ಕಾಂಗ್ರೆಸ್ ಮಾಜಿ ಸಚಿವ ವಿನಯ್ ಕುಲಕರ್ಣಿ ನಾಮಪತ್ರ ಸಲ್ಲಿಕೆ
ಧಾರವಾಡ, ಏಪ್ರಿಲ್ 04: ಧಾರವಾಡ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಬಹು ಗೊಂದಲ ಮೂಡಿಸಿದ್ದು, ವಿನಯ್ ಕುಲಕರ್ಣಿ ಅವರಿಗೆ ಟಿಕೆಟ್ ತಪ್ಪಿದೆ ಎಂಬ ಸುದ್ದಿ ಕ್ಷೇತ್ರದಲ್ಲಿ ಹರಡಿತ್ತು, ಆದರೆ ಅಂತಿಮ ಸಮಯದಲ್ಲಿ ಅವರಿಗೆ ಪಕ್ಷವು ಟಿಕೆಟ್ ನೀಡಿತು.
ಕೊನೆಗೂ ಧಾರವಾಡಕ್ಕೆ ಅಭ್ಯರ್ಥಿ ಘೋಷಣೆ ಮಾಡಿದ ಕಾಂಗ್ರೆಸ್!
ವಿನಯ್ ಕುಲಕರ್ಣಿ ಅವರು ಸಿದ್ದರಾಮಯ್ಯ ಅವಧಿಯಲ್ಲಿ ಸಚಿವರಾಗಿದ್ದರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ್ದರು. ಈಗ ಮತ್ತೆ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ, ಈ ಬಾರಿ ಅವರಿಗೆ ಜೆಡಿಎಸ್ ಬೆಂಬಲ ಸಿಗಲಿದೆ.
ಧಾರವಾಡ ಕಾಂಗ್ರೆಸ್ ಟಿಕೆಟ್ ಗೊಂದಲ : ವಿನಯ್ ಕುಲಕರ್ಣಿ ಅಸಮಾಧಾನ
ಧಾರವಾಡ ಕ್ಷೇತ್ರದಲ್ಲಿ ವಿನಯ್ ಕುಲಕರ್ಣಿ ಅವರು ಬಿಜೆಪಿಯ ಗಟ್ಟಿ ಅಭ್ಯರ್ಥಿ ಪ್ರಹ್ಲಾದ ಜೋಷಿ ಅವರನ್ನು ಎದುರಿಸಲಿದ್ದಾರೆ. ಇಬ್ಬರೂ ಕಠಿಣ ಎದುರಾಳಿಗಳು ಎನ್ನಲಾಗುತ್ತಿದ್ದು, ಕಠಿಣ ಸ್ಪರ್ಧೆ ಏರ್ಪಡಲಿದೆ.