ಧಾರವಾಡ: 5 ದಿನಗಳ ಮಾವು ಮೇಳ, ವಿಶೇಷತೆಗಳು
ಧಾರವಾಡ, ಮೇ 14: ಮಾವು ಬೆಳೆಗಾರರು ಮತ್ತು ಜನರ ನಡುವೆ ವಹಿವಾಟಿಗೆ ಉತ್ತಮ ವೇದಿಕೆ ಕಲ್ಪಿಸಲು ಧಾರವಾಡದಲ್ಲಿ 5 ದಿನಗಳ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಲಾಗಿದೆ. ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಈ ಮೇಳವನ್ನು ಉದ್ಘಾಟಿಸಿದ್ದಾರೆ. ಈ ಮೇಳದಲ್ಲಿ 30 ಮಾವು ಬೆಳೆಗಾರರು ಮಳಿಗೆಗಳನ್ನು ಹಾಕಿದ್ದಾರೆ. ಸಾರ್ವಜನಿಕರಿಂದ ಸಹ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ.
ಮಾವು ಪ್ರದರ್ಶನ ಮತ್ತು ಮಾರಾಟ ಮೇಳ 2025 ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ದಿವ್ಯ ಪ್ರಭು, "ಮಾವು ಬೆಳೆಗಾರರಿಗೆ ಮಾವು ಮಾರಾಟ ಮತ್ತು ವಿವಿಧ ಮಾವುಗಳ ಪ್ರದರ್ಶನಕ್ಕೆ ಅವಕಾಶವಾಗುವಂತೆ 5 ದಿನಗಳವರೆಗೆ ತೋಟಗಾರಿಕೆ ಕಚೇರಿ ಆವರಣದಲ್ಲಿ ಮಾವು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದೆ" ಎಂದು ಹೇಳಿದರು.

"ಧಾರವಾಡ ನಗರದ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಮಾವು ಮೇಳವನ್ನು ಆಯೋಜಿಸಲಾಗಿದೆ. ಮಾವು ಬೆಳೆಗಾರರಿಂದ ಮತ್ತು ಸಾರ್ವಜನಿಕರಿಂದ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಮಾವು ಮೇಳವನ್ನು ಆಯೋಜಿಸಲಾಗಿದೆ. ಧಾರವಾಡ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಇದು ಸಹ ಒಂದಾಗಿದೆ" ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
"ಮಾವು ಮಾರಾಟ ಮೇಳದಿಂದ ರೈತರಿಗೆ ಮತ್ತು ಮಾವು ಬೆಳೆಗಾರರಿಗೆ ಅನುಕೂಲವಾಗುತ್ತದೆ. ಸಾರ್ವಜನಿಕರಿಗೆ ಅದರಲ್ಲೂ ಗ್ರಾಹಕರಿಗೆ ಉತ್ತಮ ಬೆಲೆಗೆ, ರುಚಿಕರವಾದ ಮಾವು ಸಿಗುವುದಕ್ಕೆ ಇದೊಂದು ಸುವರ್ಣ ಅವಕಾಶವಾಗಿದೆ" ಎಂದರು.
"ಧಾರವಾಡ ಜಿಲ್ಲೆಯಲ್ಲಿ ಮಾವು ಒಂದು ಪ್ರಮುಖ ಬೆಳೆಯಾಗಿದ್ದು, ಒಟ್ಟು 29,610 ಎಕರೆ, ಅಂದಾಜು 8,881 ರೈತರು ಮಾವು ಬೆಳೆಯುತ್ತಿದ್ದಾರೆ, ಸಾಂಪ್ರದಾಯಕವಾಗಿ 4 ಟನ್, ಎಕರೆ ಇಳುವರಿ ಬರುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಇಳುವರಿಯಲ್ಲಿ ಕುಂಠಿತವಾಗಿದ್ದು ಸುಮಾರು 1 ಟನ್, ಎಕರೆಯಂತೆ ಜಿಲ್ಲೆಯಿಂದ ಒಟ್ಟು 29,000 ಟನ್ ಇಳುವರಿಯನ್ನು ಅಂದಾಜಿಸಬಹುದಾಗಿದೆ" ಎಂದು ಜಿಲ್ಲಾಧಿಕಾರಿಗಳು ಹೇಳಿದರು.
"ಧಾರವಾಡ ಜಿಲ್ಲೆಯು ಸಾಂಪ್ರದಾಯಕವಾಗಿ ಮಾವು ಬೆಳೆಯುವ ರಾಜ್ಯದ ಮುಖ್ಯ ಭಾಗವಾಗಿದ್ದು, ಪ್ರಮಖವಾಗಿ ಧಾರವಾಡ, ಕಲಘಟಗಿ, ಹುಬ್ಬಳ್ಳಿ ಮತ್ತು ಕುಂದಗೋಳ ತಾಲೂಕುಗಳಲ್ಲಿ ಮಾವು ಬೆಳೆಯನ್ನು ಬೆಳೆಯಲು ಸೂಕ್ತವಾದ ವಾತಾವರಣವಿರುವುದರಿಂದ ಉತ್ತಮ ಮಾವು ಬೆಳೆಯನ್ನು ಬೆಳೆಯಬಹುದಾಗಿದೆ" ಎಂದರು.
"ರೈತರಿಗೆ ಒಳ್ಳೆಯ ಬೆಲೆ ಸಿಗಬೇಕು ಎಂಬ ಉದ್ದೇಶದಿಂದ ಮೇಳವನ್ನು ಆಯೋಜನೆ ಮಾಡಿದ್ದೇವೆ. ಧಾರವಾಡ ಜಿಲ್ಲೆಗೆ ಸರಕಾರದಿಂದ ಮಾವು ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ಆದೇಶ ನೀಡಿ, ಈಗಾಗಲೇ ಸುಮಾರು 7 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಉದ್ದೇಶಿತ ಕೇಂದ್ರವನ್ನು ಧಾರವಾಡ ತಾಲೂಕಿನ ಕುಂಭಾಪುರ ಫಾರ್ಮದಲ್ಲಿ ಆರಂಭಿಸಲು ನಿರ್ಧರಿಸಲಾಗಿದೆ. ಶೀಘ್ರದಲ್ಲಿ ಕಟ್ಟಡ ಕಾಮಗಾರಿ ಪ್ರಾರಂಭಿಸಲಾಗುವುದು. ಮಾವು ಅಭಿವೃದ್ಧಿ ಕೇಂದ್ರವು ಜಿಲ್ಲೆಯ ರೈತರಿಗೆ ಮಾತ್ರವಲ್ಲದೇ, ಸುತ್ತಲಿನ ಜಿಲ್ಲೆಗಳಲ್ಲಿ ಮಾವು ಬೆಳೆಯುವ ರೈತರಿಗೂ ಪ್ರಯೋಜನವಾಗಲಿದೆ" ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದರು.
ಮಾವು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಸುಂದರ ಶಾ, ಪೈರಿ, ಜಿರಗಿಮಾವು, ಉಪ್ಪಿನಕಾಯಿ ತಳಿ, ಅರ್ಕಾ ನೀಲಕಿರಣ, ಸುವರ್ಣರೇಖಾ, ಧಾರವಾಡ ರಸಪೂರಿ, ಖಾದರ, ಫರ್ನಾಡಿನ್, ಕಿಶನ ಭಾಗ್, ಫಜಲಿ, ದಿಲಪಸಂದ, ರತ್ನಾ, ಗೂಂಗ, ಹಿಮಸಾಗರ, ಆಮ್ರಪಾಲ, ಲಕನೌ ಸಫೇದ, ನಿರಂಜನ, ಸಿಂಧು, ಕಲಪಡಿ, ನೀಲಗೋವಾ, ಮಲ್ಲಿಕಾ, ಅರ್ಕಾ ಪುನೀತ, ಲಾಂಗ್ರಾ, ನಾಜೂಕ ಪಸಂದ, ಚರಕು ರಸಂ ಮುಂತಾದ ಹಲವಾರು ತಳಿಗಳ ಮಾವಿನ ಹಣ್ಣುಗಳು ಮಾರಾಟಕ್ಕಾಗಿ ಲಭ್ಯ ಇದೆ.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications