Get Updates
Get notified of breaking news, exclusive insights, and must-see stories!

ಕರುಣೆ ತೋರದ ವರುಣ: ಹಣ ಕೊಟ್ಟು ನೀರು ಖರೀದಿ, ಊಹೆಗೂ ಮೀರಿದ ರೈತರ ಕಷ್ಟದ ಬದುಕು!

ಧಾರವಾಡ, ಜುಲೈ 1: ಆಕಾಶದಲ್ಲಿ ಮೋಡಗಳು ಆವರಿಸುತ್ತಿವೆ, ಆದರೆ ಮಳೆ ಹನಿ ಮಾತ್ರ ಕಾಣುತ್ತಿಲ್ಲ. ಜಿಲ್ಲೆಯಲ್ಲಿ ಸಾಲದ ಸೋಲದಲ್ಲಿ ಸಿಲುಕಿರುವ ರೈತರು ಇದೀಗ ಮುಂಗಾರು ಮಳೆಯ ಅವಕೃಪೆಯಿಂದ ಕಂಗೆಟ್ಟಿದ್ದಾರೆ. ಕುಡಿಯುವ ನೀರಿನ ಪರದಾಟದೊಂದಿಗೆ ಈಗ ಹಣವನ್ನು ಖರ್ಚು ಮಾಡಿ ಬೆಳೆಗೆ ಟ್ಯಾಂಕರ್ ಮೂಲಕ ನೀರು ಹಾಕುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭಗೊಂಡು ಮತ್ತೊಂದು ಹಂಗಾಮಿಗೆ ಸಿದ್ಧತೆಯಾಗಬೇಕಿತ್ತು. ತುಂತುರು ಮಳೆ ಕೂಡ ಸುರಿಯದ ಪರಿಣಾಮ ಬರದ ಭಯ ಸೃಷ್ಟಿಯಾಗಿದೆ. ಸ್ಥಿತಿ ಹೀಗೆ ಮುಂದುವರಿದರೆ ರೈತನ ಪರಿಸ್ಥಿತಿ ದಯನೀಯವಾಗಲಿದೆ.

Farmers Using Paid Tanker Water For Agriculture

ಬಾರೋ ಮಳೆರಾಯ ಎಂದು ಒಣ ಬೇಸಾಯ ನಂಬಿಕೊಂಡಿರುವ ಜಿಲ್ಲೆಯ ಧಾರವಾಡ, ಗದಗ ಹಾವೇರಿ ಸೇರಿದಂತೆ ಎಲ್ಲೆಡೆ ಈಗ ಆತಂಕ ಆವರಿಸಿದೆ. ಮಳೆ ಬಂದರೆ ಮಾತ್ರ ಕೃಷಿ ಎನ್ನುವ ಕೃಷಿಕರು ಆಕಾಶದೆಡೆ ದೃಷ್ಟಿ ಬೀರಿದ್ದಾರೆ. ಜೋರಾಗಿ ಮಳೆ ಸುರಿದು ಎಲ್ಲೆಡೆ ಹಸಿರು ಕಾಣುವ ಬದಲು ಬಿಸಿಲು, ಬೀಸುತ್ತಿರುವ ಗಾಳಿ ಮಾತ್ರ ರೈತನ ಎದೆಬಡಿತ ಹೆಚ್ಚಿಸಿದೆ.

ಇನ್ನು ಜೂನ್‌ನಿಂದ ಆರಂಭಗೊಳ್ಳುವ ಮುಂಗಾರು ಮಳೆ ಸೆಪ್ಟೆಂಬರ್‌ವರೆಗೆ ಸುರಿಯುತ್ತದೆ. ಜೂನ್, ಜುಲೈನಲ್ಲಿ ಅಲ್ಪಸ್ವಲ್ಪ ಮಳೆ ಸುರಿದಿದ್ದು ಬಿಟ್ಟರೆ ಮೋಡಗಳ ಚೆಲ್ಲಾಟ ಮಾತ್ರ ಕಣ್ಣಿಗೆ ಕಟ್ಟುತ್ತಿದೆ. ಹವಾಮಾನ ಇಲಾಖೆ ಪ್ರಕಾರ ಇನ್ನು ಹದಿನೈದು ದಿನಗಳಲ್ಲಿ ಮಳೆಯಾಗಬೇಕು. ವರುಣ ಕೃಪೆ ತೋರದಿದ್ದರೆ ರೈತರು ಹದಗೊಳಿಸಿದ ಭೂಮಿಯಲ್ಲಿ ಬೆಳೆ ಕಾಣಲು ಸಾಧ್ಯವಿಲ್ಲ.

Farmers Using Paid Tanker Water For Agriculture

ಬಾಡಿದ ಬೆಳೆ ಜಿಲ್ಲೆಯಲ್ಲಿ ಬಿತ್ತನೆ ಕೈಗೊಂಡಿದ್ದ ಸಜ್ಜೆ, ಮೆಕ್ಕೆಜೋಳ ಹಾಗೂ ಸೂರ್ಯಕಾಂತಿ ಬೆಳೆಗಳು ನೀರಿಲ್ಲದೇ ಒಣಗುತ್ತಿವೆ. ರೈತರು ಮಳೆ ಬರುತ್ತದೆ ಎಂಬ ನಿರೀಕ್ಷೆಯಲ್ಲಿ ಅಲ್ಪ ಸ್ವಲ್ಪ ಮಳೆಯಾದಾಗ ಬಿತ್ತನೆ ಕೈಗೊಂಡಿದ್ದರು. ಇದೀಗ ಬೆಳೆಯುವ ಹಂತದಲ್ಲಿರುವ ಬೆಳೆ ಒಣಗಿ ಹಾನಿಯಾಗುವ ಸ್ಥಿತಿ ಎದುರಾಗಿದೆ. ನೀರಾವರಿ ಸೌಲಭ್ಯವಿರುವ ರೈತರು ಕೈಗೊಂಡ ಬಿತ್ತನೆಗೆ ಉತ್ತಮ ಫಲಿತಾಂಶ ದೊರೆತಿದೆ. ಒಣ ಬೇಸಾಯದಲ್ಲಿ ಮಾತ್ರ ನಿರೀಕ್ಷಿತ ಪ್ರಗತಿ ಇಲ್ಲದೆ ರೈತ ವರ್ಗ ಸಂಕಷ್ಟಕ್ಕೆ ಸಿಲುಕಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+