ಬಿಸಿಗಾಳಿಗೆ ಹೆದರಿ ತಂಗಾಳಿ ಅರಸಿ ಹೊರಟು ಹೆಣವಾದ್ರು!
ಹುಬ್ಬಳ್ಳಿ,ಮೇ26: ಆಂಧ್ರಪ್ರದೇಶದ ಕರ್ನೂಲ್ ಮೂಲದ ಕುಟುಂಬವೊಂದು ಬಿಸಿಲಿನ ತಾಪಕ್ಕೆ ಹೆದರಿ ತಂಗಾಳಿ ಅರಸಿ ಗೋವಾಕ್ಕೆ ಹೊರಟ್ಟಿದ್ದರು. ಅದರೆ, ಮಾರ್ಗಮಧ್ಯೆ ಹುಬ್ಬಳ್ಳಿ ಬಳಿ ಮಂಗಳವಾರ ಮುಂಜಾನೆ ಭೀಕರ ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದಾರೆ.
ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಬಿಸಿಲಿನ ರುದ್ರನರ್ತನಕ್ಕೆ ಸುಮಾರು 700ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ರಾಯಲ ಸೀಮಾ ಭಾಗದ ಜನರು ಕರ್ನಾಟಕ, ಗೋವಾ ಕಡಲ ತೀರವನ್ನು ಅರಸಿಕೊಂಡು ಬರುತ್ತಿದ್ದಾರೆ. ಆಂಧ್ರದ ಕಡಲ ಕಿನಾರೆ ಕೂಡ ಕಾದ ಕುಲುಮೆಯಂತಾಗಿದೆ.
ಹೀಗೆ ಗೋವಾಕ್ಕೆ ಹೋಗುತ್ತಿದ್ದ ಕುಟುಂಬವಿದ್ದ ಕ್ರೂಸರ್ ವಾಹನವೊಂದು ಹುಬ್ಬಳ್ಳಿ ರೈಲ್ವೆ ಗೇಟ್ ಬಳಿಯ ಬ್ರಿಡ್ಜ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಐದು ಮಂದಿ ಮೃತಪಟ್ಟಿದ್ದಾರೆ. ಇಸ್ಮಾಯಿಲ್(30), ಸದ್ದಾಂ(27), ಅಮೀರ್(18), ಸುಬಾನ(32) ಹಾಗೂ ಚಲಪತಿ (42) ಮೃತಪಟ್ಟ ದುರ್ದೈವಿಗಳು. ಮೃತರೆಲ್ಲರೂ ಆಂಧ್ರದ ಕರ್ನೂಲ್ ಮೂಲದವರಾದವರಾಗಿದ್ದಾರೆ.

ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ತೀವ್ರ ಗಾಯಗೊಂಡಿದ್ದ ಚಲಪತಿ ಎಂಬುವರನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಗಾಯಗೊಂಡ 7 ಮಂದಿಯನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ರೂಸರ್ ವಾಹನದಲ್ಲಿ ಒಟ್ಟು 12 ಜನರು ಪ್ರಯಾಣಿಸುತ್ತಿದ್ದರು. [ರಣಬಿಸಿಲಿಗೆ ಸುಡುತ್ತಿದೆ ಕರ್ನಾಟಕ]
ಅಪಘಾತಕ್ಕೆ ಕಾರಣ: ನಸುಕಿನ ಜಾವ ನಿದ್ರೆಯ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ರವೀಂದ್ರ ಪ್ರಸಾದ್ ತಿಳಿಸಿದ್ದಾರೆ.
ರಕ್ತದ ಮಡುವಿನಲ್ಲಿ ಬಿದ್ದ ನಾಲ್ಕು ಮೃತ ದೇಹಗಳನ್ನು ಪೊಲೀಸರು ಸ್ಥಳೀಯ ನಾಗರಿಕರ ಸಹಾಯದಿಂದ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಗೊಂಡವರ ಸ್ಥಿತಿ ಗಂಭೀರವಾಗಿದೆ. ಹುಬ್ಬಳ್ಳಿ ಪೂರ್ವ ಸಂಚಾರಿ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications