ಶ್ರೀ ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ FIR ದಾಖಲು: ಯಾಕೆ?
ಬೆಂಗಳೂರು, ಮೇ 05: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ವಿರುದ್ಧ ಸ್ಪರ್ಧಿಸಿದ್ದ ಶ್ರೀ ಶಿರಹಟ್ಟಿ ಮಠದ ಫಕೀರ ದಿಂಗಾಲೇಶ್ವರಿ ಸ್ವಾಮೀಜಿ ವಿರುದ್ಧ ಶನಿವಾರ ದೂರು ದಾಖಲಾಗಿದೆ. ಜಿಲ್ಲೆಯ ನವಲಗುಂದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಎರಡನೇ ಹಂತದಲ್ಲಿ ಕರ್ನಾಟಕ ಲೋಕಸಭಾ ಚುನಾವಣೆ 2024 ಸಂಬಂಧ ಭಾಷಣ ಮಾಡುವ ವೇಳೆ ಮಾಡಿಕೊಂಡ ಯಡವಟ್ಟಿನಿಂದಾಗಿ ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಮೇ 2ರಂದು ನವಲಗುಂದ ತಾಲೂಕು ಮಾರುಕಟ್ಟೆಯಲ್ಲಿ ಸ್ವಾಭಿಮಾನಿ ಮತದಾರರ ಸಮಾವೇಶ ನಡೆದಿತ್ತು. ಈ ವೇಳೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ವಿರುದ್ಧ ಸಮಾವೇಶದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಪ್ರಮುಖ ಭಾಷಣ ಮಾಡಿದ್ದರು. ಮಾತಿನುದ್ದಕ್ಕೂ ಪ್ರಹ್ಲಾದ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದರು.
ಈ ವೇಳೆ ವಿಭಿನ್ನ ವರ್ಗಗಳ ಮಧ್ಯೆ ವೈರತ್ವ ಮತ್ತು ದ್ವೇಷ ಭಾವನೆಯನ್ನುಂಟು ಮಾಡುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕಾರಣಕ್ಕಾಗೇ ಸ್ವಾಮೀಜಿ ವಿರುದ್ಧ ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ಕುರುಬ ಸಮುದಾಯದ 42 ವರ್ಷ ಆರ್.ಕುಮಾರಸ್ವಾಮಿ ಎಂಬುವವರು ಎಫ್ಐಆರ್ ದಾಖಲಿಸಿದ್ದಾರೆ.
ಭಾಷಣದಲ್ಲಿ ದಿಂಗಾಲೇಶ್ವರ ಸ್ವಾಮೀಜಿಗಳು, 'ಭಸ್ಮ ಹೋಗಿ ಕುಂಕುಮ ಬಂತು, ಹಾಗೂ ಭಂಡಾರ ಹೋಗಿ ಕುಂಕುಮ ಬಂತು ಶರಣು ಶರಣಾರ್ಥಿ ಹೋಗಿ ಹರಿ ಒಂ ಬಂತು' ಎಂದು ಅವರು ಭಾಷಣ ಮಾಡಿದ್ದರು. ಇದು ವಿಭಿನ್ನ ವರ್ಗಗಳ ಮಧ್ಯೆ ವೈರತ್ವ ಮತ್ತು ದ್ವೇಷ ಭಾವನೆ ಉಂಟು ಮಾಡುತ್ತದೆ ಎಂದು ಆರೋಪಿಸಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಪ್ರಕ್ಷೇತರವಾಗಿ ಕಣಕ್ಕಿಳಿದು ಶ್ರೀಗಳು ನಾಮಪತ್ರ ವಾಪಾಸ್
ಶ್ರೀ ದಿಂಗಾಲೇಶ್ವರ ಸ್ವಾಮೀಜಿಗಳು, ಧಾರವಾಡದ ಲಿಂಗಾಯತರಿಗೆ ಅಪಮಾನ, ಅನ್ಯಾಯವಾಗಿದೆ. ನೀಡಿದ ಭರವಸೆ ನಡೆದುಕೊಂಡಿಲ್ಲ ಎಂದೆಲ್ಲ ಆರೋಪಿಸಿ ಹಾಲಿ ಸಂಸದರ ವಿರುದ್ಧ ಪಕ್ಷೇತರವಾಗಿ ಇದೇ ಲೋಕಸಭಾ ಚುನಾವಣೆಗೆ ಕಣಕ್ಕಿಳಿದಿದ್ದರು.
ನಂತರ ಕೊನೆ ಹಂತದಲ್ಲಿ ನಾಮಪತ್ರ ವಾಪಾಸ್ ಪಡೆದರು. ಶ್ರೀಗಳಿಗೆ ಅವರ ಅಪಾರ ಭಕ್ತ ಸಮೂಹವೇ ಎಚ್ಚರಿಕೆ ಕೊಟ್ಟಿತ್ತು. ರಾಜಕೀಯ ಮಾಡುವುದಾದರೆ ನೀವು ಮಠದಲ್ಲಿರುವುದು ಬೇಡ ಎಂದೆಲ್ಲ ಭಕ್ತರು ಅಸಮಾಧಾನ ಹೊರಹಾಕಿದ್ದರು. ಬಳಿಕ ಶ್ರೀಗಳು ನಾಮಪತ್ರ ವಾಪಾಸ್ ಪಡೆದರು. ಆದಾಗಿಯೂ ಭಾಷಣ ವೇಳೆ ವೈಶಮ್ಯ ಭಾವನೆಯ ಭಾಷಣ ಮಾಡಿದ್ದಾರೆ ಎಂಬ ಆರೋಪ ಎದುರಿಸಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications