ಆರ್ಟಿಐ ಕಾರ್ಯಕರ್ತರ ವಿರುದ್ಧ ಸಿಡಿದೆದ್ದ ಭೂಮಿ ಕಳೆದುಕೊಂಡ ರೈತರು
ಧಾರವಾಡ, ಡಿಸೆಂಬರ್ 15: ಭೂಸ್ವಾಧೀನಕ್ಕೊಳಪಟ್ಟ ರೈತರು, ಮಾಹಿತಿ ಹಕ್ಕಿನಡಿ ಮಾಹಿತಿ ಕೇಳುವ ಕಾರ್ಯಕರ್ತರ ವಿರುದ್ಧ ಸಿಡಿದೆದ್ದಿದ್ದಾರೆ. ಬ್ಲ್ಯಾಕ್ಮೇಲ್ ಮಾಡುವ ಆರ್ಟಿಐ ಕಾರ್ಯಕರ್ತರ ಮೇಲೆ ದೂರು ದಾಖಲಿಸಿ, ಅವರನ್ನು ಬಂಧಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಭೂಸ್ವಾಧೀನಕ್ಕೊಳಪಟ್ಟ ರೈತರು, ತಾವು ಕಳೆದುಕೊಂಡ ಜಮೀನಿಗೆ ಕೂಡಲೇ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.
ಕೆಐಎಡಿಬಿಯಿಂದ ನಮ್ಮ ಜಮೀನು ಈಗಾಗಲೇ ಸ್ವಾಧೀನಕ್ಕೊಳಪಟ್ಟಿದೆ. ಜೆಎಂಸಿ ಮಾಡಿದ ನಂತರ ರೈತರಿಗೆ ಒಮ್ಮೆಲೆ ಪರಿಹಾರ ಬಂದಿಲ್ಲ. ಇದನ್ನೇ ಮುಂದಿಟ್ಟುಕೊಂಡು ಕೆಲವೊಂದಿಷ್ಟು ಮಾಹಿತಿ ಹಕ್ಕು ಕಾರ್ಯಕರ್ತರು ಮಾಹಿತಿ ಹಕ್ಕಿನಡಿ ಮಾಹಿತಿ ಕೇಳುವುದಲ್ಲದೇ ಅಧಿಕಾರಿಗಳಿಗೆ ಹಾಗೂ ರೈತರಿಗೆ ವಾಟ್ಸಪ್ ಕಾಲ್ ಮಾಡುವ ಮೂಲಕ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ರೈತರು ಆರೋಪಿಸಿದರು.

12 ವರ್ಷದ ಹಿಂದೆ ಸ್ವಾಧೀನಕ್ಕೊಳಪಟ್ಟ ಜಮೀನಿನಲ್ಲಿ ಈಗ ಸಹಜವಾಗಿಯೇ ಕಂಪನಿಗಳು ಆಗಿವೆ. ಆದರೆ, ಕೆಐಎಡಿಬಿ ಒಂದೇ ಸಲ ರೈತರಿಗೆ ಪರಿಹಾರ ಹಣ ನೀಡಿಲ್ಲ. ಅದನ್ನು ಹಂತ ಹಂತವಾಗಿ ನೀಡುತ್ತಿದೆ. ಜೆಎಂಸಿ ಕೂಡ ಮಾಡಲಾಗಿದ್ದು, ರೈತರಿಗೆ ಇನ್ನೂ ಪರಿಹಾರ ಬರಬೇಕಿದೆ. ಆದರೆ, ಇದನ್ನೇ ಮಾಹಿತಿ ಕೇಳುವ ಆರ್ಟಿಐ ಕಾರ್ಯಕರ್ತರು, ನೀವು ರೈತರಿಗೆ ಎಷ್ಟು ಬಾರಿ ಪರಿಹಾರ ಕೊಟ್ಟಿದ್ದೀರಿ ಎಂದು ಪ್ರಶ್ನೆ ಮಾಡಿ ಅವರಿಗೆ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ.
ರೈತರಿಗೆ ವಾಟ್ಸಪ್ ಕಾಲ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ಈ ರೀತಿ ಮಾಡಿದ ಕೆಲವರ ಫೋನ್ ನಂಬರ್ ಇದ್ದು, ಅವರ ಮೇಲೆ ನಾವು ದೂರು ದಾಖಲಿಸುತ್ತೇವೆ. ಈ ಬಗ್ಗೆ ಕೂಲಂಕುಶ ತನಿಖೆ ನಡೆಸಿ, ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ದೊರಕುವಂತೆ ಮಾಡಬೇಕು ಎಂದು ರೈತರು ಒತ್ತಾಯಿಸಿದರು.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್












Click it and Unblock the Notifications