ಸಚಿವ ಪ್ರಲ್ಹಾದ ಜೋಶಿ ಪತ್ನಿ ಒಡೆತನದ ಫ್ಯಾಕ್ಟರಿಗೆ ಬೆಂಕಿ: 3 ಕೋಟಿ ರೂ. ಹೆಚ್ಚು ಹಾನಿ
ಬೆಂಗಳೂರು, ಅ. 27: ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಶೆರೆವಾಡ ಗ್ರಾಮದ ಬಳಿಯಿರುವ ವಿಭವ ಇಂಡಸ್ಟ್ರೀಯಲ್ಲಿ ಹೊತ್ತಿರುವ ಬೆಂಕಿ ಸುಮಾರು 10 ತಾಸಿಗೂ ಹೆಚ್ಚು ಕಾಲ ಉರಿದಿದ್ದು, ಸುಮಾರು 3 ಕೋಟಿಗೂ ಹೆಚ್ಚು ವಸ್ತುಗಳು ನಾಶವಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ದಿವಂಗತ ಅನಂತಕುಮಾರ ಸಹೋದರ ನಂದಕುಮಾರ, ಅಚುತ್ ಲಿಮ್ಹೆ, ಉದಯ ಬಾಡಕರ ಹಾಗೂ ಸಂಸದ ಹಾಗೂ ಕೇಂದ್ರದ ಸಚಿವ ಪ್ರಲ್ಹಾದ ಜೋಶಿ ಅವರ ಪತ್ನಿ ಸೇರಿ ಒಟ್ಟು ನಾಲ್ಕು ಮಾಲೀಕರ ಒಡೆತನದಲ್ಲಿರುವ ಪ್ಯಾಕ್ಟರಿಗೆ ಸರಿಸುಮಾರು ನಿನ್ನೆ ಇಳಿಸಂಜೆ ನಾಲ್ಕು ಗಂಟೆಗೆ ಬೆಂಕಿ ತಗುಲಿತ್ತು. ವಿಭವ ಇಂಡಸ್ಟ್ರೀ 555 ಮಂಕಿ ಬ್ರಾಂಡ್ ಕಸಬರಿಗೆ ಎಂದು ಪ್ರಸಿದ್ಧವಾಗಿದೆ.
ಮೊದಲು ಕಚ್ಚಾವಸ್ತುಗಳಿಗೆ ತಗುಲಿದ ಬೆಂಕಿ, ನಂತರ ಅಂದಾಜು 10 ಸಾವಿರ ಚದರ ಅಡಿಯಲ್ಲಿ ನಂತರ ಧಗಧಗನೆ ಉರಿಯಲಾರಂಭಿಸಿತು. ಬೆಂಕಿ ತಗುಲಿದ್ದು ಮೊದಲೇ ಗೊತ್ತಾಗದೇ ಇದ್ದಿದ್ದರಿಂದ ಕೆಲವೇ ಸಮಯದಲ್ಲಿ ಪ್ಯಾಕ್ಟರಿಯಲ್ಲಿ ಪೂರ್ತಿಯಾಗಿ ವ್ಯಾಪಿಸಿದೆ.

Recommended Video
ಅಗ್ನಿಶಾಮಕ ದಳ ಹಾಗೂ ಪೊಲೀಸರು ಬೆಂಕಿ ನಂದಿಸುವ ಕಾರ್ಯದಲ್ಲಿ ಮುಳುಗಿದ್ದರೂ ಸುಮಾರು 10 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದಾಗ ಬೆಂಕಿ ತಹಬದಿಗೆ ಬಂದಿದೆ. ಯಾವೊಬ್ಬ ನೌಕರರಿಗೂ ಯಾವುದೇ ತೊಂದರೆ ಆಗಿಲ್ಲ. ಬೆಂಕಿ ತಗುಲುವ ಕೆಲವೇ ಸಮಯದ ಹಿಂದ ಅನೇಕರು ಇದೇ ಪ್ಯಾಕ್ಟರಿಯಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದರು. ಬೆಂಕಿಯ ಕೆನ್ನಾಲೆ ಬಹಳ ದೂರದವರೆಗೂ ಹಬ್ಬಿದ್ದರಿಂದ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications