ಧಾರವಾಡ: 25 ಗಣೇಶ ಕರಗಿಸಲು ತೆಗೆದುಕೊಂಡಿದ್ದು ಕೇವಲ 2 ಗಂಟೆ
ಧಾರವಾಡ, ಆಗಸ್ಟ್ 27: ಧಾರವಾಡ ಜಿಲ್ಲೆ ಕೆಲಗೇರಿಯ ಗಾಯತ್ರಿಪುರಂನಲ್ಲಿ ಪರಿಸರ ಸ್ನೇಹಿ ಕಲಾವಿದ ಮಂಜುನಾಥ್ ಹಿರೇಮಠ ಎಂಬುವವರು ಕೇವಲ ಎರಡು ಗಂಟೆಗಳಲ್ಲಿ 25 ಸಾರ್ವಜನಿಕ ಗಣೇಶಗಳನ್ನು ಕರಗಿಸಿದ್ದಾರೆ.
Recommended Video
ಮೂರು ಟ್ರ್ಯಾಕ್ಟರ್ ಟ್ರೈಲರ್ ಗಳನ್ನು ಬಳಸಿಕೊಂಡು, ಗಣೇಶ ಮೂರ್ತಿ ಕರಗಿಸಲು ಕೇವಲ 1 ಸಾವಿರ ಲೀಟರ್ ನೀರನ್ನು ಬಳಕೆ ಮಾಡಿಕೊಳ್ಳಲಾಗಿದೆ. ಪೈಪ್ ಮೂಲಕ ತುಂತುರು ನೀರು ಬಿಡುವ ಮೂಲಕ ಮಣ್ಣಿನ ಗಣೇಶನನ್ನು ಕರಗಿಸಲಾಯಿತು.
ಗಣೇಶ ಮೂರ್ತಿ ಕರಗಿಸಿದ ನಂತರ ಆ ಮಣ್ಣಿನಲ್ಲಿ ತುಳಸಿ ಗಿಡ ನೆಟ್ಟು, ಪ್ರಸಾದ ರೂಪದಲ್ಲಿ ಭಕ್ತರಿಗೆ ವಿತರಿಸುವ ಮೂಲಕ ಕಲಾವಿದ ಮಂಜುನಾಥ್ ಹಿರೇಮಠ ಜನರ ಗಮನ ಸೆಳೆದಿದ್ದಾರೆ. ಜಲ ಮೂಲಗಳು ಮಲೀನವಾಗುವುದನ್ನು ತಡೆಯಲು ಕಲಾವಿದ ಮಂಜುನಾಥ್ ಹಿರೇಮಠ ಅವರು ಈ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.

ಪ್ರಾತಿನಿಧಿಕ ಚಿತ್ರ
ಇದೇ ವೇಳೆ ಧಾರವಾಡದ ದೊಡ್ಡನಾಯಕನಕೊಪ್ಪ ಬಡಾವಣೆಯ ಜನಜಾಗೃತಿ ಅಧ್ಯಕ್ಷ ಬಸವರಾಜ ಕೊರವರ ಅವರು ನಿರ್ಮಿಸಿದ ಮಣ್ಣಿನ ಹೊಂಡದಲ್ಲಿ ಬುಧವಾರ ಸಂಜೆ 60 ಕ್ಕೂ ಹೆಚ್ಚು ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಯಿತು.
ಧಾರವಾಡದ ವನವಾಸಿ ರಾಮಮಂದಿರದಲ್ಲಿ ವೀರ ಸಾವರ್ಕರ್ ಗೆಳೆಯರ ಬಳಗ, ರೋಟರಿ ಕ್ಲಬ್, ಮಾಲಿನ್ಯ ನಿಯಂತ್ರಣ ಮಂಡಳಿ ಹೀಗೆ ಇನ್ನೂ ಹಲವು ಕಡೆಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಇಂತಹ ಪರಿಸರ ಸ್ನೇಹಿ ಕೆಲಸಗಳು ಸಮಾಜದಲ್ಲಿ ಇನ್ನು ಹೆಚ್ಚು ಹೆಚ್ಚು ನಡೆಯಲಿ ಎನ್ನು ಪರಿಸರ ಪ್ರೇಮಿಗಳ ಆಶಯವಾಗಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications