆ.
ಮಂಗಳವಾರ ಬೆಳಗ್ಗೆ ಹುಬ್ಬಳ್ಳಿಯ ಪ್ರವಾಸಿ ಮಂದಿರದಲ್ಲಿ ಒಂದು ಕಾಲದ ರಾಜಕೀಯ ಮಿತ್ರರಾದ ಕುಮಾರಸ್ವಾಮಿ ಮತ್ತು ಬಿ.ಎಸ್.ಯಡಿಯೂರಪ್ಪ ಭೇಟಿಯಾಗಿದ್ದರು. ಸುಮಾರು 20 ನಿಮಿಷಗಳ ಕಾಲ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ. [ಯಡಿಯೂರಪ್ಪಗೆ ಸಿದ್ದರಾಮಯ್ಯ ತೊಂದರೆ ಕೊಡುತ್ತಿದ್ದಾರೆ]

ಸೋಮವಾರ ಹುಬ್ಬಳ್ಳಿ ಪ್ರವಾಸಿಮಂದಿರದಲ್ಲಿ ಎಚ್.ಡಿ.ಕುಮಾರಸ್ವಾಮಿ ವಾಸ್ತವ್ಯ ಹೂಡಿದ್ದರು. ಬಿ.ಎಸ್.ಯಡಿಯೂರಪ್ಪ ಅವರು ಇಂದು ಬೆಳಗ್ಗೆ ಪ್ರವಾಸಿ ಮಂದಿರಕ್ಕೆ ಆಗಮಿಸಿದ್ದರು. ಜೆಡಿಎಸ್ ನಾಯಕರಾದ ಬಸವರಾಜ ಹೊರಟ್ಟಿ, ಬಂಡೆಪ್ಪ ಕಾಶೆಂಪುರ ಅವರ ಸಮ್ಮುಖದಲ್ಲಿ ಬಿಎಸ್ವೈ, ಎಚ್ಡಿಕೆ ಒಂದೇ ಸೋಫಾ ಮೇಲೆ ಕುಳಿತು ಮಾತುಕತೆ ನಡೆಸಿದ್ದಾರೆ. [ಬೆಳಗಾವಿ ಅಧಿವೇಶನಕ್ಕೂ ಮುನ್ನ ಜೆಡಿಎಸ್ ಪಾದಯಾತ್ರೆ]
ಇದು ಸೌಹಾರ್ದಯುತ ಭೇಟಿ : ಯಡಿಯೂರಪ್ಪ ಭೇಟಿ ಮಾಡಿದ ಬಳಿಕ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು 'ಇದೊಂದು ಸೌಹಾರ್ದಯುತ ಭೇಟಿ. ಯಡಿಯೂರಪ್ಪ ಅವರ ಆರೋಗ್ಯ ವಿಚಾರಿಸಿದ್ದೇನೆ. ಲೋಕಾಯುಕ್ತದಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಾಗುತ್ತಿದೆ, ಅವರಿಗೆ ಧೈರ್ಯತುಂಬಿದ್ದೇನೆ' ಎಂದು ಹೇಳಿದರು.
ಬೆಳಗಾವಿ ಅಧಿವೇಶನದಲ್ಲಿ ಜಂಟಿ ಹೋರಾಟ : ಜೂನ್ 29ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಕಬ್ಬು ಬೆಳೆಗಾರರ ಸಮಸ್ಯೆ ಬಗಹರಿಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ಧಾರವಾಡದಿಂದ ಬೆಳಗಾವಿ ತನಕ ಪಾದಯಾತ್ರೆ ಹಮ್ಮಿಕೊಂಡಿದೆ. ಜೂನ್ 25ರಿಂದ 28ರ ತನಕ ಪಾದಯಾತ್ರೆ ನಡೆಯಲಿದೆ.

ಬಿಜೆಪಿ ಕೆಲವು ದಿನಗಳ ಹಿಂದೆ ಆತ್ಮಹತ್ಯೆಗೆ ಶರಣಾದ ರೈತ ಗುರುನಾಥ ಮಲ್ಲಪ್ಪ ಚಾಪಗಾವಿ ಅವರ ಗ್ರಾಮವಾದ ಬೆಳಗಾವಿ ಜಿಲ್ಲೆಯ ಬಡಾಲ ಅಂಕಲಗಿಯಿಂದ ಸುವರ್ಣಸೌಧದವರೆಗೆ ಪಾದಯಾತ್ರೆ ನಡೆಸಲು ತೀರ್ಮಾನಿದೆ. ಬೆಳಗಾವಿಯ ಅಧಿವೇಶನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಹೋರಾಟ ಮಾಡುವ ಕುರಿತು ಉಭಯ ನಾಯಕರು ಚರ್ಚೆ ನಡೆಸಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications