ಧಾರವಾಡ: 25 ಗಣೇಶ ಕರಗಿಸಲು ತೆಗೆದುಕೊಂಡಿದ್ದು ಕೇವಲ 2 ಗಂಟೆ
ಧಾರವಾಡ, ಆಗಸ್ಟ್ 27: ಧಾರವಾಡ ಜಿಲ್ಲೆ ಕೆಲಗೇರಿಯ ಗಾಯತ್ರಿಪುರಂನಲ್ಲಿ ಪರಿಸರ ಸ್ನೇಹಿ ಕಲಾವಿದ ಮಂಜುನಾಥ್ ಹಿರೇಮಠ ಎಂಬುವವರು ಕೇವಲ ಎರಡು ಗಂಟೆಗಳಲ್ಲಿ 25 ಸಾರ್ವಜನಿಕ ಗಣೇಶಗಳನ್ನು ಕರಗಿಸಿದ್ದಾರೆ.
Recommended Video
ಮೂರು ಟ್ರ್ಯಾಕ್ಟರ್ ಟ್ರೈಲರ್ ಗಳನ್ನು ಬಳಸಿಕೊಂಡು, ಗಣೇಶ ಮೂರ್ತಿ ಕರಗಿಸಲು ಕೇವಲ 1 ಸಾವಿರ ಲೀಟರ್ ನೀರನ್ನು ಬಳಕೆ ಮಾಡಿಕೊಳ್ಳಲಾಗಿದೆ. ಪೈಪ್ ಮೂಲಕ ತುಂತುರು ನೀರು ಬಿಡುವ ಮೂಲಕ ಮಣ್ಣಿನ ಗಣೇಶನನ್ನು ಕರಗಿಸಲಾಯಿತು.
ಗಣೇಶ ಮೂರ್ತಿ ಕರಗಿಸಿದ ನಂತರ ಆ ಮಣ್ಣಿನಲ್ಲಿ ತುಳಸಿ ಗಿಡ ನೆಟ್ಟು, ಪ್ರಸಾದ ರೂಪದಲ್ಲಿ ಭಕ್ತರಿಗೆ ವಿತರಿಸುವ ಮೂಲಕ ಕಲಾವಿದ ಮಂಜುನಾಥ್ ಹಿರೇಮಠ ಜನರ ಗಮನ ಸೆಳೆದಿದ್ದಾರೆ. ಜಲ ಮೂಲಗಳು ಮಲೀನವಾಗುವುದನ್ನು ತಡೆಯಲು ಕಲಾವಿದ ಮಂಜುನಾಥ್ ಹಿರೇಮಠ ಅವರು ಈ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.

ಪ್ರಾತಿನಿಧಿಕ ಚಿತ್ರ
ಇದೇ ವೇಳೆ ಧಾರವಾಡದ ದೊಡ್ಡನಾಯಕನಕೊಪ್ಪ ಬಡಾವಣೆಯ ಜನಜಾಗೃತಿ ಅಧ್ಯಕ್ಷ ಬಸವರಾಜ ಕೊರವರ ಅವರು ನಿರ್ಮಿಸಿದ ಮಣ್ಣಿನ ಹೊಂಡದಲ್ಲಿ ಬುಧವಾರ ಸಂಜೆ 60 ಕ್ಕೂ ಹೆಚ್ಚು ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಯಿತು.
ಧಾರವಾಡದ ವನವಾಸಿ ರಾಮಮಂದಿರದಲ್ಲಿ ವೀರ ಸಾವರ್ಕರ್ ಗೆಳೆಯರ ಬಳಗ, ರೋಟರಿ ಕ್ಲಬ್, ಮಾಲಿನ್ಯ ನಿಯಂತ್ರಣ ಮಂಡಳಿ ಹೀಗೆ ಇನ್ನೂ ಹಲವು ಕಡೆಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಇಂತಹ ಪರಿಸರ ಸ್ನೇಹಿ ಕೆಲಸಗಳು ಸಮಾಜದಲ್ಲಿ ಇನ್ನು ಹೆಚ್ಚು ಹೆಚ್ಚು ನಡೆಯಲಿ ಎನ್ನು ಪರಿಸರ ಪ್ರೇಮಿಗಳ ಆಶಯವಾಗಿದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications