ಪಿಓಪಿ ಗಣಪತಿ ಮೂರ್ತಿ ತಯಾರಕರಿಗೆ ಶಾಕ್ ಕೊಟ್ಟ ಧಾರವಾಡ ಜಿಲ್ಲಾಡಳಿತ
ಹುಬ್ಬಳ್ಳಿ, ಆಗಸ್ಟ್, 26: ಹುಬ್ಬಳ್ಳಿ-ಧಾರವಾಡ ಮಹಾನಗರ ಹಾಗೂ ಜಿಲ್ಲೆಯಲ್ಲಿ ನಿಷೇಧಿತ ಪಿಓಪಿ ಗಣಪತಿ ವಿಗ್ರಹಗಳ ದಾಸ್ತಾನು ಇರುವ ಕುರಿತು ಜಿಲ್ಲಾಡಳಿತಕ್ಕೆ ಸಾರ್ವಜನಿಕರಿಂದ ಮಾಹಿತಿ ಲಭಿಸಿದ್ದರಿಂದ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ನಿರ್ದೇಶನದಂತೆ ಉಪವಿಭಾಗಾಧಿಕಾರಿ ಅಶೋಕ ತೆಲಿ ನೇತೃತ್ವದ ಅಧಿಕಾರಿಗಳ ತಂಡವು ನಗರದ ವಿವಿಧ ವಿಗ್ರಹ ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ ಮಾಡಿ, ಪಿಓಪಿ ವಿಗ್ರಹ ಕುರಿತು ಪರಿಶೀಲಿಸಿತು.
ಧಾರವಾಡ ಸಿ.ಬಿ.ನಗರದ ಲಿಂಗಾಯತ ಭವನ ಪಕ್ಕದ ನಿರ್ಮಾಣ ಕಟ್ಟಡದಲ್ಲಿ ಮಂಜುನಾಥ ಬೆಳಗಾಂವಕರ ಅವರು ಮಾರಾಟಕ್ಕಾಗಿ ಸಂಗ್ರಹಿಸಿದ್ದ ಗಣಪತಿ ವಿಗ್ರಹಗಳ ದಾಸ್ತಾನು ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು. ಈ ವೇಳೆ ಬಹುತೇಕ ವಿಗ್ರಹಗಳು ಪಿಓಪಿ, ಮಣ್ಣು ಮಿಶ್ರಿತ ಪಿಓಪಿ, ಕೃತಕ ಬಣ್ಣ ಲೇಪಿತ, ಉಸುಕು ಮಿಶ್ರಿತ ಪಿಓಪಿ ಗಣಪತಿ ವಿಗ್ರಹಗಳು ಕಂಡುಬಂದವು. ಆದ್ದರಿಂದ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ವಿಗ್ರಹಗಳ ಮಾದರಿ ವಸ್ತುಗಳನ್ನು ಪ್ರಯೋಗಾಲಯದ ಪರೀಕ್ಷೆಗಾಗಿ ಸಂಗ್ರಹಿಸಿದರು.

ನಂತರ ಪರಿಸರ ಭವನದ ಮುಂಭಾಗದ ಕಟ್ಟಡದ ನೆಲ ಮಹಡಿಯಲ್ಲಿ ಸಂಗ್ರಹಿಸಿದ್ದ ಪಿಓಪಿ ಗಣಪತಿ ವಿಗ್ರಹಗಳ ಕೇಂದ್ರಕ್ಕೆ ಭೇಟಿ ನೀಡಿ, ಅಧಿಕಾರಿಗಳ ತಂಡ ಪರಿಶೀಲಿಸಿತು. ಇಲ್ಲಿದ್ದ ಶೇಕಡಾ 90ರಷ್ಟು ವಿಗ್ರಹಗಳು ಪಿಓಪಿ ವಿಗ್ರಹಗಳಾಗಿದ್ದರಿಂದ ತಕ್ಷಣ ಎಲ್ಲ ವಿಗ್ರಹಗಳನ್ನು ಜಪ್ತಿ ಮಾಡಲಾಯಿತು. ನಂತರ ಅವುಗಳನ್ನು ಸಾಮಾನ್ಯ ಕೇಂದ್ರಕ್ಕೆ ಸಾಗಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಎಸಿ ಅಶೋಕ್ ತೆಲಿ ಅವರು ಸೂಚಿಸಿದರು. ಮತ್ತು ಮಾರಾಟಗಾರನ ಮೇಲೆ ಕಾನೂನು ಕ್ರಮ ಜರುಗಿಸಲು ತನಿಖೆ ಕೈಗೊಂಡು ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಹೀಗೆ ನಗರ ವಿವಿಧ ಕಡೆಗಳಲ್ಲಿನ ಮಳಿಗೆಗಳಿಗೆ ಭೇಟಿ ನೀಡಿ ಪಿಓಪಿ ಗಣಪತಿ ವಿಗ್ರಹಗಳನ್ನು ಅಧಿಕಾರಿಗಳು ಸೀಜ್ ಮಾಡಿದರು. ನಂತರ ಉಪ ವಿಭಾಗಾಧಿಕಾರಿ ಅಶೋಕ್ ತೆಲಿ ಮಾತನಾಡಿ, 2016ರ ಕಾಯಿದೆ ಪ್ರಕಾರ ಪಿಒಪಿ ಗಣಪತಿ ಬ್ಯಾನ್ ಆಗಿದೆ. ಆದರೂ ಕೆಲವಡೆ ಪಿಒಪಿ ಬಂದಿವೆ ಅಂತಾ ಮಾಹಿತಿ ಇದೆ. ಈಗಾಗಲೇ ಸಾಕಷ್ಟು ಜಾಗೃತಿ ಮೂಡಿಸಿದ್ದೇವೆ ಎಂದರು.
ಕೆಲವೆಡೆ ಪಿಒಪಿಯಿಂದ ತಯಾರಾದ ವಿಗ್ರಹಗಳು ಇರುವ ಮಾಹಿತಿಗಳು ಬರುತ್ತಿವೆ. ಅಧಿಕಾರಿಗಳ ತಂಡ ಖುದ್ದು ಪರಿಶೀಲನೆ ಮಾಡುತ್ತಿದೆ. ಪೊಲೀಸ್, ಪಾಲಿಕೆ ಅಧಿಕಾರಿಗಳು, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಸಹಯೋಗದಲ್ಲಿ ಪರಿಶೀಲನೆ ಕಾರ್ಯ ನಡೆಯುತ್ತಿದೆ. ಜನರು ಸಹ ಜಾಗೃತರಾಗಿ ಪಿಒಪಿ ಗಣಪತಿ ವಿಗ್ರಹ ತೆಗೆದುಕೊಳ್ಳಬಾರದು ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿ ಜಗದೀಶ ಐ.ಎಚ್. ಅವರು ಮಾತನಾಡಿ, ಮಣ್ಣಿನ ವಿಗ್ರಹ ಭಾರ ಇರುತ್ತವೆ. ಪಿಒಪಿ ಗಣಪತಿ ಭಾರ ಇರುವುದಿಲ್ಲ. ತೂಕದ ವ್ಯತ್ಯಾಸದಲ್ಲಿ ಗೊತ್ತಾಗುತ್ತದೆ. ಪಿಒಪಿ ಅಥವಾ ಮಣ್ಣಿನ ವಿಗ್ರಹ ಕುರಿತು ಸಂಶಯ ಬಂದಲ್ಲಿ ವಿಗ್ರಹವನ್ನು ಪರೀಕ್ಷೆ ಮಾಡಲು ಮಾಹಿತಿ ಪಡೆಯುತ್ತೇವೆ. ನಂತರ ಪ್ರಯೋಗಾಲಯದಲ್ಲಿ ಪರೀಕ್ಷಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಮಹಾನಗರ ಪಾಲಿಕೆಯ ಪರಿಸರ ಅಧಿಕಾರಿ ಸಂತೋಷ್ ಮಾತನಾಡಿ, ಪಿಒಪಿ ವಿಗ್ರಹಗಳ ಮಾರಾಟ, ಸಾಗಾಣಿಕೆ ಆಗದಂತೆ ಪಾಲಿಕೆಯ ಆಯುಕ್ತರ ನಿರ್ದೇಶನದಂತೆ ಅಧಿಕಾರಿ ಮತ್ತು ಸಿಬ್ಬಂದಿಯ ತಂಡಗಳನ್ನು ರಚಿಸಲಾಗಿದೆ. ಪಿಓಪಿ ವಿಗ್ರಹಗಳನ್ನು ಜಪ್ತಿ ಮಾಡಿ, ಸಂಬಂಧಿಸಿದವರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ದಾಳಿ ವೇಳೆ ಕಂದಾಯ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ, ಮಹಾನಗರ ಪಾಲಿಕೆ ಅಧಿಕಾರಿ ಮತ್ತು ಸಿಬ್ಬಂದಿಗಳು ಸೇರಿದಂತೆ ಮತ್ತಿತರರು ಇದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications